• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಗಪುರದ ನಷ್ಟ ಕಟ್ಟಿ, ತಪ್ಪಿದರೆ ಆಸ್ತಿ ಮುಟ್ಟುಗೋಲು – ಪಡ್ನವೀಸ್ ಎಚ್ಚರಿಕೆ!

Tulunadu News Posted On March 22, 2025
0


0
Shares
  • Share On Facebook
  • Tweet It

ಮಹಾರಾಷ್ಟದ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ನಾಗಪುರದ ಕೋಮು ಗಲಭೆಯ ಬಗ್ಗೆ ತೀಕ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ನಾಗಪುರದಲ್ಲಿ ಅಂಗಡಿ ಮುಂಗಟ್ಟುಗಳಿಗೆ, ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಅದರ ನಷ್ಟವನ್ನು ಅವರೇ ಭರಿಸಬೇಕು. ನಷ್ಟ ಭರಿಸಲು ತಯಾರಿಲ್ಲದವರ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಮತ್ತು ಅಗತ್ಯಬಿದ್ದರೆ ಅಂತವರ ಅಕ್ರಮ ಕಟ್ಟಡಗಳಿಗೆ ಬುಲ್ಡೋಜರ್ ಪ್ರಯೋಗ ಬಳಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಪೊಲೀಸರು 68 ಸೋಶಿಯಲ್ ಮೀಡಿಯಾ ಪೋಸ್ಟ್ ಗಳನ್ನು ಜಾಲಾಡಿದ್ದು, ಅವುಗಳಿಂದಲೇ ಸುಳ್ಳು ಸುದ್ದಿ ಹರಡಿ ಇಷ್ಟೆಲ್ಲಾ ಆವಾಂತರಗಳಿಗೆ ಕಾರಣವಾಯಿತು ಎಂದು ಪತ್ತೆ ಹಚ್ಚಿದ್ದಾರೆ. ಈಗ ಅಂತವರ ವಿರುದ್ಧ ಕಾನೂನು ಪ್ರಕ್ರಿಯೆ ತೀವ್ರಗೊಳಿಸಲು ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗುವ ಪೋಸ್ಟ್ ಗಳನ್ನು ಹಂಚಿಕೊಳ್ಳುವುದನ್ನು ಅಪರಾಧಕ್ಕೆ ಸಮ ಎಂದು ಎಚ್ಚರಿಕೆ ಕೊಟ್ಟಿರುವ ಪೊಲೀಸ್ ಇಲಾಖೆ, ಧಾರ್ಮಿಕ ಸಂದೇಶಗಳಿಂದ ಯಾವುದೇ ದುರ್ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಜನರ ಮೇಲಿದೆ ಎಂದಿದೆ.

ಈ ಎಲ್ಲಾ ಘಟನೆಗಳ ಹೊರತಾಗಿ ಪ್ರಧಾನಿ ನರೇಂದ್ರ ಮೋದಿಯವರ ನಾಗಪುರ ಭೇಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ ಪಡ್ನವೀಸ್ ಅದಕ್ಕಾಗಿ ಎಲ್ಲಾ ಸೂಕ್ತ ಭದ್ರತೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಈ ನಡುವೆ ಆರೋಪಿಗಳನ್ನು ಹೆಡೆಮುರಿ ಕಟ್ಟುವ ಮಹಾರಾಷ್ಟ್ರ ಪೊಲೀಸರ ಕ್ರಮ ಬಿರುಸು ಪಡೆದಿದ್ದು, ಇಲ್ಲಿಯ ತನಕ 100 ವ್ಯಕ್ತಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಅಂತವರ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗುತ್ತಿದ್ದು, ಅವರ ಆಸ್ತಿಗಳ ಬಗ್ಗೆ ದಾಖಲೆ ಪರಿಶೀಲಿಸುವ ಕಾರ್ಯವೂ ಪ್ರಗತಿಯಲ್ಲಿದೆ.
ಇನ್ನು ಔರಂಗಾಜೇಬನ ಸಮಾಧಿಯ ವಿವಾದದಿಂದ ಕೋಮು ಗಲಭೆ ಬುಗಿಲೆದ್ದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ತರಹೇವಾರಿ ಕಮೆಂಟ್ ಬಗ್ಗೆನೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಸುಳ್ಳು ಸುದ್ದಿ ಹರಡಿಸಿ ಗಲಭೆಗೆ ಕಾರಣವಾಗುವವರ ಬಗ್ಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search