• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

40 ವರ್ಷಗಳಿಂದ ಈ ದೇವಳದಿಂದ ನಡೆಯುತ್ತಿದೆ ಇಫ್ತಾರ್ ಆಚರಣೆ!

Tulunadu News Posted On March 22, 2025
0


0
Shares
  • Share On Facebook
  • Tweet It

ರಮ್ಜಾನ್ ಮುಸ್ಲಿಮರ ಪವಿತ್ರ ಮಾಸ. ಈ ಸಮಯದಲ್ಲಿ ಸೂರ್ಯಾಸ್ತಮಾನದ ನಂತರ ಉಪವಾಸ ಮುರಿದು ಆಹಾರ ಸೇವಿಸುವ ಪದ್ಧತಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರಲ್ಲಿ ವಿಶೇಷವೇನಿಲ್ಲ. ಇದು ದೇಶ, ವಿದೇಶದಲ್ಲಿ ನಡೆದುಕೊಂಡು ಬಂದಿದೆ. ಆದರೆ ಮುಸ್ಲಿಮರ ಇಫ್ತಾರ್ ಕೂಟಕ್ಕೆ ದೇವಾಲಯವೊಂದು ಆಹಾರ ಪೂರೈಸುತ್ತಿದೆ ಎನ್ನುವುದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಅಷ್ಟಕ್ಕೂ ಈ ದೇವಸ್ಥಾನ ಇರುವುದು ಬೇರೆ ಎಲ್ಲಿಯೂ ಅಲ್ಲ. ತಮಿಳುನಾಡಿನ ರಾಜಧಾನಿ ಚೆನೈ ನಗರದ ಹೃದಯಭಾಗದಲ್ಲಿ.

ಈ ದೇವಸ್ಥಾನ ಚೆನೈನ ಮೈಲಾಪುರ್ ಎನ್ನುವ ಏರಿಯಾದಲ್ಲಿ ಇದೆ. ಕಳೆದ 40 ವರ್ಷಗಳಿಂದ ಪ್ರತಿ ರಮ್ಜಾನ್ ಮಾಸದಲ್ಲಿ ನಿತ್ಯ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸಲಾಗುತ್ತದೆ. ದಾದಾ ರತನಚಂದ್ ಎನ್ನುವ ನಿರಾಶ್ರಿತ ವ್ಯಕ್ತಿ ಭಾರತ ವಿಭಜನೆಯ ಸಂದರ್ಭದಲ್ಲಿ ಚೆನೈನಲ್ಲಿ ಆಶ್ರಯ ಪಡೆದುಕೊಂಡಿದ್ದಾಗ ಈ ದೇವಸ್ಥಾನವನ್ನು ನಿರ್ಮಿಸಿದ್ದರು. ನಂತರ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸುವ ಸಂಪ್ರದಾಯವನ್ನು ಆರಂಭಿಸಿದ್ದರು. ಅದು ಈಗ 40 ವರ್ಷಗಳಿಂದ ಜಾರಿಯಲ್ಲಿದೆ.

ಇಲ್ಲಿನ ಸ್ವಯಂ ಸೇವಕರು ನಿತ್ಯ ಬೆಳಿಗ್ಗೆ 7.30 ರಿಂದ ಆಹಾರ ತಯಾರಿಸುವ ಕೆಲಸಕಾರ್ಯವನ್ನು ಆರಂಭಿಸುತ್ತಾರೆ. ನಿತ್ಯ 1200 ಜನರಿಗೆ ಆಹಾರ ತಯಾರಿಸಲಾಗುತ್ತದೆ. ಅದರಲ್ಲಿ ಬಿರಿಯಾನಿ, ಫ್ರೈಡ್ ರೈಸ್, ಉಪ್ಪಿನಕಾಯಿ, ಕೇಸರಿ ಹಾಲು ಮತ್ತು ಹಣ್ಣುಹಂಪಲುಗಳು ಸೇರಿರುತ್ತವೆ. ದೇವಳದಲ್ಲಿ ತಯಾರಿಸಿದ ಆಹಾರವನ್ನು ಹತ್ತಿರದ ಮಸೀದಿಯಲ್ಲಿ ಅಲ್ಲಿ ಆಗಮಿಸಿದ ಜನರಿಗೆ ಹಂಚಲಾಗುತ್ತದೆ. ಅದರೊಂದಿಗೆ ಆಹಾರವನ್ನು ಮನೆಗಳಿಗೂ ಹಂಚುವ ಕ್ರಮ ಚಾಲ್ತಿಯಲ್ಲಿದೆ.

ಈ ದೇವಸ್ಥಾನ ಎಲ್ಲಾ ಧರ್ಮ, ಮತದವರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಇಲ್ಲಿನ ವಿವಿಧ ಮತ, ಸಂಪ್ರದಾಯದವರು ಅಭಿಪ್ರಾಯ ಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search