• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

40 ವರ್ಷಗಳಿಂದ ಈ ದೇವಳದಿಂದ ನಡೆಯುತ್ತಿದೆ ಇಫ್ತಾರ್ ಆಚರಣೆ!

Tulunadu News Posted On March 22, 2025
0


0
Shares
  • Share On Facebook
  • Tweet It

ರಮ್ಜಾನ್ ಮುಸ್ಲಿಮರ ಪವಿತ್ರ ಮಾಸ. ಈ ಸಮಯದಲ್ಲಿ ಸೂರ್ಯಾಸ್ತಮಾನದ ನಂತರ ಉಪವಾಸ ಮುರಿದು ಆಹಾರ ಸೇವಿಸುವ ಪದ್ಧತಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರಲ್ಲಿ ವಿಶೇಷವೇನಿಲ್ಲ. ಇದು ದೇಶ, ವಿದೇಶದಲ್ಲಿ ನಡೆದುಕೊಂಡು ಬಂದಿದೆ. ಆದರೆ ಮುಸ್ಲಿಮರ ಇಫ್ತಾರ್ ಕೂಟಕ್ಕೆ ದೇವಾಲಯವೊಂದು ಆಹಾರ ಪೂರೈಸುತ್ತಿದೆ ಎನ್ನುವುದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಅಷ್ಟಕ್ಕೂ ಈ ದೇವಸ್ಥಾನ ಇರುವುದು ಬೇರೆ ಎಲ್ಲಿಯೂ ಅಲ್ಲ. ತಮಿಳುನಾಡಿನ ರಾಜಧಾನಿ ಚೆನೈ ನಗರದ ಹೃದಯಭಾಗದಲ್ಲಿ.

ಈ ದೇವಸ್ಥಾನ ಚೆನೈನ ಮೈಲಾಪುರ್ ಎನ್ನುವ ಏರಿಯಾದಲ್ಲಿ ಇದೆ. ಕಳೆದ 40 ವರ್ಷಗಳಿಂದ ಪ್ರತಿ ರಮ್ಜಾನ್ ಮಾಸದಲ್ಲಿ ನಿತ್ಯ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸಲಾಗುತ್ತದೆ. ದಾದಾ ರತನಚಂದ್ ಎನ್ನುವ ನಿರಾಶ್ರಿತ ವ್ಯಕ್ತಿ ಭಾರತ ವಿಭಜನೆಯ ಸಂದರ್ಭದಲ್ಲಿ ಚೆನೈನಲ್ಲಿ ಆಶ್ರಯ ಪಡೆದುಕೊಂಡಿದ್ದಾಗ ಈ ದೇವಸ್ಥಾನವನ್ನು ನಿರ್ಮಿಸಿದ್ದರು. ನಂತರ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸುವ ಸಂಪ್ರದಾಯವನ್ನು ಆರಂಭಿಸಿದ್ದರು. ಅದು ಈಗ 40 ವರ್ಷಗಳಿಂದ ಜಾರಿಯಲ್ಲಿದೆ.

ಇಲ್ಲಿನ ಸ್ವಯಂ ಸೇವಕರು ನಿತ್ಯ ಬೆಳಿಗ್ಗೆ 7.30 ರಿಂದ ಆಹಾರ ತಯಾರಿಸುವ ಕೆಲಸಕಾರ್ಯವನ್ನು ಆರಂಭಿಸುತ್ತಾರೆ. ನಿತ್ಯ 1200 ಜನರಿಗೆ ಆಹಾರ ತಯಾರಿಸಲಾಗುತ್ತದೆ. ಅದರಲ್ಲಿ ಬಿರಿಯಾನಿ, ಫ್ರೈಡ್ ರೈಸ್, ಉಪ್ಪಿನಕಾಯಿ, ಕೇಸರಿ ಹಾಲು ಮತ್ತು ಹಣ್ಣುಹಂಪಲುಗಳು ಸೇರಿರುತ್ತವೆ. ದೇವಳದಲ್ಲಿ ತಯಾರಿಸಿದ ಆಹಾರವನ್ನು ಹತ್ತಿರದ ಮಸೀದಿಯಲ್ಲಿ ಅಲ್ಲಿ ಆಗಮಿಸಿದ ಜನರಿಗೆ ಹಂಚಲಾಗುತ್ತದೆ. ಅದರೊಂದಿಗೆ ಆಹಾರವನ್ನು ಮನೆಗಳಿಗೂ ಹಂಚುವ ಕ್ರಮ ಚಾಲ್ತಿಯಲ್ಲಿದೆ.

ಈ ದೇವಸ್ಥಾನ ಎಲ್ಲಾ ಧರ್ಮ, ಮತದವರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಇಲ್ಲಿನ ವಿವಿಧ ಮತ, ಸಂಪ್ರದಾಯದವರು ಅಭಿಪ್ರಾಯ ಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search