• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

40 ವರ್ಷಗಳಿಂದ ಈ ದೇವಳದಿಂದ ನಡೆಯುತ್ತಿದೆ ಇಫ್ತಾರ್ ಆಚರಣೆ!

Tulunadu News Posted On March 22, 2025
0


0
Shares
  • Share On Facebook
  • Tweet It

ರಮ್ಜಾನ್ ಮುಸ್ಲಿಮರ ಪವಿತ್ರ ಮಾಸ. ಈ ಸಮಯದಲ್ಲಿ ಸೂರ್ಯಾಸ್ತಮಾನದ ನಂತರ ಉಪವಾಸ ಮುರಿದು ಆಹಾರ ಸೇವಿಸುವ ಪದ್ಧತಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರಲ್ಲಿ ವಿಶೇಷವೇನಿಲ್ಲ. ಇದು ದೇಶ, ವಿದೇಶದಲ್ಲಿ ನಡೆದುಕೊಂಡು ಬಂದಿದೆ. ಆದರೆ ಮುಸ್ಲಿಮರ ಇಫ್ತಾರ್ ಕೂಟಕ್ಕೆ ದೇವಾಲಯವೊಂದು ಆಹಾರ ಪೂರೈಸುತ್ತಿದೆ ಎನ್ನುವುದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಅಷ್ಟಕ್ಕೂ ಈ ದೇವಸ್ಥಾನ ಇರುವುದು ಬೇರೆ ಎಲ್ಲಿಯೂ ಅಲ್ಲ. ತಮಿಳುನಾಡಿನ ರಾಜಧಾನಿ ಚೆನೈ ನಗರದ ಹೃದಯಭಾಗದಲ್ಲಿ.

ಈ ದೇವಸ್ಥಾನ ಚೆನೈನ ಮೈಲಾಪುರ್ ಎನ್ನುವ ಏರಿಯಾದಲ್ಲಿ ಇದೆ. ಕಳೆದ 40 ವರ್ಷಗಳಿಂದ ಪ್ರತಿ ರಮ್ಜಾನ್ ಮಾಸದಲ್ಲಿ ನಿತ್ಯ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸಲಾಗುತ್ತದೆ. ದಾದಾ ರತನಚಂದ್ ಎನ್ನುವ ನಿರಾಶ್ರಿತ ವ್ಯಕ್ತಿ ಭಾರತ ವಿಭಜನೆಯ ಸಂದರ್ಭದಲ್ಲಿ ಚೆನೈನಲ್ಲಿ ಆಶ್ರಯ ಪಡೆದುಕೊಂಡಿದ್ದಾಗ ಈ ದೇವಸ್ಥಾನವನ್ನು ನಿರ್ಮಿಸಿದ್ದರು. ನಂತರ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸುವ ಸಂಪ್ರದಾಯವನ್ನು ಆರಂಭಿಸಿದ್ದರು. ಅದು ಈಗ 40 ವರ್ಷಗಳಿಂದ ಜಾರಿಯಲ್ಲಿದೆ.

ಇಲ್ಲಿನ ಸ್ವಯಂ ಸೇವಕರು ನಿತ್ಯ ಬೆಳಿಗ್ಗೆ 7.30 ರಿಂದ ಆಹಾರ ತಯಾರಿಸುವ ಕೆಲಸಕಾರ್ಯವನ್ನು ಆರಂಭಿಸುತ್ತಾರೆ. ನಿತ್ಯ 1200 ಜನರಿಗೆ ಆಹಾರ ತಯಾರಿಸಲಾಗುತ್ತದೆ. ಅದರಲ್ಲಿ ಬಿರಿಯಾನಿ, ಫ್ರೈಡ್ ರೈಸ್, ಉಪ್ಪಿನಕಾಯಿ, ಕೇಸರಿ ಹಾಲು ಮತ್ತು ಹಣ್ಣುಹಂಪಲುಗಳು ಸೇರಿರುತ್ತವೆ. ದೇವಳದಲ್ಲಿ ತಯಾರಿಸಿದ ಆಹಾರವನ್ನು ಹತ್ತಿರದ ಮಸೀದಿಯಲ್ಲಿ ಅಲ್ಲಿ ಆಗಮಿಸಿದ ಜನರಿಗೆ ಹಂಚಲಾಗುತ್ತದೆ. ಅದರೊಂದಿಗೆ ಆಹಾರವನ್ನು ಮನೆಗಳಿಗೂ ಹಂಚುವ ಕ್ರಮ ಚಾಲ್ತಿಯಲ್ಲಿದೆ.

ಈ ದೇವಸ್ಥಾನ ಎಲ್ಲಾ ಧರ್ಮ, ಮತದವರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಇಲ್ಲಿನ ವಿವಿಧ ಮತ, ಸಂಪ್ರದಾಯದವರು ಅಭಿಪ್ರಾಯ ಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search