• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

40 ವರ್ಷಗಳಿಂದ ಈ ದೇವಳದಿಂದ ನಡೆಯುತ್ತಿದೆ ಇಫ್ತಾರ್ ಆಚರಣೆ!

Tulunadu News Posted On March 22, 2025
0


0
Shares
  • Share On Facebook
  • Tweet It

ರಮ್ಜಾನ್ ಮುಸ್ಲಿಮರ ಪವಿತ್ರ ಮಾಸ. ಈ ಸಮಯದಲ್ಲಿ ಸೂರ್ಯಾಸ್ತಮಾನದ ನಂತರ ಉಪವಾಸ ಮುರಿದು ಆಹಾರ ಸೇವಿಸುವ ಪದ್ಧತಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರಲ್ಲಿ ವಿಶೇಷವೇನಿಲ್ಲ. ಇದು ದೇಶ, ವಿದೇಶದಲ್ಲಿ ನಡೆದುಕೊಂಡು ಬಂದಿದೆ. ಆದರೆ ಮುಸ್ಲಿಮರ ಇಫ್ತಾರ್ ಕೂಟಕ್ಕೆ ದೇವಾಲಯವೊಂದು ಆಹಾರ ಪೂರೈಸುತ್ತಿದೆ ಎನ್ನುವುದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಅಷ್ಟಕ್ಕೂ ಈ ದೇವಸ್ಥಾನ ಇರುವುದು ಬೇರೆ ಎಲ್ಲಿಯೂ ಅಲ್ಲ. ತಮಿಳುನಾಡಿನ ರಾಜಧಾನಿ ಚೆನೈ ನಗರದ ಹೃದಯಭಾಗದಲ್ಲಿ.

ಈ ದೇವಸ್ಥಾನ ಚೆನೈನ ಮೈಲಾಪುರ್ ಎನ್ನುವ ಏರಿಯಾದಲ್ಲಿ ಇದೆ. ಕಳೆದ 40 ವರ್ಷಗಳಿಂದ ಪ್ರತಿ ರಮ್ಜಾನ್ ಮಾಸದಲ್ಲಿ ನಿತ್ಯ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸಲಾಗುತ್ತದೆ. ದಾದಾ ರತನಚಂದ್ ಎನ್ನುವ ನಿರಾಶ್ರಿತ ವ್ಯಕ್ತಿ ಭಾರತ ವಿಭಜನೆಯ ಸಂದರ್ಭದಲ್ಲಿ ಚೆನೈನಲ್ಲಿ ಆಶ್ರಯ ಪಡೆದುಕೊಂಡಿದ್ದಾಗ ಈ ದೇವಸ್ಥಾನವನ್ನು ನಿರ್ಮಿಸಿದ್ದರು. ನಂತರ ಇಲ್ಲಿ ಇಫ್ತಾರ್ ಆಹಾರವನ್ನು ತಯಾರಿಸುವ ಸಂಪ್ರದಾಯವನ್ನು ಆರಂಭಿಸಿದ್ದರು. ಅದು ಈಗ 40 ವರ್ಷಗಳಿಂದ ಜಾರಿಯಲ್ಲಿದೆ.

ಇಲ್ಲಿನ ಸ್ವಯಂ ಸೇವಕರು ನಿತ್ಯ ಬೆಳಿಗ್ಗೆ 7.30 ರಿಂದ ಆಹಾರ ತಯಾರಿಸುವ ಕೆಲಸಕಾರ್ಯವನ್ನು ಆರಂಭಿಸುತ್ತಾರೆ. ನಿತ್ಯ 1200 ಜನರಿಗೆ ಆಹಾರ ತಯಾರಿಸಲಾಗುತ್ತದೆ. ಅದರಲ್ಲಿ ಬಿರಿಯಾನಿ, ಫ್ರೈಡ್ ರೈಸ್, ಉಪ್ಪಿನಕಾಯಿ, ಕೇಸರಿ ಹಾಲು ಮತ್ತು ಹಣ್ಣುಹಂಪಲುಗಳು ಸೇರಿರುತ್ತವೆ. ದೇವಳದಲ್ಲಿ ತಯಾರಿಸಿದ ಆಹಾರವನ್ನು ಹತ್ತಿರದ ಮಸೀದಿಯಲ್ಲಿ ಅಲ್ಲಿ ಆಗಮಿಸಿದ ಜನರಿಗೆ ಹಂಚಲಾಗುತ್ತದೆ. ಅದರೊಂದಿಗೆ ಆಹಾರವನ್ನು ಮನೆಗಳಿಗೂ ಹಂಚುವ ಕ್ರಮ ಚಾಲ್ತಿಯಲ್ಲಿದೆ.

ಈ ದೇವಸ್ಥಾನ ಎಲ್ಲಾ ಧರ್ಮ, ಮತದವರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುತ್ತದೆ ಎಂದು ಇಲ್ಲಿನ ವಿವಿಧ ಮತ, ಸಂಪ್ರದಾಯದವರು ಅಭಿಪ್ರಾಯ ಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search