• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಪಿಎಲ್ ನಲ್ಲಿ ಶೂನ್ಯ ಸುತ್ತುವಲ್ಲಿಯೂ ರೋಹಿತ್ ದಾಖಲೆ!

Tulunadu News Posted On March 24, 2025
0


0
Shares
  • Share On Facebook
  • Tweet It

ಕೆಲವೊಂದು ದಾಖಲೆಗಳು ಅದನ್ನು ಸಾಧಿಸಿದವರಲ್ಲಿ ಹೆಮ್ಮೆ ಮೂಡಿಸುವುದಿಲ್ಲ. ಆದರೆ ದಾಖಲೆಗಳು ಮಾತ್ರ ನಡೆದು ಹೋಗುತ್ತವೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಪಂದ್ಯಾಕೂಟದಲ್ಲಿ ಮುಂಬೈ ಇಂಡಿಯನ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಮೊದಲ ದಾಖಲೆಯನ್ನು ಬರೆಯುವಂತಾಯಿತು. ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ವಿರುದ್ಧ ಆರಂಭಿಕ ಬ್ಯಾಟ್ಸಮನ್ ಆಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಖಲೀಲ್ ಅಹ್ಮದ್ ಅವರ ದಾಳಿಗೆ ಶಿವಂ ದುಬೆ ಕೈಗೆ ಸುಲಭದ ಕ್ಯಾಚ್ ನೀಡಿ ನಿರ್ಗಮಿಸಿದರು.

37 ವರ್ಷದ ಹಿಟ್ ಮ್ಯಾನ್ ಇಲ್ಲಿಯ ತನಕ ಐಪಿಎಲ್ ನಲ್ಲಿ 258 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಇದು ಅವರ 18 ನೇ ಶೂನ್ಯ ಸಂಪಾದನೆಯಾಗಿದೆ. ಈ ಸಾಧನೆಯನ್ನು ಅವರೊಂದಿಗೆ ಈಗಾಗಲೇ ಇನ್ನಿಬ್ಬರು ಈಗಾಗಲೇ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಭಾರತದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಇನ್ನೊಬ್ಬರು ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸವೆಲ್. ಎರಡನೇ ಸ್ಥಾನದಲ್ಲಿ ಸುನೀಲ್ ನಾರೀನ್ ಹಾಗೂ ಪಿಯೂಷ್ ಚಾವ್ಲಾ ಅವರು 16 ಶೂನ್ಯಗಳೊಂದಿಗೆ ಮತ್ತು ರಶೀದ್ ಖಾನ್ ಹಾಗೂ ಮನದೀಪ್ ಸಿಂಗ್ ಅವರು 15 ಸೊನ್ನೆ ಸುತ್ತಿದ್ದಾರೆ.

ಇನ್ನು ಐಪಿಎಲ್ ನಲ್ಲಿ ಆರು ಸಾವಿರ ರನ್ ಬಾರಿಸಿದ ಕೀರ್ತಿಯೂ ರೋಹಿತ್ ಹೆಸರಿನಲ್ಲಿದೆ. ಇನ್ನು ಐಪಿಎಲ್ ಒಂದು ಶತಕ ಮತ್ತು 40 ಅರ್ಧ ಶತಕಗಳನ್ನು ಇವರು ಹೊಡೆದಿದ್ದಾರೆ. ಐಪಿಎಲ್ ನಲ್ಲಿ ಇವರ ಸರ್ವಾಧೀಕ ದಾಖಲೆ 109. ಇವರು ಇಲ್ಲಿಯ ತನಕ 503 ಬೌಂಡರಿ ಹಾಗೂ 233 ಸಿಕ್ಸರ್ ಗಳನ್ನು ಕೂಡ ಸಿಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 3
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search