• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಪಿಎಲ್ ನಲ್ಲಿ ಶೂನ್ಯ ಸುತ್ತುವಲ್ಲಿಯೂ ರೋಹಿತ್ ದಾಖಲೆ!

Tulunadu News Posted On March 24, 2025
0


0
Shares
  • Share On Facebook
  • Tweet It

ಕೆಲವೊಂದು ದಾಖಲೆಗಳು ಅದನ್ನು ಸಾಧಿಸಿದವರಲ್ಲಿ ಹೆಮ್ಮೆ ಮೂಡಿಸುವುದಿಲ್ಲ. ಆದರೆ ದಾಖಲೆಗಳು ಮಾತ್ರ ನಡೆದು ಹೋಗುತ್ತವೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಪಂದ್ಯಾಕೂಟದಲ್ಲಿ ಮುಂಬೈ ಇಂಡಿಯನ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಮೊದಲ ದಾಖಲೆಯನ್ನು ಬರೆಯುವಂತಾಯಿತು. ಚೆನ್ನೈಯಲ್ಲಿರುವ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್ ಕೆ ವಿರುದ್ಧ ಆರಂಭಿಕ ಬ್ಯಾಟ್ಸಮನ್ ಆಗಿ ಕಣಕ್ಕೆ ಇಳಿದ ರೋಹಿತ್ ಶರ್ಮಾ ಖಲೀಲ್ ಅಹ್ಮದ್ ಅವರ ದಾಳಿಗೆ ಶಿವಂ ದುಬೆ ಕೈಗೆ ಸುಲಭದ ಕ್ಯಾಚ್ ನೀಡಿ ನಿರ್ಗಮಿಸಿದರು.

37 ವರ್ಷದ ಹಿಟ್ ಮ್ಯಾನ್ ಇಲ್ಲಿಯ ತನಕ ಐಪಿಎಲ್ ನಲ್ಲಿ 258 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಇದು ಅವರ 18 ನೇ ಶೂನ್ಯ ಸಂಪಾದನೆಯಾಗಿದೆ. ಈ ಸಾಧನೆಯನ್ನು ಅವರೊಂದಿಗೆ ಈಗಾಗಲೇ ಇನ್ನಿಬ್ಬರು ಈಗಾಗಲೇ ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು ಭಾರತದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್, ಇನ್ನೊಬ್ಬರು ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸವೆಲ್. ಎರಡನೇ ಸ್ಥಾನದಲ್ಲಿ ಸುನೀಲ್ ನಾರೀನ್ ಹಾಗೂ ಪಿಯೂಷ್ ಚಾವ್ಲಾ ಅವರು 16 ಶೂನ್ಯಗಳೊಂದಿಗೆ ಮತ್ತು ರಶೀದ್ ಖಾನ್ ಹಾಗೂ ಮನದೀಪ್ ಸಿಂಗ್ ಅವರು 15 ಸೊನ್ನೆ ಸುತ್ತಿದ್ದಾರೆ.

ಇನ್ನು ಐಪಿಎಲ್ ನಲ್ಲಿ ಆರು ಸಾವಿರ ರನ್ ಬಾರಿಸಿದ ಕೀರ್ತಿಯೂ ರೋಹಿತ್ ಹೆಸರಿನಲ್ಲಿದೆ. ಇನ್ನು ಐಪಿಎಲ್ ಒಂದು ಶತಕ ಮತ್ತು 40 ಅರ್ಧ ಶತಕಗಳನ್ನು ಇವರು ಹೊಡೆದಿದ್ದಾರೆ. ಐಪಿಎಲ್ ನಲ್ಲಿ ಇವರ ಸರ್ವಾಧೀಕ ದಾಖಲೆ 109. ಇವರು ಇಲ್ಲಿಯ ತನಕ 503 ಬೌಂಡರಿ ಹಾಗೂ 233 ಸಿಕ್ಸರ್ ಗಳನ್ನು ಕೂಡ ಸಿಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search