• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್!

Tulunadu News Posted On March 25, 2025
0


0
Shares
  • Share On Facebook
  • Tweet It

ರಂಜಾನ್ ಹಿನ್ನಲೆಯಲ್ಲಿ “ಸೌಗತ್ – ಎ – ಮೋದಿ” ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಭಾರತೀಯ ಜನತಾ ಪಾರ್ಟಿ ಈದ್ ಕಿಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್ ನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಬಡ ಮುಸ್ಲಿಂ ಕುಟುಂಬಗಳು ಯಾವುದೇ ತೊಂದರೆ ಇಲ್ಲದೇ ಹಬ್ಬವನ್ನು ಆಚರಿಸಬೇಕೆಂಬ ಮಹತ್ತರ ಉದ್ದೇಶದಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ.
ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಕುಟುಂಬಗಳು ಖುಷಿಯಿಂದ, ನೆಮ್ಮದಿಯಿಂದ, ಸಂಕಷ್ಟವಿಲ್ಲದೇ ಈದ್ ಆಚರಿಸಬೇಕೆಂಬುದು ಈ ಅಭಿಯಾನದ ಗುರಿಯಾಗಿದೆ. ಇದರ ಭಾಗವಾಗಿ 32000 ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕರ್ತರು ದೇಶಾದ್ಯಂತ 3000 ಮಸೀದಿಗಳ ಸಹಕಾರದೊಂದಿಗೆ ಸಹಾಯ ಮಾಡುತ್ತಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ಧಿಕಿ ಅವರು “ಸೌಗತ್ – ಎ- ಮೋದಿ” ಅಭಿಯಾನದ ವಿಶಾಲ ದೃಷ್ಟಿಕೋನದ ಬಗ್ಗೆ ತಿಳಿಸಿದ್ದಾರೆ. ರಂಜಾನ್ ಮತ್ತು ಈದ್ ಸಮಯದಲ್ಲಿ ಮಾತ್ರವಲ್ಲದೇ ಗುಡ್ ಫ್ರೈಡೆ, ಈಸ್ಟರ್, ನೌರುಜ್ ಮತ್ತು ಹೊಸ ವರ್ಷದಂತಹ ಇತರ ಮಹತ್ವದ ಸಂದರ್ಭಗಳಲ್ಲಿಯೂ ಬೆಂಬಲವನ್ನು ನೀಡುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಈದ್ ಮಿಲನ್ ಆಚರಣೆಗಳನ್ನು ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.

ಸೌಗತ್ ಎ ಮೋದಿ ಅಭಿಯಾನದಡಿಯಲ್ಲಿ ವಿತರಿಸಲಾದ ಕಿಟ್ ಗಳಲ್ಲಿ ಆಹಾರ ಪದಾರ್ಥಗಳ ಜೊತೆಗೆ ಬಟ್ಟೆ, ವರ್ಮಿಸೆಲ್ಲಿ, ಖರ್ಜೂರ, ಒಣಹಣ್ಣುಗಳು ಮತ್ತು ಸಕ್ಕರೆಯನ್ನು ಒಳಗೊಂಡಿರುತ್ತವೆ, ಮಹಿಳೆಯರ ಕಿಟ್ ಗಳು ಸೂಟ್ ಗಳಿಗೆ ಬಟ್ಟೆಯನ್ನು ಒಳಗೊಂಡಿರುತ್ತವೆ. ಪುರುಷರ ಕಿಟ್ ಗಳು ಕುರ್ತಾ ಪೈಜಾಮಾಗಳನ್ನು ಒಳಗೊಂಡಿರುತ್ತವೆ. ಪ್ರತಿಯೊಂದು ಕಿಟ್ ಗೆ 500 ರೂಪಾಯಿಯಿಂದ 600 ರೂಗಳ ತನಕ ವೆಚ್ಚ ತಗಲುತ್ತದೆ ಎಂದು ಹೇಳಲಾಗಿದೆ.

ಈ ಅಭಿಯಾನವು ಬಿಜೆಪಿಗೆ ಮತ್ತು ಎನ್ ಡಿಎ ಮೈತ್ರಿಕೂಟದ ಪ್ರಮುಖ ಕಾರ್ಯಕ್ರಮವಾಗಿದ್ದು, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಇದರ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search