• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನಿಟ್ರಾಪ್ ಕೇಸಿನಲ್ಲಿ ರಾಜಣ್ಣ ಮನವಿ! ನಂತರದ ಕಥೆ!

Tulunadu News Posted On March 25, 2025
0


0
Shares
  • Share On Facebook
  • Tweet It

ರಾಜ್ಯದಲ್ಲಿ ಸಚಿವರೊಬ್ಬರು ತಮ್ಮ ಮೇಲೆ ಹನಿಟ್ರಾಪ್ ಪ್ರಯತ್ನ ಆಗಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ, ನಂತರ ಗೃಹಸಚಿವರಿಗೆ ಮುಂದಿನ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿರುವ ಘಟನೆ ಕರ್ನಾಟಕದ ಇತಿಹಾಸದಲ್ಲಿ ಪ್ರಥಮ ಎನ್ನಬಹುದು. ಸಚಿವ ರಾಜಣ್ಣ ಅವರು ವಿಧಾನಸಭೆಯಲ್ಲಿ ಇದನ್ನು ಪ್ರಸ್ತಾವಿಸಿದ ನಾಲ್ಕೈದು ದಿನಗಳ ನಂತರ ಗೃಹ ಸಚಿವರಿಗೆ ಮನವಿಯನ್ನು ನೀಡಿದ್ದಾರೆ. ಈ ಬಗ್ಗೆ ಮುಂದಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಈ ಪ್ರಕರಣದ ಮುಂದಿನ ಪರಿಣಾಮಗಳೇನು?

1. ರಾಜಣ್ಣ ಪೊಲೀಸ್ ಠಾಣೆಯಲ್ಲಿ ದೂರು ನೀಡುವುದು.
2. ಸರಕಾರದಿಂದ ಸಿಐಡಿ ಅಥವಾ ಎಸ್ ಐಟಿ ತನಿಖೆಗೆ ನೀಡುವುದು.
3. ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸುವುದು.
ಈ ಎಲ್ಲಾ ಆಯ್ಕೆಗಳು ರಾಜ್ಯ ಸರಕಾರದ ಮುಂದಿವೆ. ಬೇಕಾದರೆ ಸಿಬಿಐಗೂ ಕೊಡಬಹುದು. ಆದರೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಬೇರೆ ಬೇರೆ ಪಕ್ಷಗಳ ಸರಕಾರಗಳು ಇರುವುದರಿಂದ ಸಿಬಿಐಗೆ ಈ ಪ್ರಕರಣ ಹೋಗುವ ಸಾಧ್ಯತೆ ಕಡಿಮೆ ಇರುತ್ತದೆ.

ಇನ್ನು ಫಲಿತಾಂಶ ಏನು ಬಂದರೆ ಏನು ಆಗಬಹುದು:

1. ಹನಿಟ್ರಾಪ್ ಮಾಡಿದ್ದು ಯಾರು ಎಂದು ಗೊತ್ತಾದರೆ ಅವರು ಆಡಳಿತ ಪಕ್ಷದವರಾದರೆ ಸರಕಾರ ಇಕ್ಕಟ್ಟಿಗೆ, ವಿಪಕ್ಷದವರಾದರೇ ಸ್ಪಷ್ಟ ಮೇಲುಗೈ.
2. ಸಿದ್ಧರಾಮಯ್ಯ ಬಣದವರು ಆಡಳಿತ ಪಕ್ಷದ ತಮ್ಮ ವಿರೋಧಿಗಳೇ ಆಗಿರಲಿ ಎಂದು ಬಯಸಬಹುದು.
3. ವಿಪಕ್ಷಗಳಲ್ಲಿ ಒಂದು ಬಣ ತಮ್ಮ ವಿರೋಧಿ ಪಾಳಯದವರೇ ಸಿಕ್ಕಿಬೀಳಲಿ ಎಂದು ಬಯಸಬಹುದು.
4. ಯಾರೂ ಸಿಕ್ಕಿಬೀಳದೇ ಹೋದರೆ ರಾಜಣ್ಣ ಮುಜುಗರಕ್ಕೆ ಒಳಗಾಗಬಹುದು.
5. ಈ ತನಿಖೆ ಕನಿಷ್ಟ ಆರು ತಿಂಗಳು ದಾಟಿದರೆ ಆಗ ಸ್ಪಷ್ಟತೆ ಸಿಗುವ ತನಕ ಸಿಎಂ ಬದಲಾವಣೆಗೆ ಹೈಕಮಾಂಡ್ ಮುಂದಾಗದೇ ಇರಬಹುದು.
ಒಟ್ಟಿನಲ್ಲಿ ರಾಜಕೀಯ ಪಡಸಾಲೆಯಲ್ಲಿ ಮುಂದಿನ ಮೂರು ವರ್ಷ ಏನೇ ಆದರೂ ಈ ವಿಷಯ ಚರ್ಚೆಯಲ್ಲಿ ಇರುವುದಂತೂ ಸ್ಪಷ್ಟ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search