• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025
0


0
Shares
  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search