• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025


  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search