• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025
0


0
Shares
  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search