• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೇಪ್ ತೀರ್ಪಿನ ಬಗ್ಗೆ ಅಲಹಾಬಾದ್ ಹೈಕೋರ್ಟ್ ವ್ಯಾಖ್ಯಾನಕ್ಕೆ ಸುಪ್ರೀಂ ತಡೆ!

Tulunadu News Posted On March 27, 2025
0


0
Shares
  • Share On Facebook
  • Tweet It

ಅತ್ಯಾಚಾರ ಅಥವಾ ರೇಪ್ ಬಗ್ಗೆ ವ್ಯಾಖ್ಯಾನ ಮಾಡುವುದು ಯಾವುದೇ ನ್ಯಾಯಾಲಯದ ನ್ಯಾಯಾಧೀಶರಿಗೆ ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಕಾನೂನು ಪುಸ್ತಕದಲ್ಲಿ ರೇಪ್ ಎಂದರೇನು ಎನ್ನುವ ಪ್ರಶ್ನೆಗೆ ವಿಶ್ಲೇಷಣೆ ಏನೇ ಇದ್ದರೂ ಅದನ್ನು ತೀರ್ಪಿನಲ್ಲಿ ಓದುವಾಗ ವಿವಾದ ಆಗದಂತೆ, ನೂರರಷ್ಟು ಸಂತ್ರಸ್ತೆಯ ಪರವಾಗಿಯೇ ನಿಲ್ಲಬೇಕಾದ ಅಗತ್ಯ ನ್ಯಾಯಾಧೀಶರ ಕರ್ತವ್ಯವಾಗಿದೆ. ಈಗ ಒಬ್ಬ ಕಾಮುಕ ಅಪ್ರಾಪ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಂಡ ಮತ್ತು ಆಕೆಯ ಪೈಜಾಮದ ಲಾಡಿಯನ್ನು ಎಳೆದ ಎಂದ ಕೂಡಲೇಅಲ್ಲಿ ಆತನ ಉದ್ದೇಶ ಸ್ಪಷ್ಟವಾಗಿರುತ್ತದೆ. ಇದನ್ನು ಅತ್ಯಾಚಾರದ ಅಡಿಯಲ್ಲಿ ತರಲು ಆಗುವುದಿಲ್ಲ ಎಂದು ಹೇಗೆ ಹೇಳಲು ಅಗುತ್ತದೆ.

ಇಲ್ಲಿ ಸಂತ್ರಸ್ತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ನೋವನ್ನು ಅನುಭವಿಸಿದ್ದಾಳೆ. ಆದ್ದರಿಂದ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ನ್ಯಾಯಾಧೀಶರ ವಿವೇಚನೆಯೂ ಮುಖ್ಯ. ಪ್ರಸ್ತುತ ಅಲಹಾಬಾದ್ ಹೈಕೋರ್ಟ್ ಈ ವಿಷಯದಲ್ಲಿ ನೀಡಿದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ನೇತೃತ್ವದ ಪೀಠವು ಈ ಸಂಬಂಧ ಪ್ರತಿಕ್ರಿಯಿಸಿದ್ದು, ” ಅಲಹಾಬಾದ್ ಹೈಕೋರ್ಟ್ ನ ಅವಲೋಕನಗಳು ಸಂಪೂರ್ಣ ಸಂವೇದನರಹಿತ ಮತ್ತು ಅಮಾನವೀಯ ವಿಧಾನವನ್ನು ಚಿತ್ರಿಸಿವೆ ಎಂದು ಬೇಸರ ಹೊರಹಾಕಿದೆ. ಅಲ್ಲದೆ ಹೈಕೋರ್ಟ್ ನ ಆದೇಶದ ಬಗ್ಗೆ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಸಂಬಂಧಪಟ್ಟ ಇತರರಿಗೆ ನೋಟಿಸು ಜಾರಿ ಮಾಡಿದೆ. ” ವಿ ದಿ ವುಮೆನ್ ಆಫ್ ಇಂಡಿಯಾ” ಎಂಬ ಸಂಘಟನೆ ತೀರ್ಪನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ.

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search