• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಲ್ಮಾನ್ ವಾಚ್ ನಲ್ಲಿ ರಾಮ ಮಂದಿರ, ಬೆಲೆ 34 ಲಕ್ಷ ರೂ!

Tulunadu News Posted On March 27, 2025
0


0
Shares
  • Share On Facebook
  • Tweet It

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಮ್ಮ ನೂತನ ಸಿನೆಮಾ ಸಿಕಂದರ್ ಪ್ರಮೋಶನ್ ನಲ್ಲಿ ಬಿಝಿಯಾಗಿದ್ದಾರೆ. ಹೀಗೆ ಎಲ್ಲಾ ಕಡೆ ಪ್ರಚಾರದ ಅಂಗವಾಗಿ ಭೇಟಿ ನೀಡುತ್ತಿರುವ ಸಲ್ಮಾನ್ ಖಾನ್ ಕೈಯಲ್ಲಿರುವ ವಾಚ್ ಜನರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಆ ವಾಚಿನಲ್ಲಿ ಏನಿದೆ ಎಂದು ನಿಮಗೆ ಅನಿಸಬಹುದು. ಅದರಲ್ಲಿ ರಾಮ ಮಂದಿರ ಇದೆ. ಹೌದು ರಾಮ ಜನ್ಮಭೂಮಿ ವಾಚ್ ಎಂದೇ ಇದನ್ನು ಕರೆಯಲಾಗುತ್ತದೆ. ಇದರ ಬೆಲೆ ಕೇವಲ 34 ಲಕ್ಷ ರೂಪಾಯಿಗಳು.

 

ಸಲ್ಮಾನ್ ಖಾನ್ ಈ ವಾಚ್ ತಯಾರಿಕಾ ಕಂಪೆನಿ ಜಾಕಬ್ ಅಂಡ್ ಕಂ ಇದರ ಮಾಲೀಕರೂ, ಚೇರ್ ಮೆನ್ ಕೂಡ ಆಗಿರುವ ಜಾಕಬ್ ಅರಬೋ ಅವರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಈ ಸಂಸ್ಥೆ ಅನೇಕ ಐಷಾರಾಮಿ ವಾಚುಗಳನ್ನು ತಯಾರಿಸುತ್ತದೆ. ಈ ಕಂಪೆನಿಯ ವಾಚುಗಳನ್ನು ಸಲ್ಮಾನ್ ಖಾನ್ ಈ ಹಿಂದೆನೂ ಹಲವಾರು ಕಾರ್ಯಕ್ರಮಗಳಲ್ಲಿ ಧರಿಸಿದ್ದಾರೆ. ಈ ನೂತನ ಬ್ರಾಂಡನ್ನು ಜಾಕಬ್ ಕಂಪೆನಿ ರಾಮ ಮಂದಿರ ಲೋಕಾರ್ಪಣೆ ಆದ ಸಂದರ್ಭದಲ್ಲಿ ಬಿಡುಗಡೆಗೆ ಉದ್ದೇಶಿಸಿತು. ಈ ವಾಚ್ ಈಥೋಸ್ ಮತ್ತು ಜಾಕೋಬ್ ಅಂಡ್ ಕಂಪೆನಿ ಜಂಟಿಯಾಗಿ ಸೇರಿ ನಿರ್ಮಿಸಲಾಗಿದೆ.

ಈ ವಾಚನ್ನು ಎರಡು ತಿಂಗಳ ಹಿಂದೆ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ಐಎಸ್ ಪಿಎಲ್) ಲಾಂಚ್ ಸಂದರ್ಭದಲ್ಲಿ ಅಭಿಷೇಕ್ ಬಚ್ಚನ್ ಧರಿಸಿದ್ದರು. ಈ ವಾಚಿನಲ್ಲಿ ರಾಮ ಜನ್ಮಭೂಮಿಯ ಟೈಟಾನಿಯಂ 2 ಸಾಂಸ್ಕೃತಿಕ ಪ್ರಭಾವಳಿ ಮೂಡಿಬಂದಿದೆ. ಈ ವಾಚ್ ಎರಡು ಎಡಿಶನ್ ನಲ್ಲಿ ಹೊರಗೆ ಬಂದಿದ್ದು, ರಾಮ ಮಂದಿರ, ರಾಮ ದೇವರು ಮತ್ತು ಹನುಮಂತ ದೇವರನ್ನು ಕೂಡ ಕಾಣಬಹುದು. ಈ ವಾಚ್ ಬೆಲ್ಟ್ ಕೇಸರಿ ವರ್ಣದಲ್ಲಿ ಮೂಡಿ ಬಂದಿದ್ದು, ಧರಿಸುವವರಿಗೆ ದೈವಿಕವಾಗಿರುವ ಭಾವನೆಯನ್ನು ನೀಡುತ್ತದೆ.

ಸಂಸ್ಥೆಯ ಪ್ರಕಾರ ಕೇಸರಿ ವರ್ಣ ಆಧ್ಯಾತ್ಮಿಕತೆ, ಶುದ್ಧತೆ, ಪ್ರಾರ್ತನೆಯ ಫಲ ಸೇರಿ ಹಿಂದೂತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಸಲ್ಮಾನ್ ಈ ವಾಚ್ ಧರಿಸಿ ಸಿಕಂದರ್ ಪ್ರಚಾರ ಮಾಡುತ್ತಿರುವುದು ಮತ್ತು ಅದು ಕೂಡ ರಮ್ಜಾನ್ ಮಾಸದಲ್ಲಿ ಹಲವರ ಹುಬ್ಬು ಏರುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search