• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಲ್ಮಾನ್ ವಾಚ್ ನಲ್ಲಿ ರಾಮ ಮಂದಿರ, ಬೆಲೆ 34 ಲಕ್ಷ ರೂ!

Tulunadu News Posted On March 27, 2025
0


0
Shares
  • Share On Facebook
  • Tweet It

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಮ್ಮ ನೂತನ ಸಿನೆಮಾ ಸಿಕಂದರ್ ಪ್ರಮೋಶನ್ ನಲ್ಲಿ ಬಿಝಿಯಾಗಿದ್ದಾರೆ. ಹೀಗೆ ಎಲ್ಲಾ ಕಡೆ ಪ್ರಚಾರದ ಅಂಗವಾಗಿ ಭೇಟಿ ನೀಡುತ್ತಿರುವ ಸಲ್ಮಾನ್ ಖಾನ್ ಕೈಯಲ್ಲಿರುವ ವಾಚ್ ಜನರ ಗಮನ ಸೆಳೆಯುತ್ತಿದೆ. ಅಷ್ಟಕ್ಕೂ ಆ ವಾಚಿನಲ್ಲಿ ಏನಿದೆ ಎಂದು ನಿಮಗೆ ಅನಿಸಬಹುದು. ಅದರಲ್ಲಿ ರಾಮ ಮಂದಿರ ಇದೆ. ಹೌದು ರಾಮ ಜನ್ಮಭೂಮಿ ವಾಚ್ ಎಂದೇ ಇದನ್ನು ಕರೆಯಲಾಗುತ್ತದೆ. ಇದರ ಬೆಲೆ ಕೇವಲ 34 ಲಕ್ಷ ರೂಪಾಯಿಗಳು.

 

ಸಲ್ಮಾನ್ ಖಾನ್ ಈ ವಾಚ್ ತಯಾರಿಕಾ ಕಂಪೆನಿ ಜಾಕಬ್ ಅಂಡ್ ಕಂ ಇದರ ಮಾಲೀಕರೂ, ಚೇರ್ ಮೆನ್ ಕೂಡ ಆಗಿರುವ ಜಾಕಬ್ ಅರಬೋ ಅವರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ಈ ಸಂಸ್ಥೆ ಅನೇಕ ಐಷಾರಾಮಿ ವಾಚುಗಳನ್ನು ತಯಾರಿಸುತ್ತದೆ. ಈ ಕಂಪೆನಿಯ ವಾಚುಗಳನ್ನು ಸಲ್ಮಾನ್ ಖಾನ್ ಈ ಹಿಂದೆನೂ ಹಲವಾರು ಕಾರ್ಯಕ್ರಮಗಳಲ್ಲಿ ಧರಿಸಿದ್ದಾರೆ. ಈ ನೂತನ ಬ್ರಾಂಡನ್ನು ಜಾಕಬ್ ಕಂಪೆನಿ ರಾಮ ಮಂದಿರ ಲೋಕಾರ್ಪಣೆ ಆದ ಸಂದರ್ಭದಲ್ಲಿ ಬಿಡುಗಡೆಗೆ ಉದ್ದೇಶಿಸಿತು. ಈ ವಾಚ್ ಈಥೋಸ್ ಮತ್ತು ಜಾಕೋಬ್ ಅಂಡ್ ಕಂಪೆನಿ ಜಂಟಿಯಾಗಿ ಸೇರಿ ನಿರ್ಮಿಸಲಾಗಿದೆ.

ಈ ವಾಚನ್ನು ಎರಡು ತಿಂಗಳ ಹಿಂದೆ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ಐಎಸ್ ಪಿಎಲ್) ಲಾಂಚ್ ಸಂದರ್ಭದಲ್ಲಿ ಅಭಿಷೇಕ್ ಬಚ್ಚನ್ ಧರಿಸಿದ್ದರು. ಈ ವಾಚಿನಲ್ಲಿ ರಾಮ ಜನ್ಮಭೂಮಿಯ ಟೈಟಾನಿಯಂ 2 ಸಾಂಸ್ಕೃತಿಕ ಪ್ರಭಾವಳಿ ಮೂಡಿಬಂದಿದೆ. ಈ ವಾಚ್ ಎರಡು ಎಡಿಶನ್ ನಲ್ಲಿ ಹೊರಗೆ ಬಂದಿದ್ದು, ರಾಮ ಮಂದಿರ, ರಾಮ ದೇವರು ಮತ್ತು ಹನುಮಂತ ದೇವರನ್ನು ಕೂಡ ಕಾಣಬಹುದು. ಈ ವಾಚ್ ಬೆಲ್ಟ್ ಕೇಸರಿ ವರ್ಣದಲ್ಲಿ ಮೂಡಿ ಬಂದಿದ್ದು, ಧರಿಸುವವರಿಗೆ ದೈವಿಕವಾಗಿರುವ ಭಾವನೆಯನ್ನು ನೀಡುತ್ತದೆ.

ಸಂಸ್ಥೆಯ ಪ್ರಕಾರ ಕೇಸರಿ ವರ್ಣ ಆಧ್ಯಾತ್ಮಿಕತೆ, ಶುದ್ಧತೆ, ಪ್ರಾರ್ತನೆಯ ಫಲ ಸೇರಿ ಹಿಂದೂತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಸಲ್ಮಾನ್ ಈ ವಾಚ್ ಧರಿಸಿ ಸಿಕಂದರ್ ಪ್ರಚಾರ ಮಾಡುತ್ತಿರುವುದು ಮತ್ತು ಅದು ಕೂಡ ರಮ್ಜಾನ್ ಮಾಸದಲ್ಲಿ ಹಲವರ ಹುಬ್ಬು ಏರುವಂತೆ ಮಾಡಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search