• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಗ್ನ ವಿಡಿಯೋ ಬಗ್ಗೆ ಶ್ರುತಿ ನಾರಾಯಣ್ ಸ್ಪಷ್ಟನೆ, ದಯವಿಟ್ಟು ಶೇರ್ ಮಾಡಬೇಡಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಕಾಲಿವುಡ್ ನಟಿ, ಸೋಶಿಯಲ್ ಮೀಡಿಯಾ ಪ್ರಭಾವಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗಿದ್ದ 14 ನಿಮಿಷದ ನಗ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ತರಹೇವಾರಿ ಸುದ್ದಿಗಳು ಹರಿದಾಡುತ್ತಿದ್ದವು. ಖಾಸಗಿ ಆಡಿಷನ್ ಸಮಯದಲ್ಲಿ ಈ ವಿಡಿಯೋ ಸೋರಿಕೆಯಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಇನ್ನೊಂದೆಡೆ ತಮಿಳು ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆನೂ ಈ ವಿಡಿಯೋ ಅಲ್ಲಿನ ಕರಾಳ ಮುಖವನ್ನು ಬಹಿರಂಗಪಡಿಸುತ್ತದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಆದರೆ ಈ ವಿಡಿಯೋ ಬಗ್ಗೆ ನಟಿ ಶ್ರುತಿ ನಾರಾಯಣ್ ಅವರು ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮತ್ತು ನಾಗರಿಕರಲ್ಲಿ ಇತ್ತು. ಆ ವಿಷಯದಲ್ಲಿ ನಟಿ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ನಗ್ನ ವಿಡಿಯೋ ಎಐನಿಂದ ತಯಾರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ಒಂದು ಅನುಮಾನ ಆರಂಭದಲ್ಲಿ ಇತ್ತು. ಆದರೆ ನಟಿಯೇ ಹೇಳುವ ತನಕ ಯಾರೂ ಆ ಬಗ್ಗೆ ನಿರ್ಧಾರ ತಳೆಯಲು ಸಾಧ್ಯವಿರಲಿಲ್ಲ. ಯಾಕೆಂದರೆ ಅದು ಆಕೆಯ ಜೀವನದ ಪ್ರಶ್ನೆಯೂ ಆಗಿತ್ತು.
ನಟಿ ಶ್ರುತಿ ಈ ಬಗ್ಗೆ ತಮ್ಮ ಇನ್ಟಾಗ್ರಾಂ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶ್ರುತಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ಪ್ರೈವೇಟ್ ಮಾಡಿಕೊಂಡಿದ್ದರು. ಇದೀಗ ತಮ್ಮ ಖಾತೆಯನ್ನು ಮತ್ತೆ ಸಾರ್ವಜನಿಕಗೊಳಿಸಿದ್ದು, ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಶೇರ್ ಮಾಡಿರುವ ಮೊದಲ ಇನ್ಟಾ ಸ್ಟೋರಿಯಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಎಐ ಕ್ಲೋನಿಂಗ್ ಮೂಲಕ ಮಾಡಲಾಗಿದೆ ಎಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋವನ್ನು ಅವರು ಅಟ್ಯಾಚ್ ಮಾಡಿದ್ದಾರೆ.

ಎರಡನೇ ಸ್ಟೋರಿಯಲ್ಲಿ ಯಾರೂ ಕೂಡ ಆ ವಿಡಿಯೋವನ್ನು ಕಾಡ್ಗಿಚ್ಚಿನಂತೆ ಹರಡಬಾರದು ಎಂದು ಶ್ರುತಿ ನಾರಾಯಣನ್ ಮನವಿ ಮಾಡಿಕೊಂಡಿದ್ದಾರೆ. ನಿಮಗೆ ಇಂತಹ ವಿಡಿಯೋ ಗಳು ಖುಷಿ ನೀಡಬಹುದು. ಆದರೆ ನನಗೆ ಮತ್ತು ನನ್ನ ಹತ್ತಿರದವರಿಗೆ ಮನಸ್ಸಿಗೆ ನೋವನ್ನು ತಂದೊಡ್ಡುತ್ತದೆ. ಅಲ್ಲದೇ ಒಂದು ವೇಳೆ ನೀವು ನೋಡುವುದಾದರೆ ನಿಮ್ಮ ತಾಯಿ, ಸಹೋದರಿ ಅಥವಾ ಗೆಳತಿಯ ವಿಡಿಯೋಗಳನ್ನು ನೋಡಿ. ಏಕೆಂದರೆ ಅವರು ಕೂಡ ಮಹಿಳೆಯರು. ಅವರಿಗೂ ನನ್ನಂತೆಯೇ ದೇಹವಿದೆ. ಆದ್ದರಿಂದ ನಮ್ಮ ತೇಜೋವಧೆ ಮಾಡಲು ಎಐ ವಿಡಿಯೋ ನೋಡುವುದಕ್ಕಿಂದ ಹೋಗಿ ನಿಮ್ಮವರ ವಿಡಿಯೋ ನೋಡಿ ಎಂದು ನೋವು ತೋಡಿಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search