• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಗ್ನ ವಿಡಿಯೋ ಬಗ್ಗೆ ಶ್ರುತಿ ನಾರಾಯಣ್ ಸ್ಪಷ್ಟನೆ, ದಯವಿಟ್ಟು ಶೇರ್ ಮಾಡಬೇಡಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಕಾಲಿವುಡ್ ನಟಿ, ಸೋಶಿಯಲ್ ಮೀಡಿಯಾ ಪ್ರಭಾವಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗಿದ್ದ 14 ನಿಮಿಷದ ನಗ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ತರಹೇವಾರಿ ಸುದ್ದಿಗಳು ಹರಿದಾಡುತ್ತಿದ್ದವು. ಖಾಸಗಿ ಆಡಿಷನ್ ಸಮಯದಲ್ಲಿ ಈ ವಿಡಿಯೋ ಸೋರಿಕೆಯಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಇನ್ನೊಂದೆಡೆ ತಮಿಳು ಚಿತ್ರರಂಗದ ಕಾಸ್ಟಿಂಗ್ ಕೌಚ್ ಬಗ್ಗೆನೂ ಈ ವಿಡಿಯೋ ಅಲ್ಲಿನ ಕರಾಳ ಮುಖವನ್ನು ಬಹಿರಂಗಪಡಿಸುತ್ತದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಆದರೆ ಈ ವಿಡಿಯೋ ಬಗ್ಗೆ ನಟಿ ಶ್ರುತಿ ನಾರಾಯಣ್ ಅವರು ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮತ್ತು ನಾಗರಿಕರಲ್ಲಿ ಇತ್ತು. ಆ ವಿಷಯದಲ್ಲಿ ನಟಿ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ನಗ್ನ ವಿಡಿಯೋ ಎಐನಿಂದ ತಯಾರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂತಹ ಒಂದು ಅನುಮಾನ ಆರಂಭದಲ್ಲಿ ಇತ್ತು. ಆದರೆ ನಟಿಯೇ ಹೇಳುವ ತನಕ ಯಾರೂ ಆ ಬಗ್ಗೆ ನಿರ್ಧಾರ ತಳೆಯಲು ಸಾಧ್ಯವಿರಲಿಲ್ಲ. ಯಾಕೆಂದರೆ ಅದು ಆಕೆಯ ಜೀವನದ ಪ್ರಶ್ನೆಯೂ ಆಗಿತ್ತು.
ನಟಿ ಶ್ರುತಿ ಈ ಬಗ್ಗೆ ತಮ್ಮ ಇನ್ಟಾಗ್ರಾಂ ಸ್ಟೋರಿ ಮೂಲಕ ಪ್ರತಿಕ್ರಿಯಿಸಿದ್ದಾರೆ. ಆ ನಗ್ನ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶ್ರುತಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ಪ್ರೈವೇಟ್ ಮಾಡಿಕೊಂಡಿದ್ದರು. ಇದೀಗ ತಮ್ಮ ಖಾತೆಯನ್ನು ಮತ್ತೆ ಸಾರ್ವಜನಿಕಗೊಳಿಸಿದ್ದು, ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಶೇರ್ ಮಾಡಿರುವ ಮೊದಲ ಇನ್ಟಾ ಸ್ಟೋರಿಯಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಎಐ ಕ್ಲೋನಿಂಗ್ ಮೂಲಕ ಮಾಡಲಾಗಿದೆ ಎಂದಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋವನ್ನು ಅವರು ಅಟ್ಯಾಚ್ ಮಾಡಿದ್ದಾರೆ.

ಎರಡನೇ ಸ್ಟೋರಿಯಲ್ಲಿ ಯಾರೂ ಕೂಡ ಆ ವಿಡಿಯೋವನ್ನು ಕಾಡ್ಗಿಚ್ಚಿನಂತೆ ಹರಡಬಾರದು ಎಂದು ಶ್ರುತಿ ನಾರಾಯಣನ್ ಮನವಿ ಮಾಡಿಕೊಂಡಿದ್ದಾರೆ. ನಿಮಗೆ ಇಂತಹ ವಿಡಿಯೋ ಗಳು ಖುಷಿ ನೀಡಬಹುದು. ಆದರೆ ನನಗೆ ಮತ್ತು ನನ್ನ ಹತ್ತಿರದವರಿಗೆ ಮನಸ್ಸಿಗೆ ನೋವನ್ನು ತಂದೊಡ್ಡುತ್ತದೆ. ಅಲ್ಲದೇ ಒಂದು ವೇಳೆ ನೀವು ನೋಡುವುದಾದರೆ ನಿಮ್ಮ ತಾಯಿ, ಸಹೋದರಿ ಅಥವಾ ಗೆಳತಿಯ ವಿಡಿಯೋಗಳನ್ನು ನೋಡಿ. ಏಕೆಂದರೆ ಅವರು ಕೂಡ ಮಹಿಳೆಯರು. ಅವರಿಗೂ ನನ್ನಂತೆಯೇ ದೇಹವಿದೆ. ಆದ್ದರಿಂದ ನಮ್ಮ ತೇಜೋವಧೆ ಮಾಡಲು ಎಐ ವಿಡಿಯೋ ನೋಡುವುದಕ್ಕಿಂದ ಹೋಗಿ ನಿಮ್ಮವರ ವಿಡಿಯೋ ನೋಡಿ ಎಂದು ನೋವು ತೋಡಿಕೊಂಡಿದ್ದಾರೆ.

 

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search