• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಾಲಿನ ದರ ಹೆಚ್ಚಳದಿಂದಾಗಿ ಕಾಫಿ, ಟೀ ಗ್ಲಾಸಿಗೆ 2-3 ರೂ ಹೆಚ್ಚಳ ಪಕ್ಕಾ!

Tulunadu News Posted On March 28, 2025


  • Share On Facebook
  • Tweet It

ನಂದಿನಿ ಹಾಲಿನ ದರ ಲೀಟರಿಗೆ 4 ರೂ ಹೆಚ್ಚಳ ಆಗಿರುವ ಹಿನ್ನಲೆಯಲ್ಲಿ ಹೋಟೇಲು, ಕ್ಯಾಂಟೀನುಗಳಲ್ಲಿ ಕಾಫಿ, ಟೀ ದರವೂ ಸಹಜವಾಗಿ ಏರಿಕೆ ಕಾಣಲಿದೆ. ಇದು ಶೇಕಡಾ ಹತ್ತರಿಂದ ಹದಿನೈದು ಜಾಸ್ತಿಯಾಗಲಿದೆ ಎಂದು ಬೃಹತ್ ಬೆಂಗಳೂರು ಹೋಟೇಲುಗಳ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ.

ಕಳೆದ ತಿಂಗಳು ಕಾಫಿ ಪುಡಿ ದರ ಹೆಚ್ಚಳವಾದಾಗ ಕೆಲವು ಹೋಟೇಲುಗಳಲ್ಲಿ ದರ ಹೆಚ್ಚಾಗಿದೆ. ಆದರೂ ಅನೇಕ ಕಡೆ ಏರಿಕೆ ಆಗಿರಲಿಲ್ಲ. ಈಗ ಹಾಲಿನ ದರವೂ ಹೆಚ್ಚಾಗಿರುವುದರಿಂದ ಹೋಟೇಲುಗಳಲ್ಲಿ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ. ಯಾವಾಗೆಲ್ಲ ಹಾಲಿನ ದರ ಹೆಚ್ಚಾಗುತ್ತದೆಯೋ ಆಗ ಅದರ ಹೊರೆಯನ್ನು ಹೋಟೇಲಿನ ಮಾಲೀಕರು ಗ್ರಾಹಕರ ಮೇಲೆ ಹಾಕುವುದು ಯಾವತ್ತೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇದರೊಂದಿಗೆ ಹಾಲಿನ ಉತ್ಪನ್ನಗಳ ದರವೂ ಹೆಚ್ಚಳವಾಗುವುದರಿಂದ ಮೊಸರು ವಡೆ, ಪನ್ನೀರ್ ಐಟಂಗಳ ದರವೂ ಹೆಚ್ಚಳವಾಗಲಿದೆ.

ಇನ್ನು ತುಪ್ಪದೋಸೆ ಸಹಿತ ತುಪ್ಪದಿಂದ ತಯಾರಿಸಲಾಗುವ ಸಿಹಿತಿಂಡಿಗಳ ದರವೂ ಹೆಚ್ಚಳವಾಗಲಿದೆ. ಆದ್ದರಿಂದ ಇನ್ನು ನಿತ್ಯ ಹೋಟೇಲುಗಳಲ್ಲಿ ಆಹಾರ, ಕಾಫಿ, ಪಾರ್ಟಿ ಮಾಡುವವರು ಜೇಬನ್ನು ಹಗುರ ಮಾಡಿಕೊಳ್ಳುವ ದಿನಗಳು ಬರಲಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search