• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದೇ ವರ್ಷದಲ್ಲಿ ಟಿಕೆಟ್ ಇಲ್ಲದೇ ರೈಲು ಪ್ರಯಾಣ ಮಾಡಿದವರ ಸಂಖ್ಯೆ 2.16 ಕೋಟಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಭಾರತೀಯ ರೈಲ್ವೆ ದೇಶದ ನರನಾಡಿಯಂತೆ ಕೆಲಸ ಮಾಡುತ್ತದೆ ಎಂದರೆ ತಪ್ಪಿಲ್ಲ. ಇಷ್ಟು ದೊಡ್ಡ ದೇಶದಲ್ಲಿ ಮೂಲೆ ಮೂಲೆಗಳ ತನಕ ಹರಡಿರುವ ರೈಲ್ವೆ ಟ್ರಾಕುಗಳ ಮೇಲೆ ನಿತ್ಯ ಲಕ್ಷಾಂತರ ರೈಲು ಬೋಗಿಗಳು ಸಂಚರಿಸುತ್ತವೆ. ಕೋಟ್ಯಾಂತರ ಜನ ತಮ್ಮ ನಿಗದಿತ ಸ್ಥಳವನ್ನು ಕ್ರಮಿಸಿ ತಮ್ಮ ಉದ್ಯೋಗ, ವ್ಯವಹಾರಗಳನ್ನು, ಪ್ರವಾಸವನ್ನು ಸಂಪೂರ್ಣಗೊಳಿಸಿರುತ್ತಾರೆ. ಇದರಿಂದ ರೈಲ್ವೆ ಇಲಾಖೆಗೂ ಕೋಟ್ಯಾಂತರ ರೂಪಾಯಿ ಲಾಭ ಆಗಿರುತ್ತದೆ. ಆದರೆ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ತೆಗೆದುಕೊಂಡಿರುತ್ತಾರಾ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

2023 – 24 ನೇ ಇಸವಿಯಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ ಮಾಡಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದವರ ಸಂಖ್ಯೆಯೇ 2.16 ಕೋಟಿ. ಇನ್ನು ಸಿಕ್ಕಿ ಬೀಳದವರು ಅದೆಷ್ಟು ಜನರಿದ್ದಾರೆ ಎನ್ನುವುದು ಬೇರೆ ಮಾತು. ಸಿಕ್ಕಿ ಬಿದ್ದವರೇ ಈ ಪರಿ ಇರುವುದು ನೋಡಿ ಖಂಡಿತ ಆಶ್ಚರ್ಯವಾಗುತ್ತದೆ. ಇನ್ನು ಇವರಿಂದ ಸಂಗ್ರಹಿಸಲಾಗಿರುವ ಮೊತ್ತ 562.40 ಕೋಟಿ ರೂಪಾಯಿಗಳು.

ಈ ವಿಚಾರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲಿಖಿತರೂಪದಲ್ಲಿ ಉತ್ತರಿಸಿದ್ದಾರೆ. ಕಳೆದ ವರ್ಷ ಎಷ್ಟು ನಾಗರಿಕರು ಟಿಕೆಟ್ ರಹಿತರಾಗಿ ಪ್ರಯಾಣಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಟಿಕೆಟ್ ರಹಿತರಿಂದ ಸಂಗ್ರಹಿಸಲಾದ ಈ 562.40 ಕೋಟಿ ರೂಪಾಯಿಯಲ್ಲಿ ಟಿಕೆಟ್ ಬಾಬ್ತು ಸೇರದೇ ಕೇವಲ ಹೆಚ್ಚುವರಿ ಆಗಿ ಸಂಗ್ರಹಿಸಲಾದ ಮೊತ್ತವೇ ಇಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು ಟಿಕೆಟ್ ಚೆಕಿಂಗ್ ವಿಶೇಷ ಅಭಿಯಾನವನ್ನು ವಲಯ ರೈಲ್ವೆ ವಿಭಾಗಗಳಲ್ಲಿ ಆರಂಭಿಸಲು ಸಚಿವರು ನಿರ್ಧರಿಸಿದ್ದು, ಅದಕ್ಕಾಗಿ ರೈಲ್ವೆ ಇಲಾಖೆ ರೂಪುರೇಶೆ ಸಿದ್ಧಪಡಿಸುತ್ತಿದೆ. ಇನ್ನು ಉಳಿದ ದಿನಗಳಲ್ಲಿ ಟಿಕೆಟ್ ಚೆಕಿಂಗ್ ಕಾರ್ಯಗಳು ನಿತ್ಯ ನಡೆಯುತ್ತಿದ್ದು, ಆಗಾಗ ವಿಶೇಷ ಅಭಿಯಾನವನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search