• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದೇ ವರ್ಷದಲ್ಲಿ ಟಿಕೆಟ್ ಇಲ್ಲದೇ ರೈಲು ಪ್ರಯಾಣ ಮಾಡಿದವರ ಸಂಖ್ಯೆ 2.16 ಕೋಟಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಭಾರತೀಯ ರೈಲ್ವೆ ದೇಶದ ನರನಾಡಿಯಂತೆ ಕೆಲಸ ಮಾಡುತ್ತದೆ ಎಂದರೆ ತಪ್ಪಿಲ್ಲ. ಇಷ್ಟು ದೊಡ್ಡ ದೇಶದಲ್ಲಿ ಮೂಲೆ ಮೂಲೆಗಳ ತನಕ ಹರಡಿರುವ ರೈಲ್ವೆ ಟ್ರಾಕುಗಳ ಮೇಲೆ ನಿತ್ಯ ಲಕ್ಷಾಂತರ ರೈಲು ಬೋಗಿಗಳು ಸಂಚರಿಸುತ್ತವೆ. ಕೋಟ್ಯಾಂತರ ಜನ ತಮ್ಮ ನಿಗದಿತ ಸ್ಥಳವನ್ನು ಕ್ರಮಿಸಿ ತಮ್ಮ ಉದ್ಯೋಗ, ವ್ಯವಹಾರಗಳನ್ನು, ಪ್ರವಾಸವನ್ನು ಸಂಪೂರ್ಣಗೊಳಿಸಿರುತ್ತಾರೆ. ಇದರಿಂದ ರೈಲ್ವೆ ಇಲಾಖೆಗೂ ಕೋಟ್ಯಾಂತರ ರೂಪಾಯಿ ಲಾಭ ಆಗಿರುತ್ತದೆ. ಆದರೆ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ತೆಗೆದುಕೊಂಡಿರುತ್ತಾರಾ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

2023 – 24 ನೇ ಇಸವಿಯಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ ಮಾಡಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದವರ ಸಂಖ್ಯೆಯೇ 2.16 ಕೋಟಿ. ಇನ್ನು ಸಿಕ್ಕಿ ಬೀಳದವರು ಅದೆಷ್ಟು ಜನರಿದ್ದಾರೆ ಎನ್ನುವುದು ಬೇರೆ ಮಾತು. ಸಿಕ್ಕಿ ಬಿದ್ದವರೇ ಈ ಪರಿ ಇರುವುದು ನೋಡಿ ಖಂಡಿತ ಆಶ್ಚರ್ಯವಾಗುತ್ತದೆ. ಇನ್ನು ಇವರಿಂದ ಸಂಗ್ರಹಿಸಲಾಗಿರುವ ಮೊತ್ತ 562.40 ಕೋಟಿ ರೂಪಾಯಿಗಳು.

ಈ ವಿಚಾರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲಿಖಿತರೂಪದಲ್ಲಿ ಉತ್ತರಿಸಿದ್ದಾರೆ. ಕಳೆದ ವರ್ಷ ಎಷ್ಟು ನಾಗರಿಕರು ಟಿಕೆಟ್ ರಹಿತರಾಗಿ ಪ್ರಯಾಣಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಟಿಕೆಟ್ ರಹಿತರಿಂದ ಸಂಗ್ರಹಿಸಲಾದ ಈ 562.40 ಕೋಟಿ ರೂಪಾಯಿಯಲ್ಲಿ ಟಿಕೆಟ್ ಬಾಬ್ತು ಸೇರದೇ ಕೇವಲ ಹೆಚ್ಚುವರಿ ಆಗಿ ಸಂಗ್ರಹಿಸಲಾದ ಮೊತ್ತವೇ ಇಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು ಟಿಕೆಟ್ ಚೆಕಿಂಗ್ ವಿಶೇಷ ಅಭಿಯಾನವನ್ನು ವಲಯ ರೈಲ್ವೆ ವಿಭಾಗಗಳಲ್ಲಿ ಆರಂಭಿಸಲು ಸಚಿವರು ನಿರ್ಧರಿಸಿದ್ದು, ಅದಕ್ಕಾಗಿ ರೈಲ್ವೆ ಇಲಾಖೆ ರೂಪುರೇಶೆ ಸಿದ್ಧಪಡಿಸುತ್ತಿದೆ. ಇನ್ನು ಉಳಿದ ದಿನಗಳಲ್ಲಿ ಟಿಕೆಟ್ ಚೆಕಿಂಗ್ ಕಾರ್ಯಗಳು ನಿತ್ಯ ನಡೆಯುತ್ತಿದ್ದು, ಆಗಾಗ ವಿಶೇಷ ಅಭಿಯಾನವನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search