• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದೇ ವರ್ಷದಲ್ಲಿ ಟಿಕೆಟ್ ಇಲ್ಲದೇ ರೈಲು ಪ್ರಯಾಣ ಮಾಡಿದವರ ಸಂಖ್ಯೆ 2.16 ಕೋಟಿ!

Tulunadu News Posted On March 28, 2025
0


0
Shares
  • Share On Facebook
  • Tweet It

ಭಾರತೀಯ ರೈಲ್ವೆ ದೇಶದ ನರನಾಡಿಯಂತೆ ಕೆಲಸ ಮಾಡುತ್ತದೆ ಎಂದರೆ ತಪ್ಪಿಲ್ಲ. ಇಷ್ಟು ದೊಡ್ಡ ದೇಶದಲ್ಲಿ ಮೂಲೆ ಮೂಲೆಗಳ ತನಕ ಹರಡಿರುವ ರೈಲ್ವೆ ಟ್ರಾಕುಗಳ ಮೇಲೆ ನಿತ್ಯ ಲಕ್ಷಾಂತರ ರೈಲು ಬೋಗಿಗಳು ಸಂಚರಿಸುತ್ತವೆ. ಕೋಟ್ಯಾಂತರ ಜನ ತಮ್ಮ ನಿಗದಿತ ಸ್ಥಳವನ್ನು ಕ್ರಮಿಸಿ ತಮ್ಮ ಉದ್ಯೋಗ, ವ್ಯವಹಾರಗಳನ್ನು, ಪ್ರವಾಸವನ್ನು ಸಂಪೂರ್ಣಗೊಳಿಸಿರುತ್ತಾರೆ. ಇದರಿಂದ ರೈಲ್ವೆ ಇಲಾಖೆಗೂ ಕೋಟ್ಯಾಂತರ ರೂಪಾಯಿ ಲಾಭ ಆಗಿರುತ್ತದೆ. ಆದರೆ ಪ್ರಯಾಣಿಸುವ ಪ್ರತಿಯೊಬ್ಬರು ಟಿಕೆಟ್ ತೆಗೆದುಕೊಂಡಿರುತ್ತಾರಾ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

2023 – 24 ನೇ ಇಸವಿಯಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ ಮಾಡಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದವರ ಸಂಖ್ಯೆಯೇ 2.16 ಕೋಟಿ. ಇನ್ನು ಸಿಕ್ಕಿ ಬೀಳದವರು ಅದೆಷ್ಟು ಜನರಿದ್ದಾರೆ ಎನ್ನುವುದು ಬೇರೆ ಮಾತು. ಸಿಕ್ಕಿ ಬಿದ್ದವರೇ ಈ ಪರಿ ಇರುವುದು ನೋಡಿ ಖಂಡಿತ ಆಶ್ಚರ್ಯವಾಗುತ್ತದೆ. ಇನ್ನು ಇವರಿಂದ ಸಂಗ್ರಹಿಸಲಾಗಿರುವ ಮೊತ್ತ 562.40 ಕೋಟಿ ರೂಪಾಯಿಗಳು.

ಈ ವಿಚಾರವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲಿಖಿತರೂಪದಲ್ಲಿ ಉತ್ತರಿಸಿದ್ದಾರೆ. ಕಳೆದ ವರ್ಷ ಎಷ್ಟು ನಾಗರಿಕರು ಟಿಕೆಟ್ ರಹಿತರಾಗಿ ಪ್ರಯಾಣಿಸುವಾಗ ಸಿಕ್ಕಿ ಬಿದ್ದಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದ್ದಾರೆ. ಟಿಕೆಟ್ ರಹಿತರಿಂದ ಸಂಗ್ರಹಿಸಲಾದ ಈ 562.40 ಕೋಟಿ ರೂಪಾಯಿಯಲ್ಲಿ ಟಿಕೆಟ್ ಬಾಬ್ತು ಸೇರದೇ ಕೇವಲ ಹೆಚ್ಚುವರಿ ಆಗಿ ಸಂಗ್ರಹಿಸಲಾದ ಮೊತ್ತವೇ ಇಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನು ಟಿಕೆಟ್ ಚೆಕಿಂಗ್ ವಿಶೇಷ ಅಭಿಯಾನವನ್ನು ವಲಯ ರೈಲ್ವೆ ವಿಭಾಗಗಳಲ್ಲಿ ಆರಂಭಿಸಲು ಸಚಿವರು ನಿರ್ಧರಿಸಿದ್ದು, ಅದಕ್ಕಾಗಿ ರೈಲ್ವೆ ಇಲಾಖೆ ರೂಪುರೇಶೆ ಸಿದ್ಧಪಡಿಸುತ್ತಿದೆ. ಇನ್ನು ಉಳಿದ ದಿನಗಳಲ್ಲಿ ಟಿಕೆಟ್ ಚೆಕಿಂಗ್ ಕಾರ್ಯಗಳು ನಿತ್ಯ ನಡೆಯುತ್ತಿದ್ದು, ಆಗಾಗ ವಿಶೇಷ ಅಭಿಯಾನವನ್ನು ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search