• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಹೋಟೇಲ್ ಬಿಲ್ ಗಳಲ್ಲಿ ಸೇವಾ ಶುಲ್ಕ ಹಾಕಿದರೆ ಕೊಡಲೇಬೇಕಾಗಿಲ್ಲ!

Tulunadu News Posted On March 29, 2025
0


0
Shares
  • Share On Facebook
  • Tweet It

ನೀವು ಹೋಟೇಲುಗಳಲ್ಲಿ ತಿಂಡಿ, ತಿನಿಸು, ಊಟ ಸವಿದ ನಂತರ ಬಿಲ್ ಬಂದಾಗ ಅದರಲ್ಲಿ ಸರ್ವಿಸ್ ಚಾರ್ಜ್ ಎಂದು ಪ್ರತ್ಯೇಕ ಇಂತಿಷ್ಟು ಹಣ ಹಾಕಿರುತ್ತಾರೆ. ನೀವು ಅಲ್ಲಿ ಅದು ಯಾಕೆ ಎಂದು ಕೇಳಲು ಹೋಗುವುದಿಲ್ಲ. ಒಂದು ವೇಳೆ ಕೇಳಿದರೂ ಅದು ಬಡಿಸುವವರಿಗೆ ಕೊಡುವ ಹಣ ಎಂದು ಹೋಟೇಲಿನವರು ಉತ್ತರಿಸಿಯಾರು. ಆದರೆ ಹೀಗೆ ಗ್ರಾಹಕರಿಂದ ಹಣವನ್ನು ವಸೂಲಿ ಮಾಡುವುದು ಕಾನೂನು ಬಾಹಿರ ಎನ್ನುವುದನ್ನು ದೆಹಲಿ ಹೈಕೋರ್ಟ್ ತೀರ್ಪು ನೀಡಿ ಆದೇಶಿಸಿದೆ.

ಇದು ಒಂದು ರೀತಿಯಲ್ಲಿ ಗ್ರಾಹಕರಿಗೆ ಸಂದ ಜಯ. ಹೋಟೇಲುಗಳು ಮತ್ತು ರೆಸ್ಟೋರೆಂಟ್ ಗಳು ಬಿಲ್ ಗಳ ಮೇಲೆ ಕಡ್ಡಾಯವಾಗಿ ಸೇವಾ ತೆರಿಗೆಯನ್ನು ವಿಧಿಸುವುದನ್ನು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ನಿರ್ಭಂದಿಸಿದೆ. ಇದನ್ನು ವಿರೋಧಿಸಿ ಕೆಲವು ಹೋಟೇಲುಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದವು. ಆದರೆ ಈ ಬಗ್ಗೆ ಸ್ಪಷ್ಟಪಡಿಸಿದ ನ್ಯಾಯಾಲಯ ಹೋಟೇಲುಗಳು ಹೀಗೆ ಗ್ರಾಹಕರಿಂದ ವಸೂಲಿ ಮಾಡುವ ಹಣವನ್ನು ಬಡಿಸುವವರಿಗೆ ನೀಡುತ್ತದೆ ಎನ್ನುವುದಕ್ಕೆ ಯಾವುದೇ ಆಧಾರ ಇಲ್ಲ. ಇದು ಗ್ರಾಹಕರಿಂದ ವಸೂಲಿ ಮಾಡುವ ಬಲವಂತದ ಕ್ರಮ. ಇದು ಗ್ರಾಹಕರ ದಾರಿ ತಪ್ಪಿಸುವ, ಮೋಸದ ಹಾಗೂ ಅನ್ಯಾಯಯುತ ವ್ಯಾಪಾರ ಪದ್ಥತಿ ಎಂದು ಹೇಳಿದ್ದು ಮಾತ್ರವಲ್ಲದೇ ಸಿಸಿಪಿಎ ನಿರ್ಧಾರ ಪ್ರಶ್ನಿಸಿದ್ದ ಇಬ್ಬರು ಅರ್ಜಿದಾರರಿಗೆ ತಲಾ 1 ಲಕ್ಷ ರೂ ದಂಡ ವಿಧಿಸಿದೆ.

ಹೋಟೇಲುಗಳು ಊಟ, ತಿಂಡಿಯನ್ನು ಲಾಭ ಇಟ್ಟುಕೊಂಡೇ ಮಾರಾಟ ಮಾಡುತ್ತವೆ. ಅದರಲ್ಲಿಯೇ ಅವು ನೌಕರರ ವೇತನದ ಖರ್ಚನ್ನು ಕೂಡ ಸೇರಿಸಿರುತ್ತವೆ. ಅಷ್ಟಿದ್ದರೂ ಸೇವಾ ಶುಲ್ಕವನ್ನು ಇದರೊಂದಿಗೆ ಪ್ರತ್ಯೇಕವಾಗಿ ಸೇರಿಸಿ ಬಿಲ್ ನೀಡುತ್ತವೆ. ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಸೆಕ್ಷನ್ 2 (47) ರ ಪ್ರಕಾರ ಇದು ಅನ್ಯಾಯದ ವ್ಯಾಪಾರ ಕ್ರಮವಾಗಿದೆ. ಇದನ್ನು ಅನುಸರಿಸಿ 2022 ರಲ್ಲಿಯೇ ಸಿಸಿಪಿಎ ಸೇವಾ ಶುಲ್ಕ ಐಚ್ಚಿಕ ಎಂದು ಹೇಳಿದೆ. ಇನ್ನು ಈ ಸಂಸ್ಥೆಗೆ ಆದೇಶ ಹೊರಡಿಸುವ ಅಧಿಕಾರ ಇದೆ ಎಂದು ಕೋರ್ಟ್ ಹೇಳಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search