• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯತ್ನಾಳರನ್ನು ಕಾಂಗ್ರೆಸ್ಸಿಗೆ ಕರೆತರಲು ಸಿದ್ಧ – ಕಾಂಗ್ರೆಸ್ ಶಾಸಕ!

Tulunadu News Posted On March 29, 2025
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟಿತಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಮ್ಮಿತಿಸಿದರೆ ಕರೆದುಕೊಂಡು ಬರಲು ಸಿದ್ಧ ಎಂದು ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕರೂ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ, ಶಾಸಕರೂ ಆಗಿರುವ ರಾಜು ಕಾಗೆ ಹೇಳಿದ್ದಾರೆ. ಒಂದು ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಯತ್ನಾಳ್ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬರೋಣ ಎಂದು ನಿರ್ಧರಿಸಿ ಆ ಹೊಣೆಯನ್ನು ನನಗೆ ನೀಡಿದರೆ ಖುಷಿಯಿಂದ ಆ ಜವಾಬ್ದಾರಿ ನಿರ್ವಹಿಸುವೆ ಎಂದು ರಾಜು ಕಾಗೆ ಹೇಳಿಕೊಂಡಿದ್ದಾರೆ.

ಈ ಮೂಲಕ ಯತ್ನಾಳ್ ಅವರಿಗೆ ಕಾಂಗ್ರೆಸ್ ಬಾಗಿಲು ಸಂಪೂರ್ಣವಾಗಿ ಮುಚ್ಚಿಲ್ಲ ಎನ್ನುವುದು ಸಾಬೀತಾಗಿದೆ. ಆದರೆ ಅವರು ಕಾಂಗ್ರೆಸ್ಸಿಗೆ ಹೋಗಲು ಅವರ ಮನಸ್ಸು, ಆತ್ಮಸಾಕ್ಷಿ, ಹಿಂದೂ ಹುಲಿ ಎನ್ನುವ ಪಟ್ಟ ಒಪ್ಪುತ್ತಾ ಎನ್ನುವುದು ಈಗಿನ ಪ್ರಶ್ನೆ. ಇನ್ನು ಅವರು ಕಾಂಗ್ರೆಸ್ಸಿಗೆ ಹೋದರೆ ಅವರೊಂದಿಗಿರುವ ಭಿನ್ನರ ಕಥೆ ಏನು? ಮೊದಲನೇಯದಾಗಿ ರಮೇಶ್ ಜಾರಕಿಹೊಳಿ. ಅವರಿಗೂ ಡಿಕೆಶಿಗೂ ಒಂದಾಗುವ ವಿಷಯ ಸಾಧ್ಯವೇ ಇಲ್ಲ. ಆದ್ದರಿಂದ ಅಲ್ಲಿ ಭಿನ್ನರ ಇನ್ನೊಬ್ಬ ಪ್ರಮುಖ ನಾಯಕನಿಗೆ ಕಾಂಗ್ರೆಸ್ಸಿನ ಬಾಗಿಲು ಮುಚ್ಚಿದಂತೆ.

ಇನ್ನು ಎರಡನೇ ನಾಯಕ ಮಾಜಿ ಸಚಿವ ಕುಮಾರ ಬಂಗಾರಪ್ಪ. ಅವರ ಸಹೋದರ ಮಧು ಬಂಗಾರಪ್ಪ ರಾಜ್ಯದ ಸಚಿವ. ಅವರಿಗೂ ಸಹೋದರನಿಗೂ ಒಂದಾಗುವುದು ಅಸಾಧ್ಯ. ಹಾಗಿರುವಾಗ ಮತ್ತೊಬ್ಬ ನಾಯಕನಿಗೂ ಬಾಗಿಲು ಮುಚ್ಚಿದಂತೆ. ಸಿದ್ದೇಶ್ವರ್ ತಮ್ಮದೇ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧ ಕಟ್ಟಿಕೊಂಡು ಏಣಗುತ್ತಿರುವಾಗ ಅವರು ಕಾಂಗ್ರೆಸ್ಸಿಗೆ ಹೋಗುವುದು ಕಷ್ಟದ ಮಾತು. ಹೀಗೆ ಒಬ್ಬೊಬ್ಬರು ಭಿನ್ನರು ಕಾಂಗ್ರೆಸ್ಸಿನೊಳಗೆ ಹೋಗಲು ಒಂದೊಂದು ಸಮಸ್ಯೆ ಎದುರಿಸುವಾಗ ಅಲ್ಲಿ ಯತ್ನಾಳ್ ಹೇಗೆ ತಾನೆ ಕಾಲಿಡಲು ಸಾಧ್ಯ ಎನ್ನುವ ಪರಿಸ್ಥಿತಿ ಇದೆ.

ಆದ್ದರಿಂದ ಯತ್ನಾಳ್ ಒಬ್ಬರೇ ಆಗಿ ಯೋಚಿಸುವ ಸ್ಥಿತಿಯಲ್ಲಿ ಇಲ್ಲ. ಸದ್ಯಕ್ಕೆ ಅವರ ಎದುರಿಗಿರುವ ಒಂದೇ ದಾರಿ ಎಂದರೆ ಹೈಕಮಾಂಡ್ ಎದುರು ವಿನಂತಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವಂತೆ ಮಾಡುವುದು. ಅಲ್ಲಿಯ ತನಕ ಯಾವ ಬಣವೂ ಬೇಡಾ ಎಂದು ಮೌನವಾಗಿರುವುದು ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search