• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯತ್ನಾಳರನ್ನು ಕಾಂಗ್ರೆಸ್ಸಿಗೆ ಕರೆತರಲು ಸಿದ್ಧ – ಕಾಂಗ್ರೆಸ್ ಶಾಸಕ!

Tulunadu News Posted On March 29, 2025
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟಿತಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಮ್ಮಿತಿಸಿದರೆ ಕರೆದುಕೊಂಡು ಬರಲು ಸಿದ್ಧ ಎಂದು ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕರೂ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ, ಶಾಸಕರೂ ಆಗಿರುವ ರಾಜು ಕಾಗೆ ಹೇಳಿದ್ದಾರೆ. ಒಂದು ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಯತ್ನಾಳ್ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬರೋಣ ಎಂದು ನಿರ್ಧರಿಸಿ ಆ ಹೊಣೆಯನ್ನು ನನಗೆ ನೀಡಿದರೆ ಖುಷಿಯಿಂದ ಆ ಜವಾಬ್ದಾರಿ ನಿರ್ವಹಿಸುವೆ ಎಂದು ರಾಜು ಕಾಗೆ ಹೇಳಿಕೊಂಡಿದ್ದಾರೆ.

ಈ ಮೂಲಕ ಯತ್ನಾಳ್ ಅವರಿಗೆ ಕಾಂಗ್ರೆಸ್ ಬಾಗಿಲು ಸಂಪೂರ್ಣವಾಗಿ ಮುಚ್ಚಿಲ್ಲ ಎನ್ನುವುದು ಸಾಬೀತಾಗಿದೆ. ಆದರೆ ಅವರು ಕಾಂಗ್ರೆಸ್ಸಿಗೆ ಹೋಗಲು ಅವರ ಮನಸ್ಸು, ಆತ್ಮಸಾಕ್ಷಿ, ಹಿಂದೂ ಹುಲಿ ಎನ್ನುವ ಪಟ್ಟ ಒಪ್ಪುತ್ತಾ ಎನ್ನುವುದು ಈಗಿನ ಪ್ರಶ್ನೆ. ಇನ್ನು ಅವರು ಕಾಂಗ್ರೆಸ್ಸಿಗೆ ಹೋದರೆ ಅವರೊಂದಿಗಿರುವ ಭಿನ್ನರ ಕಥೆ ಏನು? ಮೊದಲನೇಯದಾಗಿ ರಮೇಶ್ ಜಾರಕಿಹೊಳಿ. ಅವರಿಗೂ ಡಿಕೆಶಿಗೂ ಒಂದಾಗುವ ವಿಷಯ ಸಾಧ್ಯವೇ ಇಲ್ಲ. ಆದ್ದರಿಂದ ಅಲ್ಲಿ ಭಿನ್ನರ ಇನ್ನೊಬ್ಬ ಪ್ರಮುಖ ನಾಯಕನಿಗೆ ಕಾಂಗ್ರೆಸ್ಸಿನ ಬಾಗಿಲು ಮುಚ್ಚಿದಂತೆ.

ಇನ್ನು ಎರಡನೇ ನಾಯಕ ಮಾಜಿ ಸಚಿವ ಕುಮಾರ ಬಂಗಾರಪ್ಪ. ಅವರ ಸಹೋದರ ಮಧು ಬಂಗಾರಪ್ಪ ರಾಜ್ಯದ ಸಚಿವ. ಅವರಿಗೂ ಸಹೋದರನಿಗೂ ಒಂದಾಗುವುದು ಅಸಾಧ್ಯ. ಹಾಗಿರುವಾಗ ಮತ್ತೊಬ್ಬ ನಾಯಕನಿಗೂ ಬಾಗಿಲು ಮುಚ್ಚಿದಂತೆ. ಸಿದ್ದೇಶ್ವರ್ ತಮ್ಮದೇ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧ ಕಟ್ಟಿಕೊಂಡು ಏಣಗುತ್ತಿರುವಾಗ ಅವರು ಕಾಂಗ್ರೆಸ್ಸಿಗೆ ಹೋಗುವುದು ಕಷ್ಟದ ಮಾತು. ಹೀಗೆ ಒಬ್ಬೊಬ್ಬರು ಭಿನ್ನರು ಕಾಂಗ್ರೆಸ್ಸಿನೊಳಗೆ ಹೋಗಲು ಒಂದೊಂದು ಸಮಸ್ಯೆ ಎದುರಿಸುವಾಗ ಅಲ್ಲಿ ಯತ್ನಾಳ್ ಹೇಗೆ ತಾನೆ ಕಾಲಿಡಲು ಸಾಧ್ಯ ಎನ್ನುವ ಪರಿಸ್ಥಿತಿ ಇದೆ.

ಆದ್ದರಿಂದ ಯತ್ನಾಳ್ ಒಬ್ಬರೇ ಆಗಿ ಯೋಚಿಸುವ ಸ್ಥಿತಿಯಲ್ಲಿ ಇಲ್ಲ. ಸದ್ಯಕ್ಕೆ ಅವರ ಎದುರಿಗಿರುವ ಒಂದೇ ದಾರಿ ಎಂದರೆ ಹೈಕಮಾಂಡ್ ಎದುರು ವಿನಂತಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವಂತೆ ಮಾಡುವುದು. ಅಲ್ಲಿಯ ತನಕ ಯಾವ ಬಣವೂ ಬೇಡಾ ಎಂದು ಮೌನವಾಗಿರುವುದು ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search