• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯತ್ನಾಳರನ್ನು ಕಾಂಗ್ರೆಸ್ಸಿಗೆ ಕರೆತರಲು ಸಿದ್ಧ – ಕಾಂಗ್ರೆಸ್ ಶಾಸಕ!

Tulunadu News Posted On March 29, 2025
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟಿತಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸಮ್ಮಿತಿಸಿದರೆ ಕರೆದುಕೊಂಡು ಬರಲು ಸಿದ್ಧ ಎಂದು ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕರೂ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ, ಶಾಸಕರೂ ಆಗಿರುವ ರಾಜು ಕಾಗೆ ಹೇಳಿದ್ದಾರೆ. ಒಂದು ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಜೊತೆ ಚರ್ಚೆ ಮಾಡಿ ಯತ್ನಾಳ್ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬರೋಣ ಎಂದು ನಿರ್ಧರಿಸಿ ಆ ಹೊಣೆಯನ್ನು ನನಗೆ ನೀಡಿದರೆ ಖುಷಿಯಿಂದ ಆ ಜವಾಬ್ದಾರಿ ನಿರ್ವಹಿಸುವೆ ಎಂದು ರಾಜು ಕಾಗೆ ಹೇಳಿಕೊಂಡಿದ್ದಾರೆ.

ಈ ಮೂಲಕ ಯತ್ನಾಳ್ ಅವರಿಗೆ ಕಾಂಗ್ರೆಸ್ ಬಾಗಿಲು ಸಂಪೂರ್ಣವಾಗಿ ಮುಚ್ಚಿಲ್ಲ ಎನ್ನುವುದು ಸಾಬೀತಾಗಿದೆ. ಆದರೆ ಅವರು ಕಾಂಗ್ರೆಸ್ಸಿಗೆ ಹೋಗಲು ಅವರ ಮನಸ್ಸು, ಆತ್ಮಸಾಕ್ಷಿ, ಹಿಂದೂ ಹುಲಿ ಎನ್ನುವ ಪಟ್ಟ ಒಪ್ಪುತ್ತಾ ಎನ್ನುವುದು ಈಗಿನ ಪ್ರಶ್ನೆ. ಇನ್ನು ಅವರು ಕಾಂಗ್ರೆಸ್ಸಿಗೆ ಹೋದರೆ ಅವರೊಂದಿಗಿರುವ ಭಿನ್ನರ ಕಥೆ ಏನು? ಮೊದಲನೇಯದಾಗಿ ರಮೇಶ್ ಜಾರಕಿಹೊಳಿ. ಅವರಿಗೂ ಡಿಕೆಶಿಗೂ ಒಂದಾಗುವ ವಿಷಯ ಸಾಧ್ಯವೇ ಇಲ್ಲ. ಆದ್ದರಿಂದ ಅಲ್ಲಿ ಭಿನ್ನರ ಇನ್ನೊಬ್ಬ ಪ್ರಮುಖ ನಾಯಕನಿಗೆ ಕಾಂಗ್ರೆಸ್ಸಿನ ಬಾಗಿಲು ಮುಚ್ಚಿದಂತೆ.

ಇನ್ನು ಎರಡನೇ ನಾಯಕ ಮಾಜಿ ಸಚಿವ ಕುಮಾರ ಬಂಗಾರಪ್ಪ. ಅವರ ಸಹೋದರ ಮಧು ಬಂಗಾರಪ್ಪ ರಾಜ್ಯದ ಸಚಿವ. ಅವರಿಗೂ ಸಹೋದರನಿಗೂ ಒಂದಾಗುವುದು ಅಸಾಧ್ಯ. ಹಾಗಿರುವಾಗ ಮತ್ತೊಬ್ಬ ನಾಯಕನಿಗೂ ಬಾಗಿಲು ಮುಚ್ಚಿದಂತೆ. ಸಿದ್ದೇಶ್ವರ್ ತಮ್ಮದೇ ಜಿಲ್ಲೆಯಲ್ಲಿ ಕಾಂಗ್ರೆಸ್ ವಿರೋಧ ಕಟ್ಟಿಕೊಂಡು ಏಣಗುತ್ತಿರುವಾಗ ಅವರು ಕಾಂಗ್ರೆಸ್ಸಿಗೆ ಹೋಗುವುದು ಕಷ್ಟದ ಮಾತು. ಹೀಗೆ ಒಬ್ಬೊಬ್ಬರು ಭಿನ್ನರು ಕಾಂಗ್ರೆಸ್ಸಿನೊಳಗೆ ಹೋಗಲು ಒಂದೊಂದು ಸಮಸ್ಯೆ ಎದುರಿಸುವಾಗ ಅಲ್ಲಿ ಯತ್ನಾಳ್ ಹೇಗೆ ತಾನೆ ಕಾಲಿಡಲು ಸಾಧ್ಯ ಎನ್ನುವ ಪರಿಸ್ಥಿತಿ ಇದೆ.

ಆದ್ದರಿಂದ ಯತ್ನಾಳ್ ಒಬ್ಬರೇ ಆಗಿ ಯೋಚಿಸುವ ಸ್ಥಿತಿಯಲ್ಲಿ ಇಲ್ಲ. ಸದ್ಯಕ್ಕೆ ಅವರ ಎದುರಿಗಿರುವ ಒಂದೇ ದಾರಿ ಎಂದರೆ ಹೈಕಮಾಂಡ್ ಎದುರು ವಿನಂತಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವಂತೆ ಮಾಡುವುದು. ಅಲ್ಲಿಯ ತನಕ ಯಾವ ಬಣವೂ ಬೇಡಾ ಎಂದು ಮೌನವಾಗಿರುವುದು ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search