• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಕ್ತಪರೀಕ್ಷೆಗೆ ಇನ್ನು ಸೂಜಿ ಚುಚ್ಚಬೇಕಾಗಿಲ್ಲ!

Tulunadu News Posted On March 31, 2025
0


0
Shares
  • Share On Facebook
  • Tweet It

ರಕ್ತದಲ್ಲಿನ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಸೂಜಿ ಚುಚ್ಚುವ ದಾರಿಗೆ ಪರ್ಯಾಯವಾಗಿ ಒಂದು ಸೆಕೆಂಡ್ ಕೂಡ ನೋವಿಲ್ಲದೇ, ಚರ್ಮಕ್ಕೆ ರಂಧ್ರ ಇಲ್ಲದೇ ” ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್” ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ನಗರ ಭಾರತೀಯ ವಿಜ್ಞಾನ ಸಂಸ್ಥೆಯ ” ಇನ್ ಸ್ಟುಮೆಂಟೇಷನ್ ಆಂಡ್ ಅಪ್ಲೈಡ್ ಫಿಸಿಕ್ಸ್” ( ಐಎಪಿ) ವಿಭಾಗ ಮಾಡಿದೆ.

ಈ ಕುರಿತು ಸಂಶೋಧನಾ ವರದಿ ಬಿಡುಗಡೆ ಮಾಡಲಾಗಿದೆ. ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಆಗಾಗ ಸೂಜಿ ಚುಚ್ಚುವುದರಿಂದ ಅವರಿಗೆ ಕಿರಿಕಿರಿ ಆಗುವ ಜೊತೆ ಸೋಂಕು ಉಂಟಾಗುವ ಸಾಧ್ಯತೆಯೂ ಇದೆ. ಆದರೆ ಈ ಸಂಶೋಧನೆಯಲ್ಲಿ ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್ ತಂತ್ರ ಬಳಸಿ ಅಂಗಾಂಶದ ಮೇಲೆ ಲೇಸರ್ ಕಿರಣಗಳನ್ನು ಬಿಡಲಾಗುತ್ತದೆ. ಆಗ ಅಂಗಾಂಶ ಬಿಸಿಯಾಗಿ ಕಂಪನ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ಅಲ್ಟ್ರಾಸಾನಿಕ್ ಸೌಂಡ್ ವೇವ್ಸ್ ಗಳನ್ನು ಸೂಕ್ಷ್ಮ ಸೆನ್ಸರ್ ಗಳು ಸೆರೆಹಿಡಿಯುತ್ತವೆ.

ಲೇಸರ್ ಕಿರಣಗಳನ್ನು ಬಿಟ್ಟಾಗ ಅಂಗಾಶದೊಳಗಿನ ಬೇರೆ ಬೇರೆ ಅಣುಗಳು ಮತ್ತು ಬೇರೆ ಬೇರೆ ಅಂಶಗಳು ಬೇರೆ ಬೇರೆ ರೀತಿಯಲ್ಲಿ ಧ್ವನಿ ತರಂಗಗಳ ಮೂಲಕಪ್ರತಿಕ್ರಿಯಿಸುತ್ತವೆ. ಫಲಿತಾಂಶದ ಆಧಾರದ ಮೇಲೆ ಗ್ಲೂಕೋಸ್ ಪ್ರಮಾಣವನ್ನು ಕಂಡುಹಿಡಿಯಬಹುದು. ಈ ತಂತ್ರದಲ್ಲಿ ಅಂಗಾಂಶಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವುದು ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಐಐಎಸ್ಸಿಯ ಐಎಪಿ ವಿಭಾಗದ ಸಹಾಯಕ ಪ್ರಾಧ್ಯಾಪಕರು ತಿಳಿಸಿದ್ದಾರೆ.

ನಿರ್ದಿಷ್ಟ್ಯ ದಿಕ್ಕಿನಲ್ಲಿ ಸಾಗುವ ಧ್ರುವೀಕೃತ ಕಿರಣಗಳನ್ನು ಬಳಸಿ ಗ್ಲೂಕೋಸ್ ಅಣುವಿನ ಸಾಂದ್ರತೆ ಮಾತ್ರ ಅಳತೆ ಮಾಡಲಾಗಿದೆ. ಆರೋಗ್ಯಕರ ವ್ಯಕ್ತಿ ದೇಹದಲ್ಲಿ ಊಟಕ್ಕೆ ಮೊದಲು ಮತ್ತು ಊಟದ ನಂತರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಳೆಯಲು 3 ದಿನಗಳ ಕಾಲ ಪ್ರಾಯೋಗಿಕ ಅಧ್ಯಯನ ಕೂಡ ಮಾಡಲಾಗಿದೆ. ಈ ಪ್ರಯೋಗಕ್ಕೆ ಬಳಸಿರುವ ಲೇಸರ್ ಯಂತ್ರವು ಸಣ್ಣ ಪ್ರಮಾಣದ ಕಿರಣಗಳನ್ನು ಬಿಡುಗಡೆ ಮಾಡುತ್ತದೆ. ದುಬಾರಿಯಾಗಿದ್ದು, ಹೆಚ್ಚು ಸ್ಥಳಾವಕಾಶ ಬೇಕಾಗುತ್ತದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search