• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಕ್ತಪರೀಕ್ಷೆಗೆ ಇನ್ನು ಸೂಜಿ ಚುಚ್ಚಬೇಕಾಗಿಲ್ಲ!

Tulunadu News Posted On March 31, 2025


  • Share On Facebook
  • Tweet It

ರಕ್ತದಲ್ಲಿನ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಸೂಜಿ ಚುಚ್ಚುವ ದಾರಿಗೆ ಪರ್ಯಾಯವಾಗಿ ಒಂದು ಸೆಕೆಂಡ್ ಕೂಡ ನೋವಿಲ್ಲದೇ, ಚರ್ಮಕ್ಕೆ ರಂಧ್ರ ಇಲ್ಲದೇ ” ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್” ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ನಗರ ಭಾರತೀಯ ವಿಜ್ಞಾನ ಸಂಸ್ಥೆಯ ” ಇನ್ ಸ್ಟುಮೆಂಟೇಷನ್ ಆಂಡ್ ಅಪ್ಲೈಡ್ ಫಿಸಿಕ್ಸ್” ( ಐಎಪಿ) ವಿಭಾಗ ಮಾಡಿದೆ.

ಈ ಕುರಿತು ಸಂಶೋಧನಾ ವರದಿ ಬಿಡುಗಡೆ ಮಾಡಲಾಗಿದೆ. ಮಧುಮೇಹಿಗಳ ರಕ್ತದಲ್ಲಿ ಸಕ್ಕರೆ ಪ್ರಮಾಣ ಪತ್ತೆಹಚ್ಚಲು ಆಗಾಗ ಸೂಜಿ ಚುಚ್ಚುವುದರಿಂದ ಅವರಿಗೆ ಕಿರಿಕಿರಿ ಆಗುವ ಜೊತೆ ಸೋಂಕು ಉಂಟಾಗುವ ಸಾಧ್ಯತೆಯೂ ಇದೆ. ಆದರೆ ಈ ಸಂಶೋಧನೆಯಲ್ಲಿ ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್ ತಂತ್ರ ಬಳಸಿ ಅಂಗಾಂಶದ ಮೇಲೆ ಲೇಸರ್ ಕಿರಣಗಳನ್ನು ಬಿಡಲಾಗುತ್ತದೆ. ಆಗ ಅಂಗಾಂಶ ಬಿಸಿಯಾಗಿ ಕಂಪನ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಉಂಟಾಗುವ ಅಲ್ಟ್ರಾಸಾನಿಕ್ ಸೌಂಡ್ ವೇವ್ಸ್ ಗಳನ್ನು ಸೂಕ್ಷ್ಮ ಸೆನ್ಸರ್ ಗಳು ಸೆರೆಹಿಡಿಯುತ್ತವೆ.

ಲೇಸರ್ ಕಿರಣಗಳನ್ನು ಬಿಟ್ಟಾಗ ಅಂಗಾಶದೊಳಗಿನ ಬೇರೆ ಬೇರೆ ಅಣುಗಳು ಮತ್ತು ಬೇರೆ ಬೇರೆ ಅಂಶಗಳು ಬೇರೆ ಬೇರೆ ರೀತಿಯಲ್ಲಿ ಧ್ವನಿ ತರಂಗಗಳ ಮೂಲಕಪ್ರತಿಕ್ರಿಯಿಸುತ್ತವೆ. ಫಲಿತಾಂಶದ ಆಧಾರದ ಮೇಲೆ ಗ್ಲೂಕೋಸ್ ಪ್ರಮಾಣವನ್ನು ಕಂಡುಹಿಡಿಯಬಹುದು. ಈ ತಂತ್ರದಲ್ಲಿ ಅಂಗಾಂಶಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವುದು ಅಧ್ಯಯನದಲ್ಲಿ ಕಂಡುಬಂದಿದೆ ಎಂದು ಐಐಎಸ್ಸಿಯ ಐಎಪಿ ವಿಭಾಗದ ಸಹಾಯಕ ಪ್ರಾಧ್ಯಾಪಕರು ತಿಳಿಸಿದ್ದಾರೆ.

ನಿರ್ದಿಷ್ಟ್ಯ ದಿಕ್ಕಿನಲ್ಲಿ ಸಾಗುವ ಧ್ರುವೀಕೃತ ಕಿರಣಗಳನ್ನು ಬಳಸಿ ಗ್ಲೂಕೋಸ್ ಅಣುವಿನ ಸಾಂದ್ರತೆ ಮಾತ್ರ ಅಳತೆ ಮಾಡಲಾಗಿದೆ. ಆರೋಗ್ಯಕರ ವ್ಯಕ್ತಿ ದೇಹದಲ್ಲಿ ಊಟಕ್ಕೆ ಮೊದಲು ಮತ್ತು ಊಟದ ನಂತರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಳೆಯಲು 3 ದಿನಗಳ ಕಾಲ ಪ್ರಾಯೋಗಿಕ ಅಧ್ಯಯನ ಕೂಡ ಮಾಡಲಾಗಿದೆ. ಈ ಪ್ರಯೋಗಕ್ಕೆ ಬಳಸಿರುವ ಲೇಸರ್ ಯಂತ್ರವು ಸಣ್ಣ ಪ್ರಮಾಣದ ಕಿರಣಗಳನ್ನು ಬಿಡುಗಡೆ ಮಾಡುತ್ತದೆ. ದುಬಾರಿಯಾಗಿದ್ದು, ಹೆಚ್ಚು ಸ್ಥಳಾವಕಾಶ ಬೇಕಾಗುತ್ತದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search