• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೈಲು ಜಾಮರ್.. ನಾಗರಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

Tulunadu News Posted On March 31, 2025


  • Share On Facebook
  • Tweet It

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂಬ ಹಲವಾರು ದೂರುಗಳು ಕೇಳಿ ಬರುತ್ತಿವೆ. ತುರ್ತು ಸಂದರ್ಭದಲ್ಲಿ ಅಂತೂ ದೂರವಾಣಿ ಸಂಪರ್ಕ ಸಾಧ್ಯವಾಗದೇ ವೈದ್ಯಕೀಯ ಸೇವೆಯಂತಹ ಅಗತ್ಯ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ಜೈಲಿನ ಜಾಮರ್‌ ಜೈಲು ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವಂತೆ ಶಾಸಕರು ಒತ್ತಾಯಿಸಿದರು.

ಇತ್ತೀಚೆಗೆ ಮೂರು ವಾರಗಳಿಂದ ಈ ಸಮಸ್ಯೆ ತೀವ್ರವಾಗಿತ್ತು. ಅಗತ್ಯ ಬಿದ್ದಾಗ ಯಾರಿಗಾದರೂ ಕರೆ ಮಾಡಲು ಮುಂದಾದರೆ ಕಾಲ್ ಹೋಗುತ್ತಿರಲಿಲ್ಲ. ಇದರಿಂದ ಜನ ರೋಸಿ ಹೋಗಿದ್ದರು. ಸುತ್ತಮುತ್ತಲಿನ ವ್ಯಾಪಾರಿಗಳ, ವಸತಿ ಪ್ರದೇಶಗಳ ನಾಗರಿಕರ ಅಹವಾಲಿಗೆ ಸ್ಪಂದಿಸಿರುವ ಶಾಸಕ ವೇದವ್ಯಾಸ ಕಾಮತ್ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲು ಜೈಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಇನ್ನು ಯಾವಾಗ ಈ ಸಮಸ್ಯೆ ಪರಿಹಾರವಾಗುತ್ತೆ ಎಂದು ಜನ ಕಾತರದಿಂದ ಕಾಯುವಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search