• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲು ಜಾಮರ್.. ನಾಗರಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

Tulunadu News Posted On March 31, 2025
0


0
Shares
  • Share On Facebook
  • Tweet It

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ ತೀವ್ರ ಸಮಸ್ಯೆಯಾಗುತ್ತಿದ್ದು ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎಂಬ ಹಲವಾರು ದೂರುಗಳು ಕೇಳಿ ಬರುತ್ತಿವೆ. ತುರ್ತು ಸಂದರ್ಭದಲ್ಲಿ ಅಂತೂ ದೂರವಾಣಿ ಸಂಪರ್ಕ ಸಾಧ್ಯವಾಗದೇ ವೈದ್ಯಕೀಯ ಸೇವೆಯಂತಹ ಅಗತ್ಯ ಕಾರ್ಯಗಳಿಗೆ ತೊಂದರೆಯಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಕೂಡಲೇ ಸೂಕ್ತ ಕ್ರಮಕೈಗೊಂಡು ಜೈಲಿನ ಜಾಮರ್‌ ಜೈಲು ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ತಪ್ಪಿಸುವಂತೆ ಶಾಸಕರು ಒತ್ತಾಯಿಸಿದರು.

ಇತ್ತೀಚೆಗೆ ಮೂರು ವಾರಗಳಿಂದ ಈ ಸಮಸ್ಯೆ ತೀವ್ರವಾಗಿತ್ತು. ಅಗತ್ಯ ಬಿದ್ದಾಗ ಯಾರಿಗಾದರೂ ಕರೆ ಮಾಡಲು ಮುಂದಾದರೆ ಕಾಲ್ ಹೋಗುತ್ತಿರಲಿಲ್ಲ. ಇದರಿಂದ ಜನ ರೋಸಿ ಹೋಗಿದ್ದರು. ಸುತ್ತಮುತ್ತಲಿನ ವ್ಯಾಪಾರಿಗಳ, ವಸತಿ ಪ್ರದೇಶಗಳ ನಾಗರಿಕರ ಅಹವಾಲಿಗೆ ಸ್ಪಂದಿಸಿರುವ ಶಾಸಕ ವೇದವ್ಯಾಸ ಕಾಮತ್ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲು ಜೈಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಇನ್ನು ಯಾವಾಗ ಈ ಸಮಸ್ಯೆ ಪರಿಹಾರವಾಗುತ್ತೆ ಎಂದು ಜನ ಕಾತರದಿಂದ ಕಾಯುವಂತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search