• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೆನ್ನೈ ಸೂಪರ್ ಕಿಂಗ್ ಮಾಲೀಕರ ಒತ್ತಾಯಕ್ಕೆ ಧೋನಿ ಆಡುತ್ತಿದ್ದಾರಾ?

Tulunadu News Posted On April 1, 2025
0


0
Shares
  • Share On Facebook
  • Tweet It

ಮಹೇಂದ್ರ ಸಿಂಗ್ ಧೋನಿ ಜಗತ್ತು ಕಂಡ ಅತ್ಯುತ್ತಮ ವಿಕೆಟ್ ಕೀಪರ್ ಮತ್ತು ಮಾದರಿ ಕಪ್ತಾನ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಅವರ ಬ್ಯಾಟಿಂಗ್ ಅಬ್ಬರದ ಎದುರು ಯಾವ ಬೌಲರ್ ಗಳು ಕೂಡ ಮೈಚಳಿ ಬಿಟ್ಟು ಬೌಲ್ ಮಾಡುವುದು ಕಷ್ಟಸಾಧ್ಯ. ಧೋನಿ ಯಾವ ಐಪಿಎಲ್ ತಂಡದಲ್ಲಿದ್ದರೂ ಆ ತಂಡದ ಆಧಾರಸ್ತಂಭ. ಅದರಲ್ಲಿಯೂ ಚೆನ್ನೈ ಸೂಪರ್ ಕಿಂಗ್ ಯಾವತ್ತಿದ್ದರೂ ಧೋನಿಯನ್ನು ಬಿಟ್ಟುಕೊಡಲು ಹೋಗುವುದಿಲ್ಲ. ಆದರೆ ಈಗ ಅದೇ ವಿಷಯ ಧೋನಿ ಪಾಲಿಗೆ ಕಂಟಕವಾಗುತ್ತಿದೆಯಾ ಎನ್ನುವ ಪ್ರಶ್ನೆ ಉದ್ಭವವಾಗುತ್ತಿದೆ. ತಾನು ವೀಲ್ ಚೇರ್ ನಲ್ಲಿದ್ದರೂ ಚೆನ್ನೈ ಸೂಪರ್ ಕಿಂಗ್ ನವರು ನನ್ನನ್ನು ಆಡಿಸುತ್ತಾರೆ ಎಂದು ಧೋನಿ ಹೇಳಿದ ಮರ್ಮ ಈಗ ಜನರಿಗೆ ಅರ್ಥವಾಗುತ್ತಿದೆ. ಈ ಪರಸ್ಪರ ಪ್ರೀತಿ, ವಿಶ್ವಾಸಗಳು ಕೆಲವೊಮ್ಮೆ ಇಬ್ಬರಿಗೂ ನುಂಗಲಾರದ ತುತ್ತಾಗುತ್ತದೆಯಾ ಎನ್ನುವುದನ್ನು ಅವರಿಬ್ಬರೇ ಕುಳಿತು ಸಮಾಲೋಚಿಸಬೇಕು.

ಯಾಕೆಂದರೆ ಚೆನ್ನೈ ಸೂಪರ್ ಕಿಂಗ್ ಪ್ರಧಾನ ಕೋಚ್ ಸ್ಟೀಫನ್ ಫ್ಲೇಮಿಂಗ್ ಹೇಳಿಕೆಯೇ ಈಗ ಧೋನಿ ಕ್ರೀಡಾಕ್ಷಮತೆಯನ್ನು ಬಯಲಿಗೆ ಎಳೆದಿದೆಯಾ ಎನ್ನುವ ಸಂದೇಹ ಕಾಡುತ್ತಿದೆ. ಚೆನ್ನೈ ಸೋತ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ” ನಿವೃತ್ತಿಯ ಸಮಯ ಹತ್ತಿರ ಬಂದಿದೆ ಎಂಬುದು ಧೋನಿಗೂ ಗೊತ್ತಿದೆ. ಮೊದಲಿನಂತೆ ಅವರು ಮೈದಾನದಲ್ಲಿ ಓಡಾಡಲು ಆಗುತ್ತಿಲ್ಲ. ನಿರಂತರವಾಗಿ 10 ಓವರ್ ಬ್ಯಾಟ್ ಮಾಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಯಾವ ದಿನದಂದು ತಂಡಕ್ಕೆ ಎಷ್ಟು ಕೊಡುಗೆ ನೀಡಬಹುದು ಎನ್ನುವುದನ್ನು ಧೋನಿಯೇ ನಿರ್ಧರಿಸುತ್ತಾರೆ” ಎಂದು ಹೇಳಿದ್ದಾರೆ.

ಈ ಬಾರಿಯ ಐಪಿಎಲ್ ಪಂದ್ಯಗಳಲ್ಲಿ ಧೋನಿಯವರು ಕೆಳಗಿನ ಕ್ರಮಾಂಕದಲ್ಲಿ ಆಡಲು ಇಳಿಯುತ್ತಿರುವುದು ಅವರ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆಯನ್ನು ತಂದಿದೆ. ಧೋನಿ ಆರಂಭದಲ್ಲಿ ಒಂದೆರಡು ವಿಕೆಟ್ ಹೋದ ತಕ್ಷಣ ಕ್ರೀಸಿಗೆ ಇಳಿಯಬೇಕು ಎನ್ನುವುದು ಕ್ರಿಕೆಟ್ ಪ್ರೇಮಿಗಳ ಬಯಕೆ. ಆದರೆ ಧೋನಿ ಅಂತಿಮ ಏಳನೇ, ಎಂಟನೇ ಸ್ಥಾನದಲ್ಲಿ ಬ್ಯಾಟ್ ಹಿಡಿಯುತ್ತಿರುವುದರಿಂದ ಚೆನ್ನೈ ಸೂಪರ್ ಕಿಂಗ್ ಸ್ಟ್ರಾಟರ್ಜಿಯ ಬಗ್ಗೆ ಸಾಕಷ್ಟು ಆಕ್ರೋಶಗಳು ಎದ್ದಿದ್ದವು. ಈ ಬಗ್ಗೆ ಮಾಜಿ ಕಪ್ತಾನ ವಿರೇಂದ್ರ ಸೆಹ್ವಾಗ್ ಸಹಿತ ಕೆಲವು ಹಿರಿಯ ಕ್ರಿಕೆಟಿಗರು ತಮ್ಮದೇ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಇಷ್ಟಿದ್ದರೂ 43 ವರ್ಷದ ಧೋನಿ ಈಗಲೂ ವಿಕೆಟ್ ಹಿಂದುಗಡೆ ಕ್ಷಣಾರ್ಧದಲ್ಲಿ ಸ್ಟಂಪ್ ಮಾಡುವ ತಮ್ಮ ಕಲೆಯನ್ನು ಮರೆತಿಲ್ಲ. ಧೋನಿ ಸ್ಟಂಪ್ ಹಿಂದೆ ನಿಂತಿದ್ದರೆ ಎಂತಹ ಬ್ಯಾಟ್ಸಮನ್ ಆದರೂ ಮೈಯೆಲ್ಲಾ ಕಣ್ಣಾಗಿ ಇರಬೇಕಾಗುತ್ತದೆ ಎನ್ನುವುದು ನಿಜ. ಐಪಿಎಲ್ ನ ಮುಂದಿನ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ ಬ್ಯಾಟಿಂಗ್ ಮಾಡುವಾಗ ಧೋನಿ ಬೇಗ ಕ್ರೀಸಿಗೆ ಬರಲಿ ಎನ್ನುವುದು ಎಲ್ಲರ ಆಶಯ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search