• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

140 ಕಿ.ಮೀ ನಡೆಯುತ್ತಾ ಅನಂತ್ ಅಂಬಾನಿಯಿಂದ ದ್ವಾರಕ ಭೇಟಿಗೆ ಸಂಕಲ್ಪ!

Tulunadu News Posted On April 1, 2025
0


0
Shares
  • Share On Facebook
  • Tweet It

ಶ್ರೀಮಂತರ ಮಕ್ಕಳಿಂದ ಇದೆಲ್ಲಾ ಸಾಧ್ಯವಾ ಎನ್ನುವ ಪ್ರಶ್ನೆಗೆ ಉತ್ತರವಾಗಿ ದೇಶದ ಅತ್ಯಂತ ಶ್ರೀಮಂತ ಉದ್ಯಮಿಯ ಪುತ್ರ ಅನಂತ್ ಅಂಬಾನಿ 140 ಕಿ.ಮೀ ಕ್ರಮಿಸಿ ದ್ವಾರಕೆಯಲ್ಲಿ ದೇವರ ದರ್ಶನ ಮಾಡಲು ಹೊರಟಿದ್ದಾರೆ. ಗುಜರಾತಿನ ಜಾಮ್ ನಗರದ ತಮ್ಮ ಮನೆಯಿಂದ ಹೊರಟು ದ್ವಾರಕಕ್ಕೆ ಬರುವ ದಾರಿಯುದ್ದಕ್ಕೂ ಅವರು ಹನುಮಾನ್ ಚಾಲಿಸಾ ಪಠಣ ಮಾಡುತ್ತಾ ಇದ್ದಾರೆ. ತಮ್ಮ 30ನೇ ವರ್ಷದ ಜನ್ಮದಿನವನ್ನು ಅನಂತ್ ಅಂಬಾನಿ ಈ ರೀತಿಯಲ್ಲಿ ಆಚರಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಕೇವಲ ನಡಿಗೆಯ ಮೂಲಕ ಅಷ್ಟು ದೂರ ಕ್ರಮಿಸಲಿರುವ ಅನಂತ್ ಅಂಬಾನಿ ತಮ್ಮ ದೇವರ ಮೇಲಿರುವ ಭಕ್ತಿಯನ್ನು ದೈಹಿಕ ಶ್ರಮದ ಮೂಲಕವೂ ತೋರಿಸಿಕೊಟ್ಟು ಯುವಜನಾಂಗಕ್ಕೆ ಉತ್ತಮ ಸಂದೇಶ ನೀಡುತ್ತಿದ್ದಾರೆ.

ನಮ್ಮ ಸ್ವಅಭಿವೃದ್ಧಿ ಮತ್ತು ಯಶಸ್ಸಿಗೆ ದೇವರ ಆರ್ಶೀವಾದ ಎಷ್ಟು ಅಗತ್ಯ ಎನ್ನುವುದನ್ನು ಅನಂತ್ ಸಾಧಿಸಿ ತೋರಿಸಿದ್ದಾರೆ. ತಮ್ಮ ಪಾದಯಾತ್ರೆಯ ಉದ್ದಕ್ಕೂ ಸನಾತನ ಧರ್ಮದಲ್ಲಿ ವಿಶ್ವಾಸ ಮತ್ತು ಸಮರ್ಪಣಾ ಮನೋಭಾವದಿಂದ ಉನ್ನತ ಸ್ಥಾನಕ್ಕೆ ಏರಲು ದೇವರ ಅನುಗ್ರಹ ಪಡೆಯಬಹುದು ಎಂದು ಕ್ರಿಯೆಯ ಮೂಲಕ ತೋರಿಸಿದ್ದಾರೆ. ಶಿಸ್ತು, ನಂಬಿಕೆ ಮತ್ತು ತಾನು ಏನೂ ಅಲ್ಲ, ಎಲ್ಲವೂ ಭಗವಂತ ಎನ್ನುವ ದೇವರೊಂದಿಗಿನ ಸಂಬಂಧದಿಂದ ಯಾವುದೇ ಸವಾಲನ್ನು ಎದುರಿಸಿ ಗೆದ್ದು ಬರಬಹುದು ಎಂದು ಅಂಬಾನಿ ಪುತ್ರ ತೋರಿಸಿಕೊಟ್ಟಿದ್ದಾರೆ.

ಪಾದಯಾತ್ರೆಯ ಮುಂಚೂಣಿಯಲ್ಲಿ ನಡೆದು ಬರುತ್ತಿರುವ ಅನಂತ ಅಂಬಾನಿ, ಒಂದು ಯಶಸ್ಸನ್ನು ಕನಸು ಕಾಣುವ ಜೊತೆಗೆ ಅದನ್ನು ಪಡೆಯಲು ಶಿಸ್ತು ಮತ್ತು ಅನುಷ್ಠಾನ ಎಷ್ಟು ಮುಖ್ಯ ಎಂದು ಈ ಮೂಲಕ ತೋರಿಸಿಕೊಟ್ಟಿದ್ದಾರೆ. ಅಧ್ಯಾತ್ಮಿಕತೆ ಮತ್ತು ಮಾನಸಿಕ ಶಕ್ತಿಯ ಮೇಲೆ ನಾವು ವಿಶ್ವಾಸ ಇಟ್ಟಾಗ ಯಶಸ್ಸಿನ ದಾರಿಯಲ್ಲಿ ಬರುವ ಎಂತಹ ಸಂಕಷ್ಟಗಳನ್ನು ಕೂಡ ದೂರ ಮಾಡಬಹುದು ಎಂದು ಅನಂತ್ ನಂಬಿದ್ದಾರೆ.

ಅನಂತ್ ಅಂಬಾನಿ ಮಾರ್ಚ್ 28 ರಂದು ಪಾದಯಾತ್ರೆ ಆರಂಭಿಸಿದ್ದು, ಒಟ್ಟು 12 ರಿಂದ 13 ದಿನಗಳ ತನಕ ನಡೆಯಲಿದ್ದಾರೆ. ನಿತ್ಯ ಕನಿಷ್ಟ 12 ಕಿಲೋ ಮೀಟರ್ ನಡೆಯುವ ಪಾದಯಾತ್ರೆ ದ್ವಾರಕಾವನ್ನು ಏಪ್ರಿಲ್ 8 ರಂದು ತಲುಪಲಿದೆ. ಅಲ್ಲಿ ಅವರು ಏಪ್ರಿಲ್ 10 ರಂದು ದ್ವಾರಕಾಧೀಶರಿಗೆ ಪೂಜೆ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search