• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search