• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

34 ವರ್ಷ ಬಳಿಕ ಕಾಶ್ಮೀರದಲ್ಲಿ ಹಿಂದೂ ಮುಸ್ಲಿಮರು ಸೇರಿ ರಾಮನವಮಿ!

Tulunadu News Posted On April 7, 2025
0


0
Shares
  • Share On Facebook
  • Tweet It

1990 ರ ಅವಧಿ. ಕಾಶ್ಮೀರದಲ್ಲಿ ರಾಮ ನವಮಿ ಆಚರಿಸುವುದು ಬಿಡಿ, ಅಲ್ಲಿ ಕಾಶ್ಮೀರಿ ಪಂಡಿತರು ಉಸಿರಾಡುವುದೇ ಕಷ್ಟಸಾಧ್ಯವಾಗಿತ್ತು. ಉಗ್ರಗಾಮಿಗಳ ಉಪಟಳ ಎಷ್ಟರಮಟ್ಟಿಗೆ ಹೆಚ್ಚಾಗಿತ್ತು ಎಂದರೆ ಅಲ್ಲಿನ ದೇವಾಲಯಗಳನ್ನೇ ಮುಚ್ಚುವ ಪರಿಸ್ಥಿತಿ ಇತ್ತು. ಅದಕ್ಕೆ ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಕೂಡ ಹೊರತಾಗಿಲ್ಲ.

ಇಲ್ಲಿನ ಭಗವತಿ ಮಂದಿರದಲ್ಲಿ ರಾಮನವಮಿಯನ್ನು 1990 ರ ಮೊದಲು ಆಚರಿಸಲಾಗುತ್ತಿತ್ತು. ಆದರೆ ನಂತರ ಆ ದೇವಾಲಯವನ್ನು ಮುಚ್ಚಲಾಗಿತ್ತು. ಮುಂದೆ ಯಾವತ್ತಾದರೂ ಪರಿಸ್ಥಿತಿ ಸುಧಾರಿಸಿದರೆ ರಾಮನವಮಿ ಆಚರಿಸೋಣ ಎನ್ನುವ ಆಶಾಭಾವನೆ ಅಲ್ಲಿನವರಲ್ಲಿತ್ತು. ಆದರೆ ಅದಕ್ಕೆ ಕಾಲಕೂಡಿಬರಲು ಮೂರು ದಶಕಗಳೇ ಆಗಿಹೋಗಬೇಕಾಯಿತು. ಕೊನೆಗೂ ಈಗ ಆ ಕಾಲ ಕೂಡಿಬಂತು.

ಸದ್ಯ ಅಲ್ಲಿ ಉಗ್ರಗಾಮಿಗಳ ಉಪಟಳ ನಿಯಂತ್ರಣದಲ್ಲಿ ಇರುವುದರಿಂದ ಕಳೆದ ವರ್ಷ ದೇವಾಲಯವನ್ನು ತೆರೆಯಲಾಗಿತ್ತು. ಈ ಬಾರಿ ಅಲ್ಲಿ ರಾಮ ನವಮಿ ಆಚರಿಸಲಾಗಿದೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಿಗೆ ಸೇರಿ ರಾಮನವಮಿ ಹಬ್ಬ ಆಚರಿಸಿರುವುದು ಇಲ್ಲಿ ವಿಶೇಷವಾಗಿತ್ತು. 34 ವರ್ಷಗಳ ಬಳಿಕ ರಾಮನವಮಿ ಆಚರಿಸುವ ಅವಕಾಶ ಸಿಕ್ಕಿರುವುದರ ಬಗ್ಗೆ ದೇಗುಲದ ಮುಖ್ಯಸ್ಥ ಯಜೀನ್ ಭಟ್ ಹರ್ಷ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search