• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಾರ್ಗೆಟ್ ತಲುಪದ ನೌಕರರಿಗೆ ನಾಯಿ ಶಿಕ್ಷೆ!

Tulunadu News Posted On April 7, 2025
0


0
Shares
  • Share On Facebook
  • Tweet It

ಟಾರ್ಗೆಟ್ ಎನ್ನುವ ಶಬ್ದ ಮಾರ್ಕೆಟಿಂಗ್ ಕಂಪೆನಿಯಲ್ಲಿ ಯಾವಾಗಲೂ ದೊಡ್ಡವಾಗಿ ಕೇಳಿಬರುವ ಪ್ರಮುಖ ಪದ. ಟಾರ್ಗೆಟ್ ರೀಚ್ ಆದರೆ ನೌಕರರಿಗೆ ದೀರ್ಗಾಯುಷ್ಯ. ಟಾರ್ಗೆಟ್ ತಲುಪದ ನೌಕರರಿಗೆ ನಿದ್ರೆ, ಊಟ ದೂರ ದೂರ. ಆದ್ದರಿಂದ ತಿಂಗಳೀಡಿ ಹೇಗಾದರೂ ಮಾಡಿ ಟಾರ್ಗೆಟ್ ತಲುಪಲು ಮಾರ್ಕೆಟಿಂಗ್ ವಿಭಾಗದವರು ಒದ್ದಾಡುತ್ತಲೇ ಇರುತ್ತಾರೆ. ಗುರಿ ತಲುಪಲಾಗದವರಿಗೆ ಕಂಪೆನಿಯ ಬಾಸ್ ಗಳಿಂದ ಮಂಗಳಾರತಿ, ಮೆಮೊ ಸಹಿತ ವಿವಿಧ ರೀತಿಯ ಪಾಠ ಇದ್ದೇ ಇರುತ್ತದೆ.

ಆದರೆ ಇಲ್ಲೊಂದು ಕಂಪೆನಿ ಟಾರ್ಗೆಟ್ ತಲುಪದ ನೌಕರರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಲಾದ ವಿಡಿಯೋ ಮತ್ತು ಫೋಟೋ ವೈರಲ್ ಆಗಿದೆ. ಅವರಿಗೆ ಇಲ್ಲಿ ದೈಹಿಕ ಮತ್ತು ಮಾನಸಿಕವಾಗಿ ದೌರ್ಜನ್ಯ ನೀಡಲಾಗಿದೆ. ಅವರ ಕುತ್ತಿಗೆಗೆ ಸರಪಳಿ ಬಿಗಿದು ಮಂಡಿ ಮೇಲೆ ನಾಯಿಗಳಂತೆ ತೆವಳುವ ಮತ್ತು ನೆಲದ ಮೇಲೆ ಬಿದ್ದ ನಾಣ್ಯಗಳನ್ನು ನೆಕ್ಕುವ ಶಿಕ್ಷೆ ವಿಧಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಕಂಪೆನಿಯ ವಿರುದ್ಧ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಕಂಪೆನಿಯ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿ ಅಂತಹ ಶಿಕ್ಷೆಗಳನ್ನು ನೀಡುತ್ತದೆ ಎಂದು ಕೆಲವು ಉದ್ಯೋಗಿಗಳು ತಿಳಿಸಿದ್ದಾರೆ. ಆದರೆ ಈ ಹಿಂದೆ ಆ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯವಸ್ಥಾಪಕರೊಬ್ಬರು ಟಾರ್ಗೆಟ್ ತಲುಪದ ಉದ್ಯೋಗಿಗಳಿಗೆ ಈ ರೀತಿ ನಡೆಸಿಕೊಂಡಿದ್ದರು. ಅವರನ್ನು ಕಂಪೆನಿಯಿಂದ ವಜಾಗೊಳಿಸಲಾಗಿದೆ. ಅದೇ ಸಿಟ್ಟಿಗೆ ಕಂಪೆನಿಗೆ ಕೆಟ್ಟ ಹೆಸರು ಈಗ ಹಳೆಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಇನ್ನೊರ್ವ ಉದ್ಯೋಗಿ ಹೇಳಿದ್ದಾರೆ.

ಈ ಘಟನೆ ಕುರಿತು ಕಾರ್ಮಿಕ ಸಚಿವ ಶಿವನ್ ಕುಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search