• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಾರ್ಗೆಟ್ ತಲುಪದ ನೌಕರರಿಗೆ ನಾಯಿ ಶಿಕ್ಷೆ!

Tulunadu News Posted On April 7, 2025
0


0
Shares
  • Share On Facebook
  • Tweet It

ಟಾರ್ಗೆಟ್ ಎನ್ನುವ ಶಬ್ದ ಮಾರ್ಕೆಟಿಂಗ್ ಕಂಪೆನಿಯಲ್ಲಿ ಯಾವಾಗಲೂ ದೊಡ್ಡವಾಗಿ ಕೇಳಿಬರುವ ಪ್ರಮುಖ ಪದ. ಟಾರ್ಗೆಟ್ ರೀಚ್ ಆದರೆ ನೌಕರರಿಗೆ ದೀರ್ಗಾಯುಷ್ಯ. ಟಾರ್ಗೆಟ್ ತಲುಪದ ನೌಕರರಿಗೆ ನಿದ್ರೆ, ಊಟ ದೂರ ದೂರ. ಆದ್ದರಿಂದ ತಿಂಗಳೀಡಿ ಹೇಗಾದರೂ ಮಾಡಿ ಟಾರ್ಗೆಟ್ ತಲುಪಲು ಮಾರ್ಕೆಟಿಂಗ್ ವಿಭಾಗದವರು ಒದ್ದಾಡುತ್ತಲೇ ಇರುತ್ತಾರೆ. ಗುರಿ ತಲುಪಲಾಗದವರಿಗೆ ಕಂಪೆನಿಯ ಬಾಸ್ ಗಳಿಂದ ಮಂಗಳಾರತಿ, ಮೆಮೊ ಸಹಿತ ವಿವಿಧ ರೀತಿಯ ಪಾಠ ಇದ್ದೇ ಇರುತ್ತದೆ.

ಆದರೆ ಇಲ್ಲೊಂದು ಕಂಪೆನಿ ಟಾರ್ಗೆಟ್ ತಲುಪದ ನೌಕರರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಲಾದ ವಿಡಿಯೋ ಮತ್ತು ಫೋಟೋ ವೈರಲ್ ಆಗಿದೆ. ಅವರಿಗೆ ಇಲ್ಲಿ ದೈಹಿಕ ಮತ್ತು ಮಾನಸಿಕವಾಗಿ ದೌರ್ಜನ್ಯ ನೀಡಲಾಗಿದೆ. ಅವರ ಕುತ್ತಿಗೆಗೆ ಸರಪಳಿ ಬಿಗಿದು ಮಂಡಿ ಮೇಲೆ ನಾಯಿಗಳಂತೆ ತೆವಳುವ ಮತ್ತು ನೆಲದ ಮೇಲೆ ಬಿದ್ದ ನಾಣ್ಯಗಳನ್ನು ನೆಕ್ಕುವ ಶಿಕ್ಷೆ ವಿಧಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಕಂಪೆನಿಯ ವಿರುದ್ಧ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಕಂಪೆನಿಯ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿ ಅಂತಹ ಶಿಕ್ಷೆಗಳನ್ನು ನೀಡುತ್ತದೆ ಎಂದು ಕೆಲವು ಉದ್ಯೋಗಿಗಳು ತಿಳಿಸಿದ್ದಾರೆ. ಆದರೆ ಈ ಹಿಂದೆ ಆ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯವಸ್ಥಾಪಕರೊಬ್ಬರು ಟಾರ್ಗೆಟ್ ತಲುಪದ ಉದ್ಯೋಗಿಗಳಿಗೆ ಈ ರೀತಿ ನಡೆಸಿಕೊಂಡಿದ್ದರು. ಅವರನ್ನು ಕಂಪೆನಿಯಿಂದ ವಜಾಗೊಳಿಸಲಾಗಿದೆ. ಅದೇ ಸಿಟ್ಟಿಗೆ ಕಂಪೆನಿಗೆ ಕೆಟ್ಟ ಹೆಸರು ಈಗ ಹಳೆಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಇನ್ನೊರ್ವ ಉದ್ಯೋಗಿ ಹೇಳಿದ್ದಾರೆ.

ಈ ಘಟನೆ ಕುರಿತು ಕಾರ್ಮಿಕ ಸಚಿವ ಶಿವನ್ ಕುಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!

  • Privacy Policy
  • Contact
© Tulunadu Infomedia.

Press enter/return to begin your search