• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಾರ್ಗೆಟ್ ತಲುಪದ ನೌಕರರಿಗೆ ನಾಯಿ ಶಿಕ್ಷೆ!

Tulunadu News Posted On April 7, 2025
0


0
Shares
  • Share On Facebook
  • Tweet It

ಟಾರ್ಗೆಟ್ ಎನ್ನುವ ಶಬ್ದ ಮಾರ್ಕೆಟಿಂಗ್ ಕಂಪೆನಿಯಲ್ಲಿ ಯಾವಾಗಲೂ ದೊಡ್ಡವಾಗಿ ಕೇಳಿಬರುವ ಪ್ರಮುಖ ಪದ. ಟಾರ್ಗೆಟ್ ರೀಚ್ ಆದರೆ ನೌಕರರಿಗೆ ದೀರ್ಗಾಯುಷ್ಯ. ಟಾರ್ಗೆಟ್ ತಲುಪದ ನೌಕರರಿಗೆ ನಿದ್ರೆ, ಊಟ ದೂರ ದೂರ. ಆದ್ದರಿಂದ ತಿಂಗಳೀಡಿ ಹೇಗಾದರೂ ಮಾಡಿ ಟಾರ್ಗೆಟ್ ತಲುಪಲು ಮಾರ್ಕೆಟಿಂಗ್ ವಿಭಾಗದವರು ಒದ್ದಾಡುತ್ತಲೇ ಇರುತ್ತಾರೆ. ಗುರಿ ತಲುಪಲಾಗದವರಿಗೆ ಕಂಪೆನಿಯ ಬಾಸ್ ಗಳಿಂದ ಮಂಗಳಾರತಿ, ಮೆಮೊ ಸಹಿತ ವಿವಿಧ ರೀತಿಯ ಪಾಠ ಇದ್ದೇ ಇರುತ್ತದೆ.

ಆದರೆ ಇಲ್ಲೊಂದು ಕಂಪೆನಿ ಟಾರ್ಗೆಟ್ ತಲುಪದ ನೌಕರರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಲಾದ ವಿಡಿಯೋ ಮತ್ತು ಫೋಟೋ ವೈರಲ್ ಆಗಿದೆ. ಅವರಿಗೆ ಇಲ್ಲಿ ದೈಹಿಕ ಮತ್ತು ಮಾನಸಿಕವಾಗಿ ದೌರ್ಜನ್ಯ ನೀಡಲಾಗಿದೆ. ಅವರ ಕುತ್ತಿಗೆಗೆ ಸರಪಳಿ ಬಿಗಿದು ಮಂಡಿ ಮೇಲೆ ನಾಯಿಗಳಂತೆ ತೆವಳುವ ಮತ್ತು ನೆಲದ ಮೇಲೆ ಬಿದ್ದ ನಾಣ್ಯಗಳನ್ನು ನೆಕ್ಕುವ ಶಿಕ್ಷೆ ವಿಧಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಕಂಪೆನಿಯ ವಿರುದ್ಧ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಕಂಪೆನಿಯ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿ ಅಂತಹ ಶಿಕ್ಷೆಗಳನ್ನು ನೀಡುತ್ತದೆ ಎಂದು ಕೆಲವು ಉದ್ಯೋಗಿಗಳು ತಿಳಿಸಿದ್ದಾರೆ. ಆದರೆ ಈ ಹಿಂದೆ ಆ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯವಸ್ಥಾಪಕರೊಬ್ಬರು ಟಾರ್ಗೆಟ್ ತಲುಪದ ಉದ್ಯೋಗಿಗಳಿಗೆ ಈ ರೀತಿ ನಡೆಸಿಕೊಂಡಿದ್ದರು. ಅವರನ್ನು ಕಂಪೆನಿಯಿಂದ ವಜಾಗೊಳಿಸಲಾಗಿದೆ. ಅದೇ ಸಿಟ್ಟಿಗೆ ಕಂಪೆನಿಗೆ ಕೆಟ್ಟ ಹೆಸರು ಈಗ ಹಳೆಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಇನ್ನೊರ್ವ ಉದ್ಯೋಗಿ ಹೇಳಿದ್ದಾರೆ.

ಈ ಘಟನೆ ಕುರಿತು ಕಾರ್ಮಿಕ ಸಚಿವ ಶಿವನ್ ಕುಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search