• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟಾರ್ಗೆಟ್ ತಲುಪದ ನೌಕರರಿಗೆ ನಾಯಿ ಶಿಕ್ಷೆ!

Tulunadu News Posted On April 7, 2025
0


0
Shares
  • Share On Facebook
  • Tweet It

ಟಾರ್ಗೆಟ್ ಎನ್ನುವ ಶಬ್ದ ಮಾರ್ಕೆಟಿಂಗ್ ಕಂಪೆನಿಯಲ್ಲಿ ಯಾವಾಗಲೂ ದೊಡ್ಡವಾಗಿ ಕೇಳಿಬರುವ ಪ್ರಮುಖ ಪದ. ಟಾರ್ಗೆಟ್ ರೀಚ್ ಆದರೆ ನೌಕರರಿಗೆ ದೀರ್ಗಾಯುಷ್ಯ. ಟಾರ್ಗೆಟ್ ತಲುಪದ ನೌಕರರಿಗೆ ನಿದ್ರೆ, ಊಟ ದೂರ ದೂರ. ಆದ್ದರಿಂದ ತಿಂಗಳೀಡಿ ಹೇಗಾದರೂ ಮಾಡಿ ಟಾರ್ಗೆಟ್ ತಲುಪಲು ಮಾರ್ಕೆಟಿಂಗ್ ವಿಭಾಗದವರು ಒದ್ದಾಡುತ್ತಲೇ ಇರುತ್ತಾರೆ. ಗುರಿ ತಲುಪಲಾಗದವರಿಗೆ ಕಂಪೆನಿಯ ಬಾಸ್ ಗಳಿಂದ ಮಂಗಳಾರತಿ, ಮೆಮೊ ಸಹಿತ ವಿವಿಧ ರೀತಿಯ ಪಾಠ ಇದ್ದೇ ಇರುತ್ತದೆ.

ಆದರೆ ಇಲ್ಲೊಂದು ಕಂಪೆನಿ ಟಾರ್ಗೆಟ್ ತಲುಪದ ನೌಕರರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಹೇಳಲಾದ ವಿಡಿಯೋ ಮತ್ತು ಫೋಟೋ ವೈರಲ್ ಆಗಿದೆ. ಅವರಿಗೆ ಇಲ್ಲಿ ದೈಹಿಕ ಮತ್ತು ಮಾನಸಿಕವಾಗಿ ದೌರ್ಜನ್ಯ ನೀಡಲಾಗಿದೆ. ಅವರ ಕುತ್ತಿಗೆಗೆ ಸರಪಳಿ ಬಿಗಿದು ಮಂಡಿ ಮೇಲೆ ನಾಯಿಗಳಂತೆ ತೆವಳುವ ಮತ್ತು ನೆಲದ ಮೇಲೆ ಬಿದ್ದ ನಾಣ್ಯಗಳನ್ನು ನೆಕ್ಕುವ ಶಿಕ್ಷೆ ವಿಧಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಕಂಪೆನಿಯ ವಿರುದ್ಧ ತನಿಖೆಗೆ ಆದೇಶಿಸಿದೆ.

ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಕಂಪೆನಿಯ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾದವರಿಗೆ ಆಡಳಿತ ಮಂಡಳಿ ಅಂತಹ ಶಿಕ್ಷೆಗಳನ್ನು ನೀಡುತ್ತದೆ ಎಂದು ಕೆಲವು ಉದ್ಯೋಗಿಗಳು ತಿಳಿಸಿದ್ದಾರೆ. ಆದರೆ ಈ ಹಿಂದೆ ಆ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯವಸ್ಥಾಪಕರೊಬ್ಬರು ಟಾರ್ಗೆಟ್ ತಲುಪದ ಉದ್ಯೋಗಿಗಳಿಗೆ ಈ ರೀತಿ ನಡೆಸಿಕೊಂಡಿದ್ದರು. ಅವರನ್ನು ಕಂಪೆನಿಯಿಂದ ವಜಾಗೊಳಿಸಲಾಗಿದೆ. ಅದೇ ಸಿಟ್ಟಿಗೆ ಕಂಪೆನಿಗೆ ಕೆಟ್ಟ ಹೆಸರು ಈಗ ಹಳೆಯ ವಿಡಿಯೋ ವೈರಲ್ ಮಾಡಿದ್ದಾರೆ ಎಂದು ಇನ್ನೊರ್ವ ಉದ್ಯೋಗಿ ಹೇಳಿದ್ದಾರೆ.

ಈ ಘಟನೆ ಕುರಿತು ಕಾರ್ಮಿಕ ಸಚಿವ ಶಿವನ್ ಕುಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ಶೀಘ್ರ ವರದಿ ಸಲ್ಲಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search