• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರಿಗೆ ಹಜ್ ಯಾತ್ರೆಗೆ ವೀಸಾ ನಿರಾಕರಿಸಿದ ಸೌದಿ ಅರೇಬಿಯಾ!

Tulunadu News Posted On April 7, 2025
0


0
Shares
  • Share On Facebook
  • Tweet It

ಇಂತಹ ಒಂದು ಶಾಕ್ ಸೌದಿ ಅರೇಬಿಯಾ ನೀಡುತ್ತದೆ ಎಂದು ಭಾರತೀಯ ಮುಸ್ಲಿಮರು ಅಂದುಕೊಂಡಿರಲಿಕ್ಕಿಲ್ಲ. ಆದರೂ ಎಲ್ಲರ ನಿರೀಕ್ಷೆಗೂ ಮೀರಿ ಇಂತಹ ಒಂದು ಘಟನೆ ನಡೆದಿದೆ. ಭಾರತೀಯ ಮುಸ್ಲಿಮರು ಸದ್ಯ ಹಜ್ ಯಾತ್ರೆ ಕೈಗೊಳ್ಳಲು ಆಗುವುದಿಲ್ಲ. ಕಾರಣ ಸೌದಿ ಅರೇಬಿಯಾ ಇದೀಗ ಭಾರತೀಯರಿಗೆ ವೀಸಾ ಬ್ಯಾನ್ ಮಾಡಿದೆ. ಕೇವಲ ಉಮ್ರಾ ವೀಸಾ ಮಾತ್ರವಲ್ಲ, ಬ್ಯುಸಿನೆಸ್ ಹಾಗೂ ಫ್ಯಾಮಿಲಿ ವಿಸಿಟ್ ವೀಸಾ ನಿಷೇಧಿಸಿದೆ.

ಜೂನ್ ವರೆಗೆ ವೀಸಾ ಇಲ್ಲ.

ಹಜ್ ಯಾತ್ರೆ ಇರುವುದೇ ಜೂನ್ ತಿಂಗಳ ತನಕ ಮಾತ್ರ. ಜಗತ್ತಿನ ಮೂಲೆ ಮೂಲೆಗಳಿಂದ ಮುಸ್ಲಿಮರು ಮೆಕ್ಕಾ ತಲಪುತ್ತಾರೆ. ಆದರೆ ಈಗ ಜೂನ್ ತಿಂಗಳವರೆಗೆ ವೀಸಾ ನಿರಾಕರಣೆ ಮಾಡಲಾಗಿದೆ. ಇದರಿಂದ ಹಜ್ ಯಾತ್ರೆಗೆ ತೆರಳುವ ಮುಂದಾಗಿರುವ ಮುಸ್ಲಿಮರಿಗೆ ನಿರಾಶೆಯಾಗಿದೆ.

ವೀಸಾ ನಿರಾಕರಣೆಗೆ ಕಾರಣ!

ಉಮ್ರಾ ಯಾತ್ರೆಗೆ ಬರುವವರು ಸರಿಯಾದ ನೋಂದಣೆ ಮಾಡದೇ ಆಗಮಿಸುತ್ತಿದ್ದಾರೆ. ಅಂತವರಿಗೆ ಸೂಕ್ತ ಮಾರ್ಗದರ್ಶನ ಕೂಡ ಇರುವುದಿಲ್ಲ. ಇದರಿಂದ ಸಮಸ್ಯೆ ಎದುರಾಗುತ್ತಿದೆ. ಉಮ್ರಾ ವೀಸಾ ಮೂಲಕ ಸೌದಿ ಅರೇಬಿಯಾಗೆ ಆಗಮಿಸುವ ಹಲವರು ಬಳಿಕ ಇಲ್ಲೇ ವ್ಯವಹಾರ, ವ್ಯಾಪಾರಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅಕ್ರಮವಾಗಿ ಉಳಿದುಕೊಂಡು ಅಕ್ರಮ ವ್ಯಾಪಾರ, ವಹಿವಾಟುಗಳನ್ನು ನಡೆಸುತ್ತಾರೆ. ಇದು ದೇಶದ ವೀಸಾ ನಿಯಮ ಮಾತ್ರವಲ್ಲ, ಕಾರ್ಮಿಕ ನಿಯಮವನ್ನು ಕೂಡ ಉಲ್ಲಂಘಿಸುತ್ತಿದೆ. ಹೀಗಾಗಿ ಈ ಬಾರಿ ಸಂಪೂರ್ಣ ನಿಗಾ ವಹಿಸಲು ಹಾಗೂ ನಿಯಂತ್ರಣ ಹೇರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೌದಿ ಅರೇಬಿಯಾ ಸ್ಪಷ್ಟಪಡಿಸಿದೆ.

ಭಾರತ ಮಾತ್ರವಲ್ಲ! ಈಗಾಗಲೇ ಉಮ್ರಾ ವೀಸಾ ಹೊಂದಿರುವ ಮುಸ್ಲಿಮರು ಹಜ್ ಯಾತ್ರೆ ಕೈಗೊಳ್ಳಬಹುದು…

ಅಷ್ಟಕ್ಕೂ ಈ ಬ್ಯಾನ್ ಭಾರತಕ್ಕೆ ಮಾತ್ರವಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಶಿಯಾ, ಇರಾಕ್, ಜೋರ್ಡಾನ್, ಅಲ್ಜೀರಿಯಾ, ಸೂಡಾನ್, ಇಥೋಪಿಯಾ, ತುನಿಶಿಯಾ, ಯೆಮನ್ ಹಾಗೂ ಮೊರಕ್ಕೋ ದೇಶಗಳಿಗೆ ಸೌದಿ ಅರೇಬಿಯಾ ವೀಸಾ ಬ್ಯಾನ್ ಮಾಡಿದೆ. ಇದರಿಂದ ಈ 14 ದೇಶಗಳಿಂದ ಯಾರೂ ಉಮ್ರಾಗಾಗಿ ಮೆಕ್ಕಾಗೆ ತೆರಳಲು ಸಾಧ್ಯವಾಗುವುದಿಲ್ಲ.
ಆದರೆ ಈಗಾಗಲೇ ಉಮ್ರಾ ವೀಸಾ ಹೊಂದಿರುವ ಮುಸ್ಲಿಮರು ಹಜ್ ಯಾತ್ರೆ ಕೈಗೊಳ್ಳಬಹುದು. ವೀಸಾ ನಿಷೇಧಿಸಲ್ಪಟ್ಟಿರುವ ಭಾರತ ಸೇರಿದಂತೆ 14 ರಾಷ್ಟ್ರಗಳ ಮುಸ್ಲಿಮರು ಈಗಾಗಲೇ ಉಮ್ರಾ ವೀಸಾ ಹೊಂದಿದ್ದರೆ ಎಪ್ರಿಲ್ 13 ರ ಒಳಗೆ ಹಜ್ ಯಾತ್ರೆ ಕೈಗೊಳ್ಳಬಹುದು ಎಂದು ಸೌದಿ ಅರೇಬಿಯಾ ಹೇಳಿದೆ.
ಹಜ್ ಯಾತ್ರೆಗೆ ಪ್ರತಿ ದೇಶದಿಂದ ಇಂತಿಷ್ಟೇ ಮಂದಿ ಆಗಮಿಸಬೇಕು ಎನ್ನುವ ನಿಯಮ ಇದೆ. ಆಯಾ ದೇಶಗಳೇ ಅದನ್ನು ನೋಡಿಕೊಳ್ಳಬೇಕು. ಅವಕಾಶ ಸಿಗದವರು ಅಕ್ರಮವಾಗಿ ಪ್ರವೇಶಿಸುತ್ತಾರೆ. ಹೀಗೆ ಕೆಲವು ಗಂಭೀರ ಕಾರಣಗಳಿಗಾಗಿ 14 ದೇಶಗಳಿಗೆ ವೀಸಾ ನಿರಾಕರಿಸಲಾಗಿದೆ ಎಂದು ಸೌದಿ ಅರೇಬಿಯಾ ಹೇಳಿದೆ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search