• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಮುಸ್ಲಿಮರಿಗೆ ಹಜ್ ಯಾತ್ರೆಗೆ ವೀಸಾ ನಿರಾಕರಿಸಿದ ಸೌದಿ ಅರೇಬಿಯಾ!

Tulunadu News Posted On April 7, 2025
0


0
Shares
  • Share On Facebook
  • Tweet It

ಇಂತಹ ಒಂದು ಶಾಕ್ ಸೌದಿ ಅರೇಬಿಯಾ ನೀಡುತ್ತದೆ ಎಂದು ಭಾರತೀಯ ಮುಸ್ಲಿಮರು ಅಂದುಕೊಂಡಿರಲಿಕ್ಕಿಲ್ಲ. ಆದರೂ ಎಲ್ಲರ ನಿರೀಕ್ಷೆಗೂ ಮೀರಿ ಇಂತಹ ಒಂದು ಘಟನೆ ನಡೆದಿದೆ. ಭಾರತೀಯ ಮುಸ್ಲಿಮರು ಸದ್ಯ ಹಜ್ ಯಾತ್ರೆ ಕೈಗೊಳ್ಳಲು ಆಗುವುದಿಲ್ಲ. ಕಾರಣ ಸೌದಿ ಅರೇಬಿಯಾ ಇದೀಗ ಭಾರತೀಯರಿಗೆ ವೀಸಾ ಬ್ಯಾನ್ ಮಾಡಿದೆ. ಕೇವಲ ಉಮ್ರಾ ವೀಸಾ ಮಾತ್ರವಲ್ಲ, ಬ್ಯುಸಿನೆಸ್ ಹಾಗೂ ಫ್ಯಾಮಿಲಿ ವಿಸಿಟ್ ವೀಸಾ ನಿಷೇಧಿಸಿದೆ.

ಜೂನ್ ವರೆಗೆ ವೀಸಾ ಇಲ್ಲ.

ಹಜ್ ಯಾತ್ರೆ ಇರುವುದೇ ಜೂನ್ ತಿಂಗಳ ತನಕ ಮಾತ್ರ. ಜಗತ್ತಿನ ಮೂಲೆ ಮೂಲೆಗಳಿಂದ ಮುಸ್ಲಿಮರು ಮೆಕ್ಕಾ ತಲಪುತ್ತಾರೆ. ಆದರೆ ಈಗ ಜೂನ್ ತಿಂಗಳವರೆಗೆ ವೀಸಾ ನಿರಾಕರಣೆ ಮಾಡಲಾಗಿದೆ. ಇದರಿಂದ ಹಜ್ ಯಾತ್ರೆಗೆ ತೆರಳುವ ಮುಂದಾಗಿರುವ ಮುಸ್ಲಿಮರಿಗೆ ನಿರಾಶೆಯಾಗಿದೆ.

ವೀಸಾ ನಿರಾಕರಣೆಗೆ ಕಾರಣ!

ಉಮ್ರಾ ಯಾತ್ರೆಗೆ ಬರುವವರು ಸರಿಯಾದ ನೋಂದಣೆ ಮಾಡದೇ ಆಗಮಿಸುತ್ತಿದ್ದಾರೆ. ಅಂತವರಿಗೆ ಸೂಕ್ತ ಮಾರ್ಗದರ್ಶನ ಕೂಡ ಇರುವುದಿಲ್ಲ. ಇದರಿಂದ ಸಮಸ್ಯೆ ಎದುರಾಗುತ್ತಿದೆ. ಉಮ್ರಾ ವೀಸಾ ಮೂಲಕ ಸೌದಿ ಅರೇಬಿಯಾಗೆ ಆಗಮಿಸುವ ಹಲವರು ಬಳಿಕ ಇಲ್ಲೇ ವ್ಯವಹಾರ, ವ್ಯಾಪಾರಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅಕ್ರಮವಾಗಿ ಉಳಿದುಕೊಂಡು ಅಕ್ರಮ ವ್ಯಾಪಾರ, ವಹಿವಾಟುಗಳನ್ನು ನಡೆಸುತ್ತಾರೆ. ಇದು ದೇಶದ ವೀಸಾ ನಿಯಮ ಮಾತ್ರವಲ್ಲ, ಕಾರ್ಮಿಕ ನಿಯಮವನ್ನು ಕೂಡ ಉಲ್ಲಂಘಿಸುತ್ತಿದೆ. ಹೀಗಾಗಿ ಈ ಬಾರಿ ಸಂಪೂರ್ಣ ನಿಗಾ ವಹಿಸಲು ಹಾಗೂ ನಿಯಂತ್ರಣ ಹೇರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೌದಿ ಅರೇಬಿಯಾ ಸ್ಪಷ್ಟಪಡಿಸಿದೆ.

ಭಾರತ ಮಾತ್ರವಲ್ಲ! ಈಗಾಗಲೇ ಉಮ್ರಾ ವೀಸಾ ಹೊಂದಿರುವ ಮುಸ್ಲಿಮರು ಹಜ್ ಯಾತ್ರೆ ಕೈಗೊಳ್ಳಬಹುದು…

ಅಷ್ಟಕ್ಕೂ ಈ ಬ್ಯಾನ್ ಭಾರತಕ್ಕೆ ಮಾತ್ರವಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಶಿಯಾ, ಇರಾಕ್, ಜೋರ್ಡಾನ್, ಅಲ್ಜೀರಿಯಾ, ಸೂಡಾನ್, ಇಥೋಪಿಯಾ, ತುನಿಶಿಯಾ, ಯೆಮನ್ ಹಾಗೂ ಮೊರಕ್ಕೋ ದೇಶಗಳಿಗೆ ಸೌದಿ ಅರೇಬಿಯಾ ವೀಸಾ ಬ್ಯಾನ್ ಮಾಡಿದೆ. ಇದರಿಂದ ಈ 14 ದೇಶಗಳಿಂದ ಯಾರೂ ಉಮ್ರಾಗಾಗಿ ಮೆಕ್ಕಾಗೆ ತೆರಳಲು ಸಾಧ್ಯವಾಗುವುದಿಲ್ಲ.
ಆದರೆ ಈಗಾಗಲೇ ಉಮ್ರಾ ವೀಸಾ ಹೊಂದಿರುವ ಮುಸ್ಲಿಮರು ಹಜ್ ಯಾತ್ರೆ ಕೈಗೊಳ್ಳಬಹುದು. ವೀಸಾ ನಿಷೇಧಿಸಲ್ಪಟ್ಟಿರುವ ಭಾರತ ಸೇರಿದಂತೆ 14 ರಾಷ್ಟ್ರಗಳ ಮುಸ್ಲಿಮರು ಈಗಾಗಲೇ ಉಮ್ರಾ ವೀಸಾ ಹೊಂದಿದ್ದರೆ ಎಪ್ರಿಲ್ 13 ರ ಒಳಗೆ ಹಜ್ ಯಾತ್ರೆ ಕೈಗೊಳ್ಳಬಹುದು ಎಂದು ಸೌದಿ ಅರೇಬಿಯಾ ಹೇಳಿದೆ.
ಹಜ್ ಯಾತ್ರೆಗೆ ಪ್ರತಿ ದೇಶದಿಂದ ಇಂತಿಷ್ಟೇ ಮಂದಿ ಆಗಮಿಸಬೇಕು ಎನ್ನುವ ನಿಯಮ ಇದೆ. ಆಯಾ ದೇಶಗಳೇ ಅದನ್ನು ನೋಡಿಕೊಳ್ಳಬೇಕು. ಅವಕಾಶ ಸಿಗದವರು ಅಕ್ರಮವಾಗಿ ಪ್ರವೇಶಿಸುತ್ತಾರೆ. ಹೀಗೆ ಕೆಲವು ಗಂಭೀರ ಕಾರಣಗಳಿಗಾಗಿ 14 ದೇಶಗಳಿಗೆ ವೀಸಾ ನಿರಾಕರಿಸಲಾಗಿದೆ ಎಂದು ಸೌದಿ ಅರೇಬಿಯಾ ಹೇಳಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search