• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗ್ಯಾಸ್ ಸಿಲಿಂಡರ್ ಇನ್ನು 50 ರೂ ತುಟ್ಟಿ!

Tulunadu News Posted On April 7, 2025
0


0
Shares
  • Share On Facebook
  • Tweet It

ಅಡುಗೆ ಅನಿಲದ ಸಿಲೆಂಡರ್ ಬೆಲೆ ಐವತ್ತು ರೂಪಾಯಿ ಏರಿಕೆ ಕಂಡಿದೆ. ಈ ವಿಷಯದ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಮಾಹಿತಿ ನೀಡಿದರು. ಈ ಹೆಚ್ಚಳ ಎಪ್ರಿಲ್ 7ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು. ಇದು

ಉಜ್ವಲಾ ಮತ್ತು ಇತರ ಸಾಮಾನ್ಯ ಗ್ಯಾಸ್ ಸಂಪರ್ಕಕ್ಕೂ ಅನ್ವಯಿಸುತ್ತದೆ ಎಂದು ಅವರು ತಿಳಿಸಿದರು.
ಈ ದರ ಪರಿಷ್ಕರಣೆಯ ಬಗ್ಗೆ ತಿಳಿಸಿದ ಅವರು ಎರಡ್ಮೂರು ವಾರಗಳಿಗೊಮ್ಮೆ ನಡೆಯುವ ಪರಿಶೀಲನಾ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು.

14.2 ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ 803 ರೂಪಾಯಿಯಿಂದ 853 ರೂಪಾಯಿ ಆಗಲಿದೆ. ಇನ್ನು ಉಜ್ವಲ ಸೌಲಭ್ಯದಡಿ ಕನೆಕ್ಷನ್ ಪಡೆದುಕೊಂಡವರಿಗೆ 503 ರಿಂದ 553 ರೂ ಆಗಲಿದೆ. ಈ ನಡುವೆ ಎಪ್ರಿಲ್ 1 ರಿಂದ ಆಯಿಲ್ ಮಾರಾಟ ಕಂಪೆನಿಯವರು ವಾಣಿಜ್ಯ ಗ್ಯಾಸ್ ಸಿಲೆಂಡರ್ ದರವನ್ನು 41 ರೂಪಾಯಿಗಳಿಗೆ ಇಳಿಕೆ ಮಾಡಿದ್ದಾರೆ. ಇದರಿಂದ ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ದರ ಸಿಲೆಂಡರ್ ಗೆ 1762 ಆಗಲಿದೆ. ಭಾರತ 60 ಶೇಕಡಾದಷ್ಟು ಗೃಹಬಳಕೆಯ ಎಲ್ ಪಿಜಿಯನ್ನು ಆಮದು ಮಾಡಿಕೊಳ್ಳುತ್ತಿದ್ದು, ಇದರ ದರ ಅಂತರಾಷ್ಟ್ರೀಯ ಮಟ್ಟದಲ್ಲಿ ಏರಿಳಿತ ಕಾಣುತ್ತಾ ಇರುತ್ತದೆ.

ಇನ್ನು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್ ಪಿಜಿ ಸಂಪರ್ಕ ಪಡೆದವರ ಸಂಖ್ಯೆ ಈಗ ಹತ್ತೂವರೆ ಕೋಟಿಯ ಗಡಿ ತಲುಪಿದೆ. ಇದರೊಂದಿಗೆ 32.94 ಗೃಹಬಳಕೆಯ ಎಲ್ ಪಿಜಿ ಸಿಲೆಂಡರ್ ಕನೆಕ್ಷನ್ ಚಾಲನೆಯಲ್ಲಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search