• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರ ನೀಡುವ 2500 ರೂ ಸಿಗಲ್ಲ!

Tulunadu News Posted On April 16, 2025
0


0
Shares
  • Share On Facebook
  • Tweet It

ಚುನಾವಣೆಯ ಮೊದಲು ಘೋಷಣೆಯಾಗಿದ್ದ ಯೋಜನೆಗೆ ದೆಹಲಿಯ ರಾಜ್ಯ ಸರಕಾರ ಈಗ ಸ್ಪಷ್ಟವಾದ ನಿಯಮಗಳನ್ನು ರೂಪಿಸಿದೆ. ಮಹಿಳಾ ಸಮೃದ್ಧಿ ಯೋಜನೆ ಈಗ ದೆಹಲಿಯಲ್ಲಿ ಕಳೆದ ಐದು ವರ್ಷಗಳಿಂದ ವಾಸಿಸುತ್ತಿರುವ ಮಹಿಳೆಗೆ ಮಾತ್ರ ಅನ್ವಯಿಸಲಿದೆ. ಇನ್ನು ಆ ಮಹಿಳೆಯ ಕುಟುಂಬದ ವಾರ್ಷಿಕ ವರಮಾನ ಮೂರು ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಇರಬೇಕಿದೆ. ಇನ್ನು ಒಂದು ಕುಟುಂಬದಲ್ಲಿ ಎಷ್ಟೇ ಹೆಂಗಸಿದ್ದರೂ ಅತ್ಯಂತ ಹಿರಿಯ ಹೆಂಗಸಿಗೆ ಮಾತ್ರ ಈ ಯೋಜನೆಯಿಂದ ತಿಂಗಳಿಗೆ 2500 ರೂಪಾಯಿ ಸಿಗಲಿದೆ. ಇನ್ನು ಆ ಕುಟುಂಬ ಬಿಪಿಎಲ್ ಆಗಿರಬೇಕು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಇನ್ನು ರಾಜ್ಯ ಸರಕಾರದಿಂದ ಒಂದು ವೇಳೆ ಈ 2500 ರೂಪಾಯಿ ಸೌಲಭ್ಯ ಪಡೆಯುವ ಹೆಂಗಸರಿಗೆ ಮೂರಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಅಂತವರಿಗೆ ಈ ಹಣ ಸಿಗುವುದಿಲ್ಲ. ಇನ್ನು ಒಂದು ವೇಳೆ ಮೂರು ಮಕ್ಕಳು ಇದ್ದು ಲಸಿಕೆ ತೆಗೆದುಕೊಳ್ಳದೇ ಇದ್ದರೆ ಅವರು ಕೂಡ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇನ್ನು ವಿಶೇಷವಾಗಿ ಈ ಸೌಲಭ್ಯ ಬಿಪಿಎಲ್ ಕಾರ್ಡ್ ಹೊಂದಿರುವ 21 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ ಆದ್ಯತೆಯಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ನೇತೃತ್ವದ ದೆಹಲಿ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ.

ಇನ್ನು ಒಂದು ಕುಟುಂಬದ ಅತ್ಯಂತ ಹಿರಿಯ ಮಹಿಳೆಗೆ ಈ ಸೌಲಭ್ಯ ನೀಡಲಾಗುವುದು ಎಂದು ಹೇಳಿದರೂ ಆ ಮಹಿಳೆ ಸರಕಾರದ ಬೇರೆ ಸೌಲಭ್ಯಗಳಾದ ವಿಧವಾ ವೇತನ ಅಥವಾ ವೃದ್ಧಾಪ್ಯ ವೇತನವನ್ನು ಪಡೆಯಬಾರದು. ಅಂತಹ ಯೋಜನೆಯ ಫಲಾನುಭವಿ ಆಗಿದ್ದಲ್ಲಿ ಈ ಹಣ ಸಿಗುವುದಿಲ್ಲ.
ಚುನಾವಣಾ ಪೂರ್ವದಲ್ಲಿ ಬಿಜೆಪಿಯಿಂದ ಮಹಿಳಾ ಸಮೃದ್ಧಿ ಯೋಜನೆ ಎನ್ನುವ ತಿಂಗಳಿಗೆ 2500 ರೂಪಾಯಿ ನೀಡುವ ಉಚಿತ ಯೋಜನೆಯನ್ನು ಘೋಷಿಸಲಾಗಿತ್ತು. ಈ ಹಣ ನೇರವಾಗಿ ಮಹಿಳೆಯರ ಖಾತೆಗೆ ಜಮೆ ಆಗುವ ಭರವಸೆ ಕೂಡ ಇತ್ತು. ಈಗ ಈ ಯೋಜನೆಯ ಶರ್ತಗಳನ್ನು ಸರಕಾರ ನೀಡಿದೆ. ಇದಕ್ಕಾಗಿ ದೆಹಲಿ ಸರಕಾರ 5100 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು, ಇದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಸರಕಾರದ ಪ್ರಕಾರ ಕನಿಷ್ಟ 20 – 25 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search