• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರ ನೀಡುವ 2500 ರೂ ಸಿಗಲ್ಲ!

Tulunadu News Posted On April 16, 2025
0


0
Shares
  • Share On Facebook
  • Tweet It

ಚುನಾವಣೆಯ ಮೊದಲು ಘೋಷಣೆಯಾಗಿದ್ದ ಯೋಜನೆಗೆ ದೆಹಲಿಯ ರಾಜ್ಯ ಸರಕಾರ ಈಗ ಸ್ಪಷ್ಟವಾದ ನಿಯಮಗಳನ್ನು ರೂಪಿಸಿದೆ. ಮಹಿಳಾ ಸಮೃದ್ಧಿ ಯೋಜನೆ ಈಗ ದೆಹಲಿಯಲ್ಲಿ ಕಳೆದ ಐದು ವರ್ಷಗಳಿಂದ ವಾಸಿಸುತ್ತಿರುವ ಮಹಿಳೆಗೆ ಮಾತ್ರ ಅನ್ವಯಿಸಲಿದೆ. ಇನ್ನು ಆ ಮಹಿಳೆಯ ಕುಟುಂಬದ ವಾರ್ಷಿಕ ವರಮಾನ ಮೂರು ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಇರಬೇಕಿದೆ. ಇನ್ನು ಒಂದು ಕುಟುಂಬದಲ್ಲಿ ಎಷ್ಟೇ ಹೆಂಗಸಿದ್ದರೂ ಅತ್ಯಂತ ಹಿರಿಯ ಹೆಂಗಸಿಗೆ ಮಾತ್ರ ಈ ಯೋಜನೆಯಿಂದ ತಿಂಗಳಿಗೆ 2500 ರೂಪಾಯಿ ಸಿಗಲಿದೆ. ಇನ್ನು ಆ ಕುಟುಂಬ ಬಿಪಿಎಲ್ ಆಗಿರಬೇಕು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಇನ್ನು ರಾಜ್ಯ ಸರಕಾರದಿಂದ ಒಂದು ವೇಳೆ ಈ 2500 ರೂಪಾಯಿ ಸೌಲಭ್ಯ ಪಡೆಯುವ ಹೆಂಗಸರಿಗೆ ಮೂರಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಅಂತವರಿಗೆ ಈ ಹಣ ಸಿಗುವುದಿಲ್ಲ. ಇನ್ನು ಒಂದು ವೇಳೆ ಮೂರು ಮಕ್ಕಳು ಇದ್ದು ಲಸಿಕೆ ತೆಗೆದುಕೊಳ್ಳದೇ ಇದ್ದರೆ ಅವರು ಕೂಡ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇನ್ನು ವಿಶೇಷವಾಗಿ ಈ ಸೌಲಭ್ಯ ಬಿಪಿಎಲ್ ಕಾರ್ಡ್ ಹೊಂದಿರುವ 21 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ ಆದ್ಯತೆಯಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ನೇತೃತ್ವದ ದೆಹಲಿ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ.

ಇನ್ನು ಒಂದು ಕುಟುಂಬದ ಅತ್ಯಂತ ಹಿರಿಯ ಮಹಿಳೆಗೆ ಈ ಸೌಲಭ್ಯ ನೀಡಲಾಗುವುದು ಎಂದು ಹೇಳಿದರೂ ಆ ಮಹಿಳೆ ಸರಕಾರದ ಬೇರೆ ಸೌಲಭ್ಯಗಳಾದ ವಿಧವಾ ವೇತನ ಅಥವಾ ವೃದ್ಧಾಪ್ಯ ವೇತನವನ್ನು ಪಡೆಯಬಾರದು. ಅಂತಹ ಯೋಜನೆಯ ಫಲಾನುಭವಿ ಆಗಿದ್ದಲ್ಲಿ ಈ ಹಣ ಸಿಗುವುದಿಲ್ಲ.
ಚುನಾವಣಾ ಪೂರ್ವದಲ್ಲಿ ಬಿಜೆಪಿಯಿಂದ ಮಹಿಳಾ ಸಮೃದ್ಧಿ ಯೋಜನೆ ಎನ್ನುವ ತಿಂಗಳಿಗೆ 2500 ರೂಪಾಯಿ ನೀಡುವ ಉಚಿತ ಯೋಜನೆಯನ್ನು ಘೋಷಿಸಲಾಗಿತ್ತು. ಈ ಹಣ ನೇರವಾಗಿ ಮಹಿಳೆಯರ ಖಾತೆಗೆ ಜಮೆ ಆಗುವ ಭರವಸೆ ಕೂಡ ಇತ್ತು. ಈಗ ಈ ಯೋಜನೆಯ ಶರ್ತಗಳನ್ನು ಸರಕಾರ ನೀಡಿದೆ. ಇದಕ್ಕಾಗಿ ದೆಹಲಿ ಸರಕಾರ 5100 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು, ಇದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಸರಕಾರದ ಪ್ರಕಾರ ಕನಿಷ್ಟ 20 – 25 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search