• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರ ನೀಡುವ 2500 ರೂ ಸಿಗಲ್ಲ!

Tulunadu News Posted On April 16, 2025
0


0
Shares
  • Share On Facebook
  • Tweet It

ಚುನಾವಣೆಯ ಮೊದಲು ಘೋಷಣೆಯಾಗಿದ್ದ ಯೋಜನೆಗೆ ದೆಹಲಿಯ ರಾಜ್ಯ ಸರಕಾರ ಈಗ ಸ್ಪಷ್ಟವಾದ ನಿಯಮಗಳನ್ನು ರೂಪಿಸಿದೆ. ಮಹಿಳಾ ಸಮೃದ್ಧಿ ಯೋಜನೆ ಈಗ ದೆಹಲಿಯಲ್ಲಿ ಕಳೆದ ಐದು ವರ್ಷಗಳಿಂದ ವಾಸಿಸುತ್ತಿರುವ ಮಹಿಳೆಗೆ ಮಾತ್ರ ಅನ್ವಯಿಸಲಿದೆ. ಇನ್ನು ಆ ಮಹಿಳೆಯ ಕುಟುಂಬದ ವಾರ್ಷಿಕ ವರಮಾನ ಮೂರು ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಇರಬೇಕಿದೆ. ಇನ್ನು ಒಂದು ಕುಟುಂಬದಲ್ಲಿ ಎಷ್ಟೇ ಹೆಂಗಸಿದ್ದರೂ ಅತ್ಯಂತ ಹಿರಿಯ ಹೆಂಗಸಿಗೆ ಮಾತ್ರ ಈ ಯೋಜನೆಯಿಂದ ತಿಂಗಳಿಗೆ 2500 ರೂಪಾಯಿ ಸಿಗಲಿದೆ. ಇನ್ನು ಆ ಕುಟುಂಬ ಬಿಪಿಎಲ್ ಆಗಿರಬೇಕು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಇನ್ನು ರಾಜ್ಯ ಸರಕಾರದಿಂದ ಒಂದು ವೇಳೆ ಈ 2500 ರೂಪಾಯಿ ಸೌಲಭ್ಯ ಪಡೆಯುವ ಹೆಂಗಸರಿಗೆ ಮೂರಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಅಂತವರಿಗೆ ಈ ಹಣ ಸಿಗುವುದಿಲ್ಲ. ಇನ್ನು ಒಂದು ವೇಳೆ ಮೂರು ಮಕ್ಕಳು ಇದ್ದು ಲಸಿಕೆ ತೆಗೆದುಕೊಳ್ಳದೇ ಇದ್ದರೆ ಅವರು ಕೂಡ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇನ್ನು ವಿಶೇಷವಾಗಿ ಈ ಸೌಲಭ್ಯ ಬಿಪಿಎಲ್ ಕಾರ್ಡ್ ಹೊಂದಿರುವ 21 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ ಆದ್ಯತೆಯಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ನೇತೃತ್ವದ ದೆಹಲಿ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ.

ಇನ್ನು ಒಂದು ಕುಟುಂಬದ ಅತ್ಯಂತ ಹಿರಿಯ ಮಹಿಳೆಗೆ ಈ ಸೌಲಭ್ಯ ನೀಡಲಾಗುವುದು ಎಂದು ಹೇಳಿದರೂ ಆ ಮಹಿಳೆ ಸರಕಾರದ ಬೇರೆ ಸೌಲಭ್ಯಗಳಾದ ವಿಧವಾ ವೇತನ ಅಥವಾ ವೃದ್ಧಾಪ್ಯ ವೇತನವನ್ನು ಪಡೆಯಬಾರದು. ಅಂತಹ ಯೋಜನೆಯ ಫಲಾನುಭವಿ ಆಗಿದ್ದಲ್ಲಿ ಈ ಹಣ ಸಿಗುವುದಿಲ್ಲ.
ಚುನಾವಣಾ ಪೂರ್ವದಲ್ಲಿ ಬಿಜೆಪಿಯಿಂದ ಮಹಿಳಾ ಸಮೃದ್ಧಿ ಯೋಜನೆ ಎನ್ನುವ ತಿಂಗಳಿಗೆ 2500 ರೂಪಾಯಿ ನೀಡುವ ಉಚಿತ ಯೋಜನೆಯನ್ನು ಘೋಷಿಸಲಾಗಿತ್ತು. ಈ ಹಣ ನೇರವಾಗಿ ಮಹಿಳೆಯರ ಖಾತೆಗೆ ಜಮೆ ಆಗುವ ಭರವಸೆ ಕೂಡ ಇತ್ತು. ಈಗ ಈ ಯೋಜನೆಯ ಶರ್ತಗಳನ್ನು ಸರಕಾರ ನೀಡಿದೆ. ಇದಕ್ಕಾಗಿ ದೆಹಲಿ ಸರಕಾರ 5100 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು, ಇದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಸರಕಾರದ ಪ್ರಕಾರ ಕನಿಷ್ಟ 20 – 25 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search