• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರ ನೀಡುವ 2500 ರೂ ಸಿಗಲ್ಲ!

Tulunadu News Posted On April 16, 2025
0


0
Shares
  • Share On Facebook
  • Tweet It

ಚುನಾವಣೆಯ ಮೊದಲು ಘೋಷಣೆಯಾಗಿದ್ದ ಯೋಜನೆಗೆ ದೆಹಲಿಯ ರಾಜ್ಯ ಸರಕಾರ ಈಗ ಸ್ಪಷ್ಟವಾದ ನಿಯಮಗಳನ್ನು ರೂಪಿಸಿದೆ. ಮಹಿಳಾ ಸಮೃದ್ಧಿ ಯೋಜನೆ ಈಗ ದೆಹಲಿಯಲ್ಲಿ ಕಳೆದ ಐದು ವರ್ಷಗಳಿಂದ ವಾಸಿಸುತ್ತಿರುವ ಮಹಿಳೆಗೆ ಮಾತ್ರ ಅನ್ವಯಿಸಲಿದೆ. ಇನ್ನು ಆ ಮಹಿಳೆಯ ಕುಟುಂಬದ ವಾರ್ಷಿಕ ವರಮಾನ ಮೂರು ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಇರಬೇಕಿದೆ. ಇನ್ನು ಒಂದು ಕುಟುಂಬದಲ್ಲಿ ಎಷ್ಟೇ ಹೆಂಗಸಿದ್ದರೂ ಅತ್ಯಂತ ಹಿರಿಯ ಹೆಂಗಸಿಗೆ ಮಾತ್ರ ಈ ಯೋಜನೆಯಿಂದ ತಿಂಗಳಿಗೆ 2500 ರೂಪಾಯಿ ಸಿಗಲಿದೆ. ಇನ್ನು ಆ ಕುಟುಂಬ ಬಿಪಿಎಲ್ ಆಗಿರಬೇಕು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಇನ್ನು ರಾಜ್ಯ ಸರಕಾರದಿಂದ ಒಂದು ವೇಳೆ ಈ 2500 ರೂಪಾಯಿ ಸೌಲಭ್ಯ ಪಡೆಯುವ ಹೆಂಗಸರಿಗೆ ಮೂರಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಅಂತವರಿಗೆ ಈ ಹಣ ಸಿಗುವುದಿಲ್ಲ. ಇನ್ನು ಒಂದು ವೇಳೆ ಮೂರು ಮಕ್ಕಳು ಇದ್ದು ಲಸಿಕೆ ತೆಗೆದುಕೊಳ್ಳದೇ ಇದ್ದರೆ ಅವರು ಕೂಡ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇನ್ನು ವಿಶೇಷವಾಗಿ ಈ ಸೌಲಭ್ಯ ಬಿಪಿಎಲ್ ಕಾರ್ಡ್ ಹೊಂದಿರುವ 21 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ ಆದ್ಯತೆಯಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ನೇತೃತ್ವದ ದೆಹಲಿ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ.

ಇನ್ನು ಒಂದು ಕುಟುಂಬದ ಅತ್ಯಂತ ಹಿರಿಯ ಮಹಿಳೆಗೆ ಈ ಸೌಲಭ್ಯ ನೀಡಲಾಗುವುದು ಎಂದು ಹೇಳಿದರೂ ಆ ಮಹಿಳೆ ಸರಕಾರದ ಬೇರೆ ಸೌಲಭ್ಯಗಳಾದ ವಿಧವಾ ವೇತನ ಅಥವಾ ವೃದ್ಧಾಪ್ಯ ವೇತನವನ್ನು ಪಡೆಯಬಾರದು. ಅಂತಹ ಯೋಜನೆಯ ಫಲಾನುಭವಿ ಆಗಿದ್ದಲ್ಲಿ ಈ ಹಣ ಸಿಗುವುದಿಲ್ಲ.
ಚುನಾವಣಾ ಪೂರ್ವದಲ್ಲಿ ಬಿಜೆಪಿಯಿಂದ ಮಹಿಳಾ ಸಮೃದ್ಧಿ ಯೋಜನೆ ಎನ್ನುವ ತಿಂಗಳಿಗೆ 2500 ರೂಪಾಯಿ ನೀಡುವ ಉಚಿತ ಯೋಜನೆಯನ್ನು ಘೋಷಿಸಲಾಗಿತ್ತು. ಈ ಹಣ ನೇರವಾಗಿ ಮಹಿಳೆಯರ ಖಾತೆಗೆ ಜಮೆ ಆಗುವ ಭರವಸೆ ಕೂಡ ಇತ್ತು. ಈಗ ಈ ಯೋಜನೆಯ ಶರ್ತಗಳನ್ನು ಸರಕಾರ ನೀಡಿದೆ. ಇದಕ್ಕಾಗಿ ದೆಹಲಿ ಸರಕಾರ 5100 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು, ಇದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಸರಕಾರದ ಪ್ರಕಾರ ಕನಿಷ್ಟ 20 – 25 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search