• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

3 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರ ನೀಡುವ 2500 ರೂ ಸಿಗಲ್ಲ!

Tulunadu News Posted On April 16, 2025


  • Share On Facebook
  • Tweet It

ಚುನಾವಣೆಯ ಮೊದಲು ಘೋಷಣೆಯಾಗಿದ್ದ ಯೋಜನೆಗೆ ದೆಹಲಿಯ ರಾಜ್ಯ ಸರಕಾರ ಈಗ ಸ್ಪಷ್ಟವಾದ ನಿಯಮಗಳನ್ನು ರೂಪಿಸಿದೆ. ಮಹಿಳಾ ಸಮೃದ್ಧಿ ಯೋಜನೆ ಈಗ ದೆಹಲಿಯಲ್ಲಿ ಕಳೆದ ಐದು ವರ್ಷಗಳಿಂದ ವಾಸಿಸುತ್ತಿರುವ ಮಹಿಳೆಗೆ ಮಾತ್ರ ಅನ್ವಯಿಸಲಿದೆ. ಇನ್ನು ಆ ಮಹಿಳೆಯ ಕುಟುಂಬದ ವಾರ್ಷಿಕ ವರಮಾನ ಮೂರು ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಇರಬೇಕಿದೆ. ಇನ್ನು ಒಂದು ಕುಟುಂಬದಲ್ಲಿ ಎಷ್ಟೇ ಹೆಂಗಸಿದ್ದರೂ ಅತ್ಯಂತ ಹಿರಿಯ ಹೆಂಗಸಿಗೆ ಮಾತ್ರ ಈ ಯೋಜನೆಯಿಂದ ತಿಂಗಳಿಗೆ 2500 ರೂಪಾಯಿ ಸಿಗಲಿದೆ. ಇನ್ನು ಆ ಕುಟುಂಬ ಬಿಪಿಎಲ್ ಆಗಿರಬೇಕು ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ಇನ್ನು ರಾಜ್ಯ ಸರಕಾರದಿಂದ ಒಂದು ವೇಳೆ ಈ 2500 ರೂಪಾಯಿ ಸೌಲಭ್ಯ ಪಡೆಯುವ ಹೆಂಗಸರಿಗೆ ಮೂರಕ್ಕಿಂತ ಹೆಚ್ಚು ಮಕ್ಕಳು ಇದ್ದರೆ ಅಂತವರಿಗೆ ಈ ಹಣ ಸಿಗುವುದಿಲ್ಲ. ಇನ್ನು ಒಂದು ವೇಳೆ ಮೂರು ಮಕ್ಕಳು ಇದ್ದು ಲಸಿಕೆ ತೆಗೆದುಕೊಳ್ಳದೇ ಇದ್ದರೆ ಅವರು ಕೂಡ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇನ್ನು ವಿಶೇಷವಾಗಿ ಈ ಸೌಲಭ್ಯ ಬಿಪಿಎಲ್ ಕಾರ್ಡ್ ಹೊಂದಿರುವ 21 ರಿಂದ 60 ವರ್ಷದ ಒಳಗಿನ ಮಹಿಳೆಯರಿಗೆ ಆದ್ಯತೆಯಾಗಿ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ನೇತೃತ್ವದ ದೆಹಲಿ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದೆ.

ಇನ್ನು ಒಂದು ಕುಟುಂಬದ ಅತ್ಯಂತ ಹಿರಿಯ ಮಹಿಳೆಗೆ ಈ ಸೌಲಭ್ಯ ನೀಡಲಾಗುವುದು ಎಂದು ಹೇಳಿದರೂ ಆ ಮಹಿಳೆ ಸರಕಾರದ ಬೇರೆ ಸೌಲಭ್ಯಗಳಾದ ವಿಧವಾ ವೇತನ ಅಥವಾ ವೃದ್ಧಾಪ್ಯ ವೇತನವನ್ನು ಪಡೆಯಬಾರದು. ಅಂತಹ ಯೋಜನೆಯ ಫಲಾನುಭವಿ ಆಗಿದ್ದಲ್ಲಿ ಈ ಹಣ ಸಿಗುವುದಿಲ್ಲ.
ಚುನಾವಣಾ ಪೂರ್ವದಲ್ಲಿ ಬಿಜೆಪಿಯಿಂದ ಮಹಿಳಾ ಸಮೃದ್ಧಿ ಯೋಜನೆ ಎನ್ನುವ ತಿಂಗಳಿಗೆ 2500 ರೂಪಾಯಿ ನೀಡುವ ಉಚಿತ ಯೋಜನೆಯನ್ನು ಘೋಷಿಸಲಾಗಿತ್ತು. ಈ ಹಣ ನೇರವಾಗಿ ಮಹಿಳೆಯರ ಖಾತೆಗೆ ಜಮೆ ಆಗುವ ಭರವಸೆ ಕೂಡ ಇತ್ತು. ಈಗ ಈ ಯೋಜನೆಯ ಶರ್ತಗಳನ್ನು ಸರಕಾರ ನೀಡಿದೆ. ಇದಕ್ಕಾಗಿ ದೆಹಲಿ ಸರಕಾರ 5100 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು, ಇದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅನುಕೂಲ ಕಲ್ಪಿಸಲಿದೆ ಎಂದು ಹೇಳಲಾಗಿದೆ. ಸರಕಾರದ ಪ್ರಕಾರ ಕನಿಷ್ಟ 20 – 25 ಲಕ್ಷ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search