• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇನ್ನು ರೈಲಿನ ಒಳಗೆ ಎಟಿಎಂನಲ್ಲಿ ಹಣ ವಿದ್ ಡ್ರಾ!

Tulunadu News Posted On April 17, 2025


  • Share On Facebook
  • Tweet It

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಿ. ಅರ್ಜೆಂಟಾಗಿ ಹಣದ ಅವಶ್ಯಕತೆ ಇದೆ. ಪೆಟಿಎಂ, ಗೂಗಲ್ ಪೇ ಇರಬಹುದು. ಆದರೆ ವರ್ಕ್ ಆಗುತ್ತಾ ಇಲ್ಲ ಅಥವಾ ಹಾರ್ಡ್ ಕ್ಯಾಶ್ ಅಗತ್ಯ ಇದೆ. ಅಂತಹ ಸಂದರ್ಭದಲ್ಲಿ ಯಾರ ಬಳಿ ಹಣ ಕೇಳುವುದು ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಭಾರತೀಯ ರೈಲ್ವೆ ಮೊದಲ ಬಾರಿಗೆ ರೈಲಿನೊಳಗೆ ಎಟಿಎಂ ಸೌಲಭ್ಯ ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಖುಷಿ ಸುದ್ದಿ ನೀಡಿದೆ. ಇನ್ನು ನಿಮಗೆ ಅಗತ್ಯ ಇದ್ದರೆ ರೈಲಿನೊಳಗೆ ಹಣವನ್ನು ವಿದ್ ಡ್ರಾ ಮಾಡಬಹುದು.

ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಇಂತಹ ಸೇವೆಯನ್ನು ಆರಂಭಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮುಂಬೈ ಮತ್ತು ಮನಮಾಡ್ ನಡುವೆ ಸಂಚರಿಸುವ ಪಂಚವಟಿ ಎಕ್ಸಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಎಟಿಎಂ ಅನ್ನು ಅಳವಡಿಸಲಾಗಿದೆ. ರೈಲಿನ 22 ಬೋಗಿಯ ಪ್ರಯಾಣಿಕರು ಸೌಲಭ್ಯ ಪಡೆಯಬಹುದು. ಅಂತರ್ಜಾಲ ಸಿಗ್ನಲ್ ಅತ್ಯಂತ ಕಡಿಮೆ ಇರುವ ಕೆಲವು ಪ್ರದೇಶಗಳನ್ನು ಹೊರತುಪಡಿಸಿದರೆ ಪ್ರಾಯೋಗಿಕ ಪರೀಕ್ಷೆ ವೇಳೆ ಮಾರ್ಗದುದ್ದಕ್ಕೂ ಎಟಿಎಂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಎಟಿಎಂನಿಂದ ಕೇವಲ ಹಣ ವಿದ್ ಡ್ರಾ ಮಾತ್ರವಲ್ಲ, ಇದರ ಜೊತೆಗೆ ಚೆಕ್ ಬುಕ್ ಆರ್ಡರ್ ಪಡೆಯಬಹುದು ಮತ್ತು ಬ್ಯಾಂಕ್ ಸ್ಟೇಟ್ ಮೆಂಟ್ ಕೂಡ ಪಡೆಯಬಹುದು. ಇನ್ನು ಎಟಿಎಂ ಸುರಕ್ಷತೆ ದೃಷ್ಟಿಯಿಂದಲೂ ಕ್ರಮ ಕೈಗೊಳ್ಳಲಾಗಿದ್ದು, ಎಟಿಎಂಗೆ ಶಟರ್ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ 24 ಗಂಟೆಯೂ ಸಿಸಿಟಿವಿ ಕಣ್ಗಾವಲು ಇದಕ್ಕೆ ಇರಲಿದೆ. 1987 ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಎಟಿಎಂ ಜಾರಿಗೆ ಬಂದಿತು. ಅದಾಗಿ 38 ವರ್ಷಗಳ ಬಳಿಕ ರೈಲಿನಲ್ಲಿ ಎಟಿಎಂ ಅನುಷ್ಟಾನಕ್ಕೆ ಬಂದಿದ್ದು, ಯಶಸ್ವಿಯಾದರೆ ಇತರ ರೈಲಿನಲ್ಲಿಯೂ ಈ ಸೌಲಭ್ಯ ಸಿಗಲಿದೆ.

ಇವತ್ತಿನ ಆಧುನಿಕ ಯುಗದಲ್ಲಿ ಮೊಬೈಲಿನಿಂದಲೇ ಆರ್ಥಿಕ ವ್ಯವಹಾರಗಳು ಬಹುತೇಕ ನಡೆಯುತ್ತಿದ್ದು, ಎಟಿಎಂ ಕೇಂದ್ರಗಳು ಅಷ್ಟಾಗಿ ಉಪಯೋಗಕ್ಕೆ ಬರುವುದು ಕಡಿಮೆಯಾಗಿರುವ ಈ ಕಾಲದಲ್ಲಿ ರೈಲಿನಲ್ಲಿ ಇದರ ಉಪಯುಕ್ತತೆ ಎಷ್ಟರಮಟ್ಟಿಗೆ ಫಲಪ್ರದವಾಗುತ್ತದೆ ಎನ್ನುವುದಕ್ಕೆ ಕಾಲವೇ ಉತ್ತರ ನೀಡಬೇಕು.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search