• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ರೈಲಿನ ಒಳಗೆ ಎಟಿಎಂನಲ್ಲಿ ಹಣ ವಿದ್ ಡ್ರಾ!

Tulunadu News Posted On April 17, 2025
0


0
Shares
  • Share On Facebook
  • Tweet It

ರೈಲಿನಲ್ಲಿ ಪ್ರಯಾಣಿಸುತ್ತಿದ್ದೀರಿ. ಅರ್ಜೆಂಟಾಗಿ ಹಣದ ಅವಶ್ಯಕತೆ ಇದೆ. ಪೆಟಿಎಂ, ಗೂಗಲ್ ಪೇ ಇರಬಹುದು. ಆದರೆ ವರ್ಕ್ ಆಗುತ್ತಾ ಇಲ್ಲ ಅಥವಾ ಹಾರ್ಡ್ ಕ್ಯಾಶ್ ಅಗತ್ಯ ಇದೆ. ಅಂತಹ ಸಂದರ್ಭದಲ್ಲಿ ಯಾರ ಬಳಿ ಹಣ ಕೇಳುವುದು ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಭಾರತೀಯ ರೈಲ್ವೆ ಮೊದಲ ಬಾರಿಗೆ ರೈಲಿನೊಳಗೆ ಎಟಿಎಂ ಸೌಲಭ್ಯ ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಖುಷಿ ಸುದ್ದಿ ನೀಡಿದೆ. ಇನ್ನು ನಿಮಗೆ ಅಗತ್ಯ ಇದ್ದರೆ ರೈಲಿನೊಳಗೆ ಹಣವನ್ನು ವಿದ್ ಡ್ರಾ ಮಾಡಬಹುದು.

ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಇಂತಹ ಸೇವೆಯನ್ನು ಆರಂಭಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮುಂಬೈ ಮತ್ತು ಮನಮಾಡ್ ನಡುವೆ ಸಂಚರಿಸುವ ಪಂಚವಟಿ ಎಕ್ಸಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಎಟಿಎಂ ಅನ್ನು ಅಳವಡಿಸಲಾಗಿದೆ. ರೈಲಿನ 22 ಬೋಗಿಯ ಪ್ರಯಾಣಿಕರು ಸೌಲಭ್ಯ ಪಡೆಯಬಹುದು. ಅಂತರ್ಜಾಲ ಸಿಗ್ನಲ್ ಅತ್ಯಂತ ಕಡಿಮೆ ಇರುವ ಕೆಲವು ಪ್ರದೇಶಗಳನ್ನು ಹೊರತುಪಡಿಸಿದರೆ ಪ್ರಾಯೋಗಿಕ ಪರೀಕ್ಷೆ ವೇಳೆ ಮಾರ್ಗದುದ್ದಕ್ಕೂ ಎಟಿಎಂ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಎಟಿಎಂನಿಂದ ಕೇವಲ ಹಣ ವಿದ್ ಡ್ರಾ ಮಾತ್ರವಲ್ಲ, ಇದರ ಜೊತೆಗೆ ಚೆಕ್ ಬುಕ್ ಆರ್ಡರ್ ಪಡೆಯಬಹುದು ಮತ್ತು ಬ್ಯಾಂಕ್ ಸ್ಟೇಟ್ ಮೆಂಟ್ ಕೂಡ ಪಡೆಯಬಹುದು. ಇನ್ನು ಎಟಿಎಂ ಸುರಕ್ಷತೆ ದೃಷ್ಟಿಯಿಂದಲೂ ಕ್ರಮ ಕೈಗೊಳ್ಳಲಾಗಿದ್ದು, ಎಟಿಎಂಗೆ ಶಟರ್ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ 24 ಗಂಟೆಯೂ ಸಿಸಿಟಿವಿ ಕಣ್ಗಾವಲು ಇದಕ್ಕೆ ಇರಲಿದೆ. 1987 ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಎಟಿಎಂ ಜಾರಿಗೆ ಬಂದಿತು. ಅದಾಗಿ 38 ವರ್ಷಗಳ ಬಳಿಕ ರೈಲಿನಲ್ಲಿ ಎಟಿಎಂ ಅನುಷ್ಟಾನಕ್ಕೆ ಬಂದಿದ್ದು, ಯಶಸ್ವಿಯಾದರೆ ಇತರ ರೈಲಿನಲ್ಲಿಯೂ ಈ ಸೌಲಭ್ಯ ಸಿಗಲಿದೆ.

ಇವತ್ತಿನ ಆಧುನಿಕ ಯುಗದಲ್ಲಿ ಮೊಬೈಲಿನಿಂದಲೇ ಆರ್ಥಿಕ ವ್ಯವಹಾರಗಳು ಬಹುತೇಕ ನಡೆಯುತ್ತಿದ್ದು, ಎಟಿಎಂ ಕೇಂದ್ರಗಳು ಅಷ್ಟಾಗಿ ಉಪಯೋಗಕ್ಕೆ ಬರುವುದು ಕಡಿಮೆಯಾಗಿರುವ ಈ ಕಾಲದಲ್ಲಿ ರೈಲಿನಲ್ಲಿ ಇದರ ಉಪಯುಕ್ತತೆ ಎಷ್ಟರಮಟ್ಟಿಗೆ ಫಲಪ್ರದವಾಗುತ್ತದೆ ಎನ್ನುವುದಕ್ಕೆ ಕಾಲವೇ ಉತ್ತರ ನೀಡಬೇಕು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search