• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮ ಮನೆಯ ಆಸುಪಾಸು ವಲಸೆ ಕಾರ್ಮಿಕರಿದ್ದರೆ ಮುಂಜಾಗ್ರತೆ ವಹಿಸಿ!

Tulunadu News Posted On April 17, 2025
0


0
Shares
  • Share On Facebook
  • Tweet It

ಕರ್ನಾಟಕದಲ್ಲಿ ಬಿಹಾರ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಒಡಿಶಾ ಸಹಿತ ಉತ್ತರ ಭಾರತದ ಅನೇಕ ರಾಜ್ಯಗಳಿಂದ ವಲಸೆ ಬಂದು ಇಲ್ಲಿ ನೆಲೆಸಿರುವ ಕಾರ್ಮಿಕರ ಸಂಖ್ಯೆ ದೊಡ್ಡದಿದೆ. ಅವರಲ್ಲಿ ಹೆಚ್ಚಿನವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಇಲ್ಲಿ ಒಂದೆರಡು ವರ್ಷ ನೆಲೆಸಿ ನಂತರ ಊರಿಗೆ ಮರಳುತ್ತಾರೆ. ನಂತರ ಮತ್ತೆ ಇಲ್ಲಿ ಕೆಲಸ ಇದೆ ಎಂದು ಗುತ್ತಿಗೆದಾರರು ಕರೆದರೆ ಮತ್ತೆ ಬರುತ್ತಾರೆ. ವಲಸೆ ಕಾರ್ಮಿಕರಲ್ಲಿ ಬಹುತೇಕರು ಪತ್ನಿಯನ್ನು ತಮ್ಮ ಊರಿನಲ್ಲಿಯೇ ಬಿಟ್ಟು ವರ್ಷಗಟ್ಟಲೆ ದೂರ ಇರುತ್ತಾರೆ. ಇಲ್ಲಿ ಬಂದು ಸ್ಲಂಗಳಲ್ಲಿ ವಾಸ ಮಾಡುತ್ತಾ, ಕೆಲವರು ನಿರ್ಮಾಣ ಹಂತದ ಜಾಗದ ಆಸುಪಾಸಿನಲ್ಲಿ ವಾಸಿಸುತ್ತಾ ಇರುತ್ತಾರೆ. ಇವರಲ್ಲಿ ಕೆಲವರಿಗೆ ಹಲವು ಕಾಲ ಪತ್ನಿ ಹತ್ತಿರ ಇರದೇ ತಮ್ಮ ಕಾಮಾಂಛೆಯನ್ನು ತಣಿಸಲು ಏನಾದರೂ ದಾರಿಯನ್ನು ಹುಡುಕುತ್ತಲೇ ಇರುತ್ತಾರೆ. ಇಂತವರ ಕೈಯಲ್ಲಿ ಪುಟ್ಟ ಮಕ್ಕಳು ಸಿಕ್ಕಿದರೆ ಆಗ ಅವರ ಮೇಲೆ ಎರಗುವ ಇವರಿಂದ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯೇ ಜೀವಂತ ಸಾಕ್ಷಿ.

ಇನ್ನು ಕೆಲವರು ಶಾಲೆ, ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳನ್ನು, ಉದ್ಯೋಗಕ್ಕಾಗಿ ಹೋಗಿ ರಾತ್ರಿ ಹಿಂದಿರುಗುವ ಮಹಿಳೆಯರ ಮೇಲೆ ಕಣ್ಣಾಕುವ ಘಟನೆಗಳು ನಡೆಯುತ್ತಲೇ ಇರುತ್ತದೆ. ಡ್ರಗ್ಸ್ ಅಮಲಿನಲ್ಲಿರುವ ಇವರಿಗೆ ಕ್ರೈಂ ಎನ್ನುವುದು ದೊಡ್ಡ ವಿಷಯವೇ ಅಲ್ಲ. ಪೊಲೀಸರ ಬಗ್ಗೆ ಹೆದರಿಕೆ ಇಲ್ಲದಿರುವುದು, ಗಾಂಜಾ ನಶೆಯಲ್ಲಿರುವುದು, ಲೈಂಗಿಕ ತೃಪ್ತಿಗಾಗಿ ಹಾತೊರೆಯುತ್ತಾ ಅಪರಾಧದಲ್ಲಿ ಸಲೀಸಾಗಿ ತೊಡಗುವ ಇವರುಗಳ ಬಗ್ಗೆ ಮುಂಜಾಗ್ರತೆಯನ್ನು ವಹಿಸಬೇಕಾಗಿರುವ ಅಗತ್ಯ ಸಭ್ಯ ಸಮಾಜಕ್ಕೆ ಇದೆ.

ಕೇಂದ್ರ ಸರಕಾರದ ಕಾರ್ಮಿಕರಿಗಾಗಿಯೇ ಇರುವ ಪೋರ್ಟಲ್ ನಲ್ಲಿ ನೋಂದಾವಣೆಯಾಗಿರುವ ಪ್ರಕಾರ ಕರ್ನಾಟಕದಲ್ಲಿ ವಲಸೆ ಮತ್ತು ಅಸಂಘಟಿತ ವಲಯದ ಗಿಗ್ ಕಾರ್ಮಿಕರು ಸೇರಿದರೆ 1,07,4,479 ಕಾರ್ಮಿಕರು ಕರ್ನಾಟಕದಲ್ಲಿದ್ದಾರೆ. ಇನ್ನು ಇದನ್ನು ಬಿಟ್ಟು ನೋಂದಾವಣೆ ಮಾಡಿಕೊಳ್ಳದ ಅದೆಷ್ಟೋ ವಲಸೆ ಕಾರ್ಮಿಕರು ನಮ್ಮ ರಾಜ್ಯದಲ್ಲಿದ್ದಾರೆ.

ವಲಸೆ ಹೋಗುವ ಮುನ್ನ ಅಥವಾ ರಾಜ್ಯ ತೊರೆಯುವ ಮುನ್ನ ಹೋಗುವ ರಾಜ್ಯ ಮತ್ತು ತಮ್ಮ ರಾಜ್ಯದಲ್ಲಿ ಕಡ್ಡಾಯವಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ. ಗುತ್ತಿಗೆದಾರರು ಕಾನೂನುಬಾಹಿರವಾಗಿ ವಲಸೆ ಕಾರ್ಮಿಕರನ್ನು ಕರೆ ತಂದು ತಮ್ಮ ಕಟ್ಟಡ ನಿರ್ಮಾಣ, ಕೃಷಿ ಚಟುವಟಿಕೆ, ಪ್ಲಾಂಟೇಶನ್, ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ವಲಸೆ ಕಾರ್ಮಿಕರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದರ ಬಗ್ಗೆ ಪ್ರತ್ಯೇಕ ಮಾಹಿತಿ ಇಲ್ಲಿಯವರೆಗೆ ಇಲ್ಲ. ಆದರೆ ಕೊಲೆ, ಹಲ್ಲೆ, ದರೋಡೆ, ಅತ್ಯಾಚಾರದಂತಹ ಪ್ರಕರಣಗಳಲ್ಲಿ ವಲಸೆ ಕಾರ್ಮಿಕರು ಹೆಚ್ಚಾಗಿ ಭಾಗಿಯಾಗಿರುವುದು ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 696 ಜನ ಕಾರ್ಮಿಕರು ನೊಂದಾವಣಿ ಮಾಡಿದ್ದರೆ, ಉಡುಪಿಯಲ್ಲಿ 1626 ಜನ ನೊಂದಾವಣೆ ಮಾಡಿದ್ದಾರೆ. ಇನ್ನು ನೊಂದಾವಣೆ ಮಾಡದ ವಲಸೆ ಕಾರ್ಮಿಕರ ಲೆಕ್ಕ ಇಲ್ಲ.

 

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 5
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search