• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿಮ್ಮ ಮನೆಯ ಆಸುಪಾಸು ವಲಸೆ ಕಾರ್ಮಿಕರಿದ್ದರೆ ಮುಂಜಾಗ್ರತೆ ವಹಿಸಿ!

Tulunadu News Posted On April 17, 2025


  • Share On Facebook
  • Tweet It

ಕರ್ನಾಟಕದಲ್ಲಿ ಬಿಹಾರ, ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಒಡಿಶಾ ಸಹಿತ ಉತ್ತರ ಭಾರತದ ಅನೇಕ ರಾಜ್ಯಗಳಿಂದ ವಲಸೆ ಬಂದು ಇಲ್ಲಿ ನೆಲೆಸಿರುವ ಕಾರ್ಮಿಕರ ಸಂಖ್ಯೆ ದೊಡ್ಡದಿದೆ. ಅವರಲ್ಲಿ ಹೆಚ್ಚಿನವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು, ಇಲ್ಲಿ ಒಂದೆರಡು ವರ್ಷ ನೆಲೆಸಿ ನಂತರ ಊರಿಗೆ ಮರಳುತ್ತಾರೆ. ನಂತರ ಮತ್ತೆ ಇಲ್ಲಿ ಕೆಲಸ ಇದೆ ಎಂದು ಗುತ್ತಿಗೆದಾರರು ಕರೆದರೆ ಮತ್ತೆ ಬರುತ್ತಾರೆ. ವಲಸೆ ಕಾರ್ಮಿಕರಲ್ಲಿ ಬಹುತೇಕರು ಪತ್ನಿಯನ್ನು ತಮ್ಮ ಊರಿನಲ್ಲಿಯೇ ಬಿಟ್ಟು ವರ್ಷಗಟ್ಟಲೆ ದೂರ ಇರುತ್ತಾರೆ. ಇಲ್ಲಿ ಬಂದು ಸ್ಲಂಗಳಲ್ಲಿ ವಾಸ ಮಾಡುತ್ತಾ, ಕೆಲವರು ನಿರ್ಮಾಣ ಹಂತದ ಜಾಗದ ಆಸುಪಾಸಿನಲ್ಲಿ ವಾಸಿಸುತ್ತಾ ಇರುತ್ತಾರೆ. ಇವರಲ್ಲಿ ಕೆಲವರಿಗೆ ಹಲವು ಕಾಲ ಪತ್ನಿ ಹತ್ತಿರ ಇರದೇ ತಮ್ಮ ಕಾಮಾಂಛೆಯನ್ನು ತಣಿಸಲು ಏನಾದರೂ ದಾರಿಯನ್ನು ಹುಡುಕುತ್ತಲೇ ಇರುತ್ತಾರೆ. ಇಂತವರ ಕೈಯಲ್ಲಿ ಪುಟ್ಟ ಮಕ್ಕಳು ಸಿಕ್ಕಿದರೆ ಆಗ ಅವರ ಮೇಲೆ ಎರಗುವ ಇವರಿಂದ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯೇ ಜೀವಂತ ಸಾಕ್ಷಿ.

ಇನ್ನು ಕೆಲವರು ಶಾಲೆ, ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳನ್ನು, ಉದ್ಯೋಗಕ್ಕಾಗಿ ಹೋಗಿ ರಾತ್ರಿ ಹಿಂದಿರುಗುವ ಮಹಿಳೆಯರ ಮೇಲೆ ಕಣ್ಣಾಕುವ ಘಟನೆಗಳು ನಡೆಯುತ್ತಲೇ ಇರುತ್ತದೆ. ಡ್ರಗ್ಸ್ ಅಮಲಿನಲ್ಲಿರುವ ಇವರಿಗೆ ಕ್ರೈಂ ಎನ್ನುವುದು ದೊಡ್ಡ ವಿಷಯವೇ ಅಲ್ಲ. ಪೊಲೀಸರ ಬಗ್ಗೆ ಹೆದರಿಕೆ ಇಲ್ಲದಿರುವುದು, ಗಾಂಜಾ ನಶೆಯಲ್ಲಿರುವುದು, ಲೈಂಗಿಕ ತೃಪ್ತಿಗಾಗಿ ಹಾತೊರೆಯುತ್ತಾ ಅಪರಾಧದಲ್ಲಿ ಸಲೀಸಾಗಿ ತೊಡಗುವ ಇವರುಗಳ ಬಗ್ಗೆ ಮುಂಜಾಗ್ರತೆಯನ್ನು ವಹಿಸಬೇಕಾಗಿರುವ ಅಗತ್ಯ ಸಭ್ಯ ಸಮಾಜಕ್ಕೆ ಇದೆ.

ಕೇಂದ್ರ ಸರಕಾರದ ಕಾರ್ಮಿಕರಿಗಾಗಿಯೇ ಇರುವ ಪೋರ್ಟಲ್ ನಲ್ಲಿ ನೋಂದಾವಣೆಯಾಗಿರುವ ಪ್ರಕಾರ ಕರ್ನಾಟಕದಲ್ಲಿ ವಲಸೆ ಮತ್ತು ಅಸಂಘಟಿತ ವಲಯದ ಗಿಗ್ ಕಾರ್ಮಿಕರು ಸೇರಿದರೆ 1,07,4,479 ಕಾರ್ಮಿಕರು ಕರ್ನಾಟಕದಲ್ಲಿದ್ದಾರೆ. ಇನ್ನು ಇದನ್ನು ಬಿಟ್ಟು ನೋಂದಾವಣೆ ಮಾಡಿಕೊಳ್ಳದ ಅದೆಷ್ಟೋ ವಲಸೆ ಕಾರ್ಮಿಕರು ನಮ್ಮ ರಾಜ್ಯದಲ್ಲಿದ್ದಾರೆ.

ವಲಸೆ ಹೋಗುವ ಮುನ್ನ ಅಥವಾ ರಾಜ್ಯ ತೊರೆಯುವ ಮುನ್ನ ಹೋಗುವ ರಾಜ್ಯ ಮತ್ತು ತಮ್ಮ ರಾಜ್ಯದಲ್ಲಿ ಕಡ್ಡಾಯವಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ. ಗುತ್ತಿಗೆದಾರರು ಕಾನೂನುಬಾಹಿರವಾಗಿ ವಲಸೆ ಕಾರ್ಮಿಕರನ್ನು ಕರೆ ತಂದು ತಮ್ಮ ಕಟ್ಟಡ ನಿರ್ಮಾಣ, ಕೃಷಿ ಚಟುವಟಿಕೆ, ಪ್ಲಾಂಟೇಶನ್, ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ವಲಸೆ ಕಾರ್ಮಿಕರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದರ ಬಗ್ಗೆ ಪ್ರತ್ಯೇಕ ಮಾಹಿತಿ ಇಲ್ಲಿಯವರೆಗೆ ಇಲ್ಲ. ಆದರೆ ಕೊಲೆ, ಹಲ್ಲೆ, ದರೋಡೆ, ಅತ್ಯಾಚಾರದಂತಹ ಪ್ರಕರಣಗಳಲ್ಲಿ ವಲಸೆ ಕಾರ್ಮಿಕರು ಹೆಚ್ಚಾಗಿ ಭಾಗಿಯಾಗಿರುವುದು ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 696 ಜನ ಕಾರ್ಮಿಕರು ನೊಂದಾವಣಿ ಮಾಡಿದ್ದರೆ, ಉಡುಪಿಯಲ್ಲಿ 1626 ಜನ ನೊಂದಾವಣೆ ಮಾಡಿದ್ದಾರೆ. ಇನ್ನು ನೊಂದಾವಣೆ ಮಾಡದ ವಲಸೆ ಕಾರ್ಮಿಕರ ಲೆಕ್ಕ ಇಲ್ಲ.

 

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search