• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಾಲಯಗಳ 1 ಟನ್ ಚಿನ್ನ ಕರಗಿಸಿ ಬ್ಯಾಂಕಿನಲ್ಲಿಟ್ಟ ತಮಿಳುನಾಡು ಸರಕಾರ!

Tulunadu News Posted On April 17, 2025
0


0
Shares
  • Share On Facebook
  • Tweet It

ಭಕ್ತರು ದೇವಾಲಯಗಳಿಗೆ ಕಾಣಿಕೆಯಾಗಿ ನೀಡಿದ ಒಂದು ಸಾವಿರ ಕೆಜಿಗೂ ಅಧಿಕ ಚಿನ್ನವನ್ನು ಕರಗಿಸಿ 24 ಕ್ಯಾರೆಟ್ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ಸರಕಾರದ ಮುಜರಾಯಿ ಇಲಾಖೆ ತಿಳಿಸಿದೆ.

ಹೀಗೆ ಬಿಸ್ಕತ್ ಗಳನ್ನಾಗಿ ಪರಿವರ್ತಿಸಲಾದ 1 ಟನ್ ಗೂ ಅಧಿಕ ಚಿನ್ನವನ್ನು ಬ್ಯಾಂಕುಗಳಲ್ಲಿ ಠೇವಣಿಯಾಗಿ ಹೂಡಿಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಚಿನ್ನದ ಠೇವಣಿಯಿಂದ ಬ್ಯಾಂಕುಗಳಿಂದ ವಾರ್ಷಿಕವಾಗಿ 17.82 ಕೋಟಿ ಬಡ್ಡಿ ಬರುತ್ತದೆ. ಈ ಬಡ್ಡಿಹಣವನ್ನು ಸಂಬಂಧಿತ ದೇವಾಲಯಗಳ ಅಭಿವೃದ್ಧಿಗೆ ಬಳಸಲಾಗುತ್ತದೆ. ಕಳೆದ ಮಾರ್ಚ್ 31 ರಂದು ಎಲ್ಲಾ ಚಿನ್ನವನ್ನು ( 10,74,123,488 ಗ್ರಾಂಗಳು) ಠೇವಣಿ ಇಡಲಾಗಿದೆ ಎಂದು ತಮಿಳುನಾಡು ಮುಜರಾಯಿ ಸಚಿವ ಪಿ.ಕೆ.ಶೇಖರ್ ಬಾಬು ತಿಳಿಸಿದ್ದಾರೆ.

ತಮಿಳುನಾಡಿನ 21 ಹಿಂದೂ ದೇವಾಲಯಗಳಿಗೆ ಸೇರಿದ ಚಿನ್ನ ಇದಾಗಿದ್ದು, ಅದರಲ್ಲಿ ತಿರುಚಿರಾಪಳ್ಳಿ ಜಿಲ್ಲೆಯ ಸಮಯಾಪುರಂನ ಅರಳ್ಮಿಗು ಮಾರಿಯಮ್ಮನ್ ದೇವಾಲಯದ ಚಿನ್ನವೇ ಜಾಸ್ತಿ ಇದೆ. 426.26 ಕೆ.ಜಿ ಚಿನ್ನವನ್ನು ಆ ದೇವಾಲಯದವರು ನೀಡಿದ್ದಾರೆ ಎಂದು ವಿವರಿಸಿದ್ದಾರೆ.

ಭಕ್ತರು ದೇವಸ್ಥಾನಗಳಿಗೆ ಆಭರಣ ಅಥವಾ ಮತ್ತೊಂದು ರೂಪದಲ್ಲಿ ನೀಡಲಾದ ಆದರೆ, ಅವುಗಳನ್ನು ದೇವರು/ದೇವತೆಗಳಿಗೆ ಬಳಸದೇ ತೆಗೆದು ಇಟ್ಟಿದ್ದ ಚಿನ್ನವನ್ನು ಮಾತ್ರ ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ಶೇಖರ್ ಬಾಬು ತಿಳಿಸಿದ್ದಾರೆ.

21 ಹಿಂದೂ ದೇವಾಲಯಗಳಿಂದ ಪಡೆಯಲಾದ ಚಿನ್ನವನ್ನು ಮುಂಬೈ ಸರಕಾರಿ ಟಂಕಸಾಲೆಯಲ್ಲಿ ಕರಗಿಸಿ ಚಿನ್ನದ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ಅವರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search